By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಾಟಕಕಾರ, ರಂಗಭೂಮಿ ಕಲಾವಿದ, ನಟ, ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Entertainment > ನಾಟಕಕಾರ, ರಂಗಭೂಮಿ ಕಲಾವಿದ, ನಟ, ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ
EntertainmentLatest

ನಾಟಕಕಾರ, ರಂಗಭೂಮಿ ಕಲಾವಿದ, ನಟ, ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ

artist, actor, director Yashwant Sardeshapande passes away

Published September 29, 2025
Share
2 Min Read
SHARE

ಬೆಂಗಳೂರು : ಕನ್ನಡ ರಂಗಭೂಮಿ, ಚಲನಚಿತ್ರ ಹಾಗೂ ಕಿರುತೆರೆಯಲ್ಲಿ ತನ್ನದೇ ಆದ ವಿಶಿಷ್ಟ ಗುರುತು ಮೂಡಿಸಿದ್ದ ಹಿರಿಯ ಕಲಾವಿದ ಯಶವಂತ ಸರದೇಶಪಾಂಡೆ ಇನ್ನು ನೆನಪು ಮಾತ್ರ. ಹಾಸ್ಯನಟ, ನಿರ್ದೇಶಕ, ನಾಟಕಕಾರ, ಸಂಭಾಷಣಾಕಾರ ಹಾಗೂ ರಚನೆಕಾರರಾಗಿ ತನ್ನ ಕಲೆಯ ಮೂಲಕ ಲಕ್ಷಾಂತರ ಜನರ ಮನ ಗೆದ್ದಿದ್ದ ಅವರು, ಹೃದಯಾಘಾತದಿಂದ ಅಲ್ಪಕಾಲದ ಅನಾರೋಗ್ಯದ ನಂತರ ಅಗಲಿದ್ದಾರೆ. ಅವರ ಅಗಲಿಕೆಯಿಂದ ರಂಗಭೂಮಿ ಮತ್ತು ಚಿತ್ರರಂಗ ಕಂಬನಿ ಮಿಡಿದಿದೆ. ಇವರ ಪತ್ನಿಯೂ ಖ್ಯಾತ ಕಿರುತೆರೆ ನಟಿ ಆಗಿದ್ದು, ಇಬ್ಬರೂ ಕನ್ನಡದ ರಿಯಾಲಿಟಿ ಶೋ ‘ಜೋಡಿ ನಂ. 1’ನಲ್ಲಿ ಭಾಗವಹಿಸಿ ಪ್ರೇಕ್ಷಕರ ಮನ್ನಣೆ ಗಳಿಸಿದ್ದರು.

ಬಾಲ್ಯ ಮತ್ತು ಶಿಕ್ಷಣ
ಯಶವಂತ ಸರದೇಶಪಾಂಡೆಯವರು 1965ರ ಜೂನ್ 13ರಂದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಹಳ್ಳಿಯಲ್ಲಿ ಜನಿಸಿದರು. ತಂದೆ ಶ್ರೀಧರರಾವ್ ಗೋಪಾಲರಾವ್ ಸರದೇಶಪಾಂಡೆ ಮತ್ತು ತಾಯಿ ಕಲ್ಪನಾದೇವಿ. ಬಾಲ್ಯದಿಂದಲೇ ನಾಟಕಗಳತ್ತ ಹೆಚ್ಚಿನ ಆಸಕ್ತಿ ಹೊಂದಿದ ಅವರು, ಹೆಗ್ಗೋಡಿನ ನಿನಾಸಂ ನಾಟಕ ಸಂಸ್ಥೆಯಿಂದ ಡಿಪ್ಲೊಮ ಪಡೆದರು. ನಂತರ ಅಮೇರಿಕದ ನ್ಯೂಯಾರ್ಕ್ ವಿಶ್ವವಿದ್ಯಾಲಯದಿಂದ ನಾಟಕ ರಚನೆ ಮತ್ತು ಚಲನಚಿತ್ರ ಸಂಭಾಷಣೆ ವಿಷಯದಲ್ಲಿ ವಿಶೇಷ ತರಬೇತಿ ಪಡೆದು, ತಮ್ಮ ಕಲೆಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದಾರೆ.

ರಂಗಭೂಮಿ ಸಾಧನೆ
ಅವರು ರಾಜ್ಯಾದ್ಯಂತ 60ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ. ಅಂಧಯುಗ, ಇನ್‌ಸ್ಪೆಕ್ಟರ್ ಜನರಲ್, ಮಿಡ್‌ಸಮರ್ ನೈಟ್ಸ್ ಡ್ರೀಮ್, ಬಾಡಿಗೆ ಮನೆ, ಕಿತ್ತೂರು ರಾಣಿ ಚೆನ್ನಮ್ಮ, ಪುಷ್ಪರಾಣಿ, ಗಲಿವರನ ಯಾತ್ರೆ, ಬೆಪ್ಪುತಕ್ಕಡಿ ಬೋಳೇ ಶಂಕರ, ತುಂಟ ಮಕ್ಕಳ ತಂಟೆ, ಮಕ್ಕಳೆರಡೇ ಇರಲಿ, ಕುಂಟಾ ಕುಂಟ ಕುರವತ್ತಿ ಮುಂತಾದ ನಾಟಕಗಳು ಅವರ ನಿರ್ದೇಶನದ ವಿಶಿಷ್ಟ ಉದಾಹರಣೆಗಳು. ರಂಗವರ್ತುಲ ಮತ್ತು ಬೇಂದ್ರೆ ರಂಗಾವಳಿಯ ಮುಖಾಂತರ ಕವಿ ಬೇಂದ್ರೆಯವರ ಎಲ್ಲಾ ನಾಟಕಗಳನ್ನು ರಂಗಕ್ಕೆ ತಂದು ಅಭೂತಪೂರ್ವ ಯಶಸ್ಸು ಪಡೆದಿದ್ದಾರೆ.

ಸರದೇಶಪಾಂಡೆ ರಾಜ್ಯಾದ್ಯಂತ 60ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದರು. ಅಂಧಯುಗ, ಇನ್‌ಸ್ಪೆಕ್ಟರ್ ಜನರಲ್, ಮಿಡ್‌ಸಮರ್ ನೈಟ್ಸ್ ಡ್ರೀಮ್, ಬಾಡಿಗೆ ಮನೆ, ಕಿತ್ತೂರು ರಾಣಿ ಚೆನ್ನಮ್ಮ, ಪುಷ್ಪರಾಣಿ, ಗಲಿವರನ ಯಾತ್ರೆ, ತುಂಟ ಮಕ್ಕಳ ತಂಟೆ, ಕುಂಟಾ ಕುಂಟ ಕುರವತ್ತಿ ಮುಂತಾದ ನಾಟಕಗಳು ಅವರ ನಿರ್ದೇಶನದ ವಿಶಿಷ್ಟ ಕೃತಿಗಳು. ಅವರು ರಂಗವರ್ತುಲ ಮತ್ತು ಬೇಂದ್ರೆ ರಂಗಾವಳಿ ಮುಖಾಂತರ ಕವಿ ಬೇಂದ್ರೆಯವರ ಎಲ್ಲಾ ನಾಟಕಗಳನ್ನು ರಂಗಕ್ಕೆ ತಂದು ಅಭೂತಪೂರ್ವ ಯಶಸ್ಸು ಕಂಡಿದ್ದರು.

ಹಾಸ್ಯನಟನಾಗಿ ಅವರ ಹೆಸರು ಮನೆಮಾತಾಗಿದ್ದು, ಆಲ್ ದಿ ಬೆಸ್ಟ್, ರಾಶಿಚಕ್ರ, ಸಹಿ ರೀ ಸಹಿ, ದಿಲ್ ಮಾಂಗೆ ಮೋರ್ ಮುಂತಾದ ನಗೆ ನಾಟಕಗಳ ಮೂಲಕ ಪ್ರೇಕ್ಷಕರನ್ನು ನಗಿಸಿ ಮನರಂಜಿಸಿದರು. ವಿಶೇಷವಾಗಿ ರಾಶಿಚಕ್ರ ನಾಟಕದಲ್ಲಿ ಎರಡು ಗಂಟೆಗಳ ಕಾಲ ಏಕವ್ಯಕ್ತಿ ಅಭಿನಯದ ಮೂಲಕ ಪ್ರೇಕ್ಷಕರ ಮನಗೆದ್ದ ಸಾಧನೆ, ಕನ್ನಡ ರಂಗಭೂಮಿಯಲ್ಲಿ ಅಪೂರ್ವ ದಾಖಲೆಯಾಗಿದೆ.

ರಂಗಭೂಮಿಯ ಹೊರತಾಗಿಯೂ ಸರದೇಶಪಾಂಡೆ ಕಿರುತೆರೆ ಮತ್ತು ಚಿತ್ರರಂಗದಲ್ಲೂ ತಮ್ಮದೇ ಆದ ಗುರುತು ಮೂಡಿಸಿದರು. ಯದ್ವಾ ತದ್ವಾ, ಬಣ್ಣದ ಬುಗುರಿ, ದಶಾವತಾರ, ಪರ್ವ, ತುಂತುರು ಧಾರಾವಾಹಿಗಳಲ್ಲಿ ನಟಿಸಿದ್ದು, ಸಿನಿಮಾ ಕ್ಷೇತ್ರದಲ್ಲಿಯೂ ತಮ್ಮ ಕಲೆ ಪ್ರದರ್ಶಿಸಿ ಅತಿಥಿ, ಮರ್ಮ, ಜೂಜಾಟ, ಸ್ಟೂಡೆಂಟ್, ಅಮೃತಧಾರೆ, ರಾಮ ಶ್ಯಾಮ ಭಾಮ ಚಿತ್ರಗಳಲ್ಲಿ ಅಭಿನಯಿಸಿದರು. ಅವರು ನಿರ್ಮಾಪಕರೂ ಆಗಿದ್ದು, ಐಡಿಯಾ ಮಾಡ್ಯಾರ ಎಂಬ ಚಲನಚಿತ್ರವನ್ನು ನಿರ್ಮಿಸಿದ್ದರು. ರಾಮಶ್ಯಾಮಭಾಮ ಚಿತ್ರಕ್ಕೆ ಸಂಭಾಷಣೆ ಬರೆದು, ಕಮಲಹಾಸನ್ ಅವರ ಪಾತ್ರಕ್ಕೆ ಉತ್ತರ ಕರ್ನಾಟಕದ ಆಡುಭಾಷೆ ಬಳಸುವ ಮೂಲಕ ಹೊಸ ಪ್ರಯೋಗವನ್ನೂ ಮಾಡಿದರು. ಅವರ ಅಗಲಿಕೆಯು ಚಿತ್ರಂಗ ಮತ್ತು ರಂಗಭೂಮಿಗೆ ತುಂಬಲಾರದ ನಷ್ಟವಾಗಿದೆ.

You Might Also Like

ನನಗೆ ಪ್ರಧಾನಿಯಾಗೋ ಆಫರ್ ಬಂದಿತ್ತು, ಆದರೆ ಅದು ನನ್ನ ಗುರಿ ಅಲ್ಲ : ನಿತಿನ್ ಗಡ್ಕರಿ

ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ದೇಶದಾದ್ಯಂತ ‘ಹರ್‌ ಘರ್‌ ತಿರಂಗಾ’ ಅಭಿಯಾನ

ಬಿಜೆಪಿ ಸೇರಿದ ಆಲ್‌ರೌಂಡರ್ ರವೀಂದ್ರ ಜಡೇಜಾ

ಹೃದಯಾಘಾತಕ್ಕೂ ಕೋವಿಡ್ ಲಸಿಕೆಗೂ ಯಾವುದೇ ರೀತಿಯ ಸಂಬಂಧವಿಲ್ಲ : ಅಧ್ಯಯನದಿಂದ ಸ್ಪಷ್ಟನೆ

ಭಾರತ ದಾಳಿ ನಡೆಸಿದರೆ ಆಲ್-ಔಟ್ ವಾರ್ ನಿಶ್ಚಯ : ಪಾಕ್​ ರಕ್ಷಣಾ ಸಚಿವ

TAGGED:Yashwant Sardeshapande
Share This Article
Facebook Copy Link Print
Previous Article Rain Alert ಅ.4ರವರೆಗೆ ಭಾರೀ ಮಳೆ ಸಾಧ್ಯತೆ, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ
Next Article ಕರೂರು ಕಾಲ್ತುಳಿತ ದುರಂತ : ಸಾವಿನ ಸಂಖ್ಯೆ 41ಕ್ಕೆ ಏರಿಕೆ, ಸಿಬಿಐ ತನಿಖೆಗೆ ಕೋರ್ಟ್‌ ಮೆಟ್ಟಿಲೇರಿದ ನಟ ವಿಜಯ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up