ತಿಪಟೂರು : ನಗರದ ಬೀದಿಯಲ್ಲಿ ಆಟವಾಡುತ್ತಿದ್ದ 6 ವರ್ಷದ ಮಗುವಿನ ಮೇಲೆ ದಾಳಿ ನಡೆಸಿದ ಬೀದಿ ನಾಯಿಗಳ ಹಿಂಡು ಮಗುವಿನ ತಲೆ ಹಾಗೂ ಹೊಟ್ಟೆಯನ್ನು ತಿಂದು ಹಾಕಿರುವ ಹೃದಯವಿದ್ರಾವಕ ಘಟನೆ ತಿಪಟೂರು ತಾಲೂಕಿನ ಕಸಬಾ ಹೋಬಳಿ ಅಯ್ಯನಬಾವಿ ಭೋವಿ ಕಾಲೋನಿಯಲ್ಲಿ ನಡೆದಿದೆ,
ಅಯ್ಯನಬಾವಿ ಗ್ರಾಮದ ನಿವಾಸಿ ಮಹಾಲಿಂಗಯ್ಯನವರ ಮಗಳು ಆರು ವರ್ಷದ ನವ್ಯ ಬೀದಿ ನಾಯಿಗಳ ದಾಳಿಗೆ ಒಳಗಾದ ನತದೃಷ್ಟೇ ಎಂದು ತಿಳಿದು ಬಂದಿದೆ, ಶನಿವಾರ ಮಧ್ಯಾಹ್ನ ಸುಮಾರು 4 ಗಂಟೆ ಸಮಯದಲ್ಲಿ ಅಯ್ಯನಬಾವಿ ಗ್ರಾಮದ ತಮ್ಮ ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ನವ್ಯಳ ಮೇಲೆ ಏಕಾಏಕಿ ಬೀದಿ ನಾಯಿಗಳ ಹಿಂದು ದಾಳಿ ನಡೆಸಿವೆ,
ನಾಳೆ ನಡೆಸಿದ ನಾಯಿಗಳು ಮಗುವಿನ ತಲೆಯ ಚರ್ಮವನ್ನು ಸಂಪೂರ್ಣವಾಗಿ ಕಿತ್ತು ತಿಂದಿವೆ, ಆರು ವರ್ಷದ ಮಗುವಿನ ತಲೆ ಹಾಗೂ ಹೊಟ್ಟೆಯನ್ನು ತಿಂದ ಬೀದಿ ನಾಯಿಗಳು, ಹೊಟ್ಟೆಯಲ್ಲಿ ಕಿತ್ತು ಕರುಳು ಆಚೆ ಬರುವಂತೆ ಬಿ ದಿನಗಳು ಮಾಡಿವೆ, ಮಗುವಿನ ಮುಖ ಹಾಗೂ ಕೈಕಾಲು ತೊಡೆ ಭಾಗವನ್ನು ಸಂಪೂರ್ಣ ಕಿತ್ತು ಹಾಕಿವೆ,
ರಕ್ತದ ಮಡುವಿನಲ್ಲಿ ಚೀರಾಡುತ್ತಿದ್ದ ಮಗುವನ್ನು ಕಂಡ ಸಾರ್ವಜನಿಕರು ನಾಯಿಗಳನ್ನು ಓಡಿಸಿ ಮಗುವನ್ನು ತಕ್ಷಣ ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು, ಮಗು ತೀವ್ರವಾಗಿ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು ಇಲ್ಲಿನ ಸಾರ್ವಜನಿಕರು ತಿಪಟೂರು ನಗರಸಭೆ ವಿರುದ್ಧ ಇಡೀ ಶಾಪ ಹಾಕಿದ್ದು ನಗರಸಭೆ ಅಧಿಕಾರಿಗಳಿಗೆ ನಾಚಿಕೆಯಾಗಬೇಕು ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ,,,
ವರದಿ : ನರಸಿಂಹರಾಜು ಸಂಪೂರ್ಣ ನ್ಯೂಸ್

