ಇಂದೋರ್ : ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾಮಗಾರಿಯಿಂದ ಸುಮಾರು 400 ಕೋಟಿ ರೂ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಪಾವತಿಸಲಾಗಿದೆ ಎಂದು ಶ್ರೀ ರಾಮ ಜನಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಹೇಳಿದ್ದಾರೆ.
ಇಂದೋರ್ನಲ್ಲಿ ನಡೆದ ಸಾರ್ವಜನಿಕ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು ವಿವಿಧ ನಿರ್ಮಾಣ ಕಾರ್ಯ ಪೂರ್ಣಗೊಂಡ ನಂತರವೇ ನಿಜವಾದ ತೆರಿಗೆ ಪಾವತಿ ಅಂಕಿಅಂಶವು ತಿಳಿಯಲಿದೆ ಎಂದು ಅವರು ಹೇಳಿದರು.
ನನ್ನ ಅಂದಾಜಿನ ಪ್ರಕಾರ ರಾಮ ಮಂದಿರ ನಿರ್ಮಾಣ ಕಾಮಗಾರಿಯಿಂದ ಸರ್ಕಾರಕ್ಕೆ ಜಿಎಸ್ಟಿಯಾಗಿ ಸುಮಾರು 400 ಕೋಟಿ ರೂ. ಬರಲಿದೆ. 70 ಎಕರೆಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ಸಂಕೀರ್ಣದಲ್ಲಿ ಒಟ್ಟು 18 ದೇವಾಲಯಗಳನ್ನು ನಿರ್ಮಿಸಲಾಗುವುದು. ಇದು ಮಹರ್ಷಿ ವಾಲೀಕಿ, ಶಬರಿ ಮತ್ತು ತುಳಸಿದಾಸರ ದೇವಾಲಯಗಳನ್ನು ಒಳಗೊಂಡಿರುತ್ತದೆ.
ಕಾಮಗಾರಿಗಾಗಿ 100ರಷ್ಟು ತೆರಿಗೆ ಕಟ್ಟುತ್ತೇವೆ, ಒಂದು ರೂಪಾಯಿಯೂ ತೆರಿಗೆ ಕಡಿಮೆಯಾಗುವುದಿಲ್ಲ ಎಂದ ಅವರು ಸಮಾಜದ ಸಹಕಾರದಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದ್ದು, ಎರಡು ಲಕ್ಷ ಭಕ್ತರು ಬಂದರೂ ಯಾರಿಗೂ ಸಮಸ್ಯೆಯಾಗದಂತೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವಿಶ್ವಹಿಂದೂ ಪರಿಷತ್ತಿನ ಅಂತಾರಾಷ್ಟ್ರೀಯ ಉಪಾಧ್ಯಕ್ಷರೂ ಆದ ರೈ ಹೇಳಿದರು.
ಅಯೋಧ್ಯೆಯ ರಾಮಜನಭೂಮಿಯಲ್ಲಿ ಮಂದಿರ ನಿರ್ಮಿಸುವ ಚಳವಳಿಯ ಸಂದರ್ಭದಲ್ಲಿ ಎಷ್ಟು ಜನರು ಜೀವ ಬಿಟ್ಟರು,ಆದರಿಂದ ಎಷ್ಟು ಕುಟುಂಬಗಳು ಮತ್ತು ಸಂಬಂಧಿಕರು ನೋವು ಅನುಭವಿಸಿದ್ದಾರೆಂದು ಹೇಳಲು ಆಗುವುದಿಲ ್ಲ. ಈ ಯಾಗ (ಆಂದೋಲನ) ಸ್ವಾತಂತ್ರ್ಯಕ್ಕಾಗಿ 1,000 ವರ್ಷಗಳ ಹಿಂದಿನ ಹೋರಾಟಕ್ಕಿಂತ ಕಡಿಮೆಯಿಲ್ಲ. ಇದು ಜನಕಲ್ಯಾಣಕ್ಕಾಗಿ ಹಮಿಕೊಳ್ಳಲಾಗಿತ್ತು ಎಂದು ಅವರು ಹೇಳಿದರು.
ಅಯೋಧ್ಯೆಯ ಸಂಕೀರ್ಣದಲ್ಲಿ ಶಿವ ಮಂದಿರ ನಿರ್ಮಾಣಕ್ಕಾಗಿ ಶಿವಲಿಂಗವನ್ನು ಅಂತಿಮಗೊಳಿಸಲು ಖಾರ್ಗೋನ್ ಜಿಲ್ಲೆಯ ಬಕಾವಾ ಗ್ರಾಮಕ್ಕೆ ರೈ ಭೇಟಿ ನೀಡಿದರು.ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿಯೊಬ್ಬರ ಸಲಹೆ ಮೇರೆಗೆ ನಾನು ಅಲ್ಲಿಗೆ ಹೋಗಿದ್ದೆ ಎಂದು ಅವರು ಹೇಳಿದ್ದಾರೆ.ನರ್ಮದಾ ನದಿಯ ದಡದಲ್ಲಿ ನೆಲೆಗೊಂಡಿರುವ ಬಕವಾವು ಪ್ರಪಂಚದಾದ್ಯಂತದ ದೇವಾಲಯಗಳಲ್ಲಿ ಸ್ಥಾಪಿಸಲಾದ ಸುಂದರವಾದ ಶಿವಲಿಂಗಗಳ ನಿರ್ಮಾಣಕ್ಕೆ ಹೆಸರುವಾಸಿಯಾಗಿದೆ.

