ರಾಮನಗರ : ಯಾದಗಿರಿಯ ಪಿಎಸ್ಐ ಅನುಮಾಸ್ಪದ ಸಾವು ಬೆನ್ನಲ್ಲೇ ಸಿಸಿಬಿ ಇನ್ಸ್ಪೆಕ್ಟರ್ ತಿಮ್ಮೆಗೌಡ ಆತ್ಮಹತ್ಯೆ ಶರಣಾಗಿದ್ದಾರೆ. ರಾಮನಗರದ ಕಗ್ಗಲಿಪುರದಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಿಬಿ ಆರ್ಥಿಕ ಅಪರಾಧ ವಿಭಾಗದ ಇನ್ಸ್ ಪೆಕ್ಟರ್ ತಿಮ್ಮೇಗೌಡ ರಾಮನಗರ ಜಿಲ್ಲೆ ಬಿಡದಿಯ ಕಗ್ಗಲಿಪುರದಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಇನ್ಸ್ ಪೆಕ್ಟರ್ ಸಾವಿನ ಹಿಂದೆ ಹಲವು ಅನುಮಾನ ಮೂಡಿವೆ. ಆತ್ಮಹತ್ಯೆ ವೈಯಕ್ತಿಕ ಕಾರಣಕ್ಕೋ ಅಥವಾ ಕೆಲಸದ ಒತ್ತಡವೋ ಎನ್ನುವ ಶಂಕೆ ಹುಟ್ಟಿಕೊಂಡಿದೆ.
ಕ್ತಿಯೊಬ್ಬರು ಬಿಡದಿ ಸಮೀಪದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿ ಕಲೆ ಹಾಕಿದಾಗ ಮೃತಪಟ್ಟಿರುವುದು ಪೊಲೀಸ್ ಅಧಿಕಾರಿ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡ ಬಿಡದಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಯಾದಗಿರಿಯಲ್ಲಿ 34 ವರ್ಷದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪರಶುರಾಮ್ ಮೃತಪಟ್ಟ ಮೂರು ದಿನಗಳ ನಂತರ ಈ ಘಟನೆ ನಡೆದಿದೆ.

