ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗೌರಿ – ಗಣೇಶ ಚತುರ್ಥಿಗೆ ಕೌಂಟ್ ಡೌನ್ ಶುರುವಾಗಿದೆ. ಮಾರುಕಟ್ಟೆಗೆ ಲಗ್ಗೆ ಇಟ್ಟ ವೆರೈಟಿ ವೆರೈಟಿ ಪಿಒಪಿ ಗಣೇಶ ಆಗಮಿಸಿದ್ದು ಬ್ಯಾನ್ ಆಗಿರುವ ಗಣೇಶ ಮೂರ್ತಿಗಳು ಇನ್ನೂ ರಾಜಾರೋಷವಾಗಿ ಮಾರಾಟವಾಗುತ್ತಿವೆ.
ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ತಮಗೆ ಏನೂ ಗೊತ್ತಿಲವೇನೋ ಎಂಬಂತೆ ಗಪ್ ಚುಪ್ ಆಗಿದ್ದು ನಗರಾದ್ಯಂತ ಪಿಒಪಿ ಗಣೇಶ ಮೂರ್ತಿಗಳ ಮಾರಾಟ ಎಗ್ಗಿಲ್ಲದೆ ಸಾಗಿದೆ.
ಬರೀ ಗೈಡ್ ಲೈನ್ಸ್ ಗೆ ಮಾತ್ರ ಸೀಮಿತವಾಗಿರುವ ಮಾಲಿನ್ಯ ನಿಯಂತ್ರಣ ಮಂಡಳಿ ಯಾವುದೇ ಕ್ರಮ ಕೈಗೊಳ್ಳದೇ ವ್ಯಾಪಾರಸ್ಥರಿಗೆ ಪಿಒಪಿ ಗಣೇಶ ಮೂರ್ತಿಗಳ ಮಾರಾಟಕ್ಕೆ ಅನುವುಮಾಡಿಕೊಟ್ಟಿದ್ದಾರೆ.
ಪಿಒಪಿ ಗಣೇಶ ಮೂರ್ತಿಗಳನ್ನ ಬ್ಯಾನ್ ಮಾಡಿ ಮೂರು ವರ್ಷಗಳೇ ಕಳೆದಿದೆ. ಆದರೆ ಪಿಒಪಿ ಗಣೇಶ ಮಾರಾಟ ಮಾತ್ರ ನಿಂತಿಲ್ಲ, ಇದೆಲ್ಲವನ್ನು ಅಧಿಕಾರಿಗಳು ಮೂಕಪ್ರೇಕ್ಷಕರಣೆ ನೋಡುತ್ತಿದ್ದಾರೆ. ಪರಿಸರಕ್ಕೆ ಹಾನಿಯುಟುಮಾಡುವ ಪಿಒಪಿ ಗಣೇಶ ಮೂರ್ತಿಗಳಿಗೆ ಕೊನೆ ಯಾವಾಗ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

