By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆಸಿಡ್ ದಾಳಿ ಮಾಡಿ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ದಾಳಿಗೊಳಗಾದ ಮಾಲೀಕನೇ ವಿಲನ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಮಂಡ್ಯ-Mandya > ಆಸಿಡ್ ದಾಳಿ ಮಾಡಿ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ದಾಳಿಗೊಳಗಾದ ಮಾಲೀಕನೇ ವಿಲನ್
ರಾಜ್ಯ-KarnatakaLatestಮಂಡ್ಯ-Mandya

ಆಸಿಡ್ ದಾಳಿ ಮಾಡಿ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ದಾಳಿಗೊಳಗಾದ ಮಾಲೀಕನೇ ವಿಲನ್

Big twist in acid attack and jewellery robbery case

Published February 19, 2026
Share
1 Min Read
SHARE

ಮಂಡ್ಯ, ಫೆಬ್ರವರಿ 19: ಆಸಿಡ್ ದಾಳಿ ಮಾಡಿ ಚಿನ್ನಾಭರಣ ದರೋಡೆ ನಡೆದಿದೆ ಎಂದು ದೂರು ನೀಡಿದ ಪ್ರಕರಣದಲ್ಲಿ ತಿರುವು ಎದುರಾಗಿದೆ. ಆಸಿಡ್ ದಾಳಿಗೆ ಒಳಗಾದೆನೆಂದು ಹೇಳಿಕೊಂಡಿದ್ದ ಚಿನ್ನದಂಗಡಿ ಮಾಲೀಕನೇ ಇದೀಗ ಜೈಲು ಸೇರಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿಯಲ್ಲಿ “ಮಹಾಲಕ್ಷ್ಮಿ ಜ್ಯುವೆಲರಿ” ಎಂಬ ಅಂಗಡಿ ನಡೆಸುತ್ತಿದ್ದ ಜಿತೇಂದ್ರ ಸಿಂಗ್ ಎಂಬ ವ್ಯಾಪಾರಿ, ತನ್ನ ಮೇಲೆ ದುಷ್ಕರ್ಮಿಗಳು ಆಸಿಡ್ ಎರಚಿ 170 ಗ್ರಾಂ ಚಿನ್ನ ಮತ್ತು 8 ಕೆಜಿ ಬೆಳ್ಳಿ ದೋಚಿಕೊಂಡು ಹೋಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದ. ಜೊತೆಗೆ ಅಂಗಡಿಯ ಸಿಸಿಟಿವಿ ಡಿವಿಆರ್ ಸಹ ಕಳುವಾಗಿದೆ ಎಂದು ಹೇಳಿದ್ದ.

ಆದರೆ ಘಟನೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಜಿತೇಂದ್ರನ ಮುಖದ ಮೇಲಿದ್ದ ಸುಟ್ಟ ಕಲೆಗಳನ್ನು ಗಮನಿಸಿ ಅನುಮಾನಗೊಂಡರು. ಕಣ್ಣಿಗೆ ಯಾವುದೇ ಹಾನಿಯಾಗದಂತೆ, ಮುಖದ ಮೇಲಷ್ಟೇ ರಾಸಾಯನಿಕ ಹರಡಿರುವುದು ಪೊಲೀಸರ ಗಮನ ಸೆಳೆದಿತ್ತು. ವಿಚಾರಣೆ ಕಠಿಣಗೊಳಿಸಿದಾಗ ಪ್ರಕರಣದ ಸತ್ಯಾಂಶ ಬಯಲಾಗಿದ್ದು, ಇದು ಸಂಪೂರ್ಣವಾಗಿ ರೂಪಿಸಿದ ನಾಟಕ ಎಂಬುದು ತಿಳಿದುಬಂದಿದೆ.

ಚಿನ್ನದ ಬೆಲೆ ಗಗನಕ್ಕೇರಿರುವ ಹಿನ್ನೆಲೆ, ಚಿನ್ನ ಖರೀದಿಗೆ ಪಡೆದಿದ್ದ ಸಾಲ ಮತ್ತು ಗ್ರಾಹಕರಿಂದ ಅಡವಿಟ್ಟಿದ್ದ ಚಿನ್ನದ ಒತ್ತಡದಿಂದ ತಪ್ಪಿಸಿಕೊಳ್ಳಲು ಜಿತೇಂದ್ರ ಈ ಖತರ್ನಾಕ್ ಪ್ಲಾನ್ ರೂಪಿಸಿದ್ದಾನೆ ಎನ್ನಲಾಗಿದೆ. ಚಿನ್ನಾಭರಣ ತಯಾರಿಕೆಗೆ ಬಳಸುವ, ತೀವ್ರ ಹಾನಿ ಮಾಡದ ರಾಸಾಯನಿಕವನ್ನು ಮುಖಕ್ಕೆ ಬಳಿದುಕೊಂಡು ಆಸಿಡ್ ದಾಳಿ ನಾಟಕವಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಲಗಾರರು ಹಾಗೂ ಚಿನ್ನ ಅಡವಿಟ್ಟ ಗ್ರಾಹಕರಿಗೆ ಅಂಗಡಿ ಕಳುವಾಗಿದೆ ಎಂಬ ನೆಪ ಹೇಳಿ, ಕೆಲವು ದಿನಗಳ ಬಳಿಕ ಅಂಗಡಿ ಮುಚ್ಚಿ ರಾಜಸ್ಥಾನಕ್ಕೆ ಮರಳಲು ಯತ್ನಿಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಆದರೆ ಜಿತೇಂದ್ರನ ಯೋಜನೆ ಮಂಡ್ಯ ಪೊಲೀಸರ ತೀವ್ರ ತನಿಖೆಗೆ ಸಿಲುಕಿದ್ದು, ಸತ್ಯಾಸತ್ಯತೆ ಬಹಿರಂಗವಾಗಿದೆ. ಜಿತೇಂದ್ರ ವಿರುದ್ಧವೇ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

ಈ ಸಂಬಂಧ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

You Might Also Like

70ft ಆಳದ ಬಾವಿಗೆ ಬಿದ್ದ ಬಾಲಕನ ಚಲನವಲನ ಸಿಸಿಟಿವಿಯಲ್ಲಿ ಸೆರೆ

ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ಪ್ರಧಾನಿಗಳ ಒತ್ತು; ಬಜೆಟ್ ನಲ್ಲಿ ₹3 ಲಕ್ಷ ಕೋಟಿ ಮೀಸಲು

‘ಮಾರ್ಟಿನ್’ ಚಿತ್ರದಲ್ಲಿ ಬಾಲಿವುಡ್ ನಟ

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ವಿಧಿವಶ..!

ಯೋಗೇಶ್ವರ್ 5 ಬಿ ಫಾರಂ ಇಟ್ಟುಕೊಂಡು ತಿರುಗಾಡುತ್ತಿದ್ದಾರೆ : ನಿಖಿಲ್ ಕುಮಾರಸ್ವಾಮಿ

TAGGED:Acid AttackMandya
Share This Article
Facebook Copy Link Print
Previous Article ಅಸ್ಸಾಂನ ಪ್ರಸಿದ್ಧ ಕಾಮಾಕ್ಯ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಿಯಾಂಕಾ ವಾದ್ರಾ, ಡಿಕೆಶಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಅಸ್ಸಾಂನ ಪ್ರಸಿದ್ಧ ಕಾಮಾಕ್ಯ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಿಯಾಂಕಾ ವಾದ್ರಾ, ಡಿಕೆಶಿ
ರಾಷ್ಟ್ರೀಯ-National
February 19, 2026
ಯಾವುದೇ ಕ್ಷಣದಲ್ಲಿ ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ
ವಿದೇಶ-International
February 19, 2026
ಮದುವೆ ಆಹ್ವಾನ ಪತ್ರಿಕೆ ಲೀಕ್ : ಖಾಸಗಿತನಕ್ಕೆ ಧಕ್ಕೆ ಎಂದು ವಿಜಯ್ –ರಶ್ಮಿಕಾ ಜೋಡಿ ಗರಂ
Entertainment
February 19, 2026
ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಎದುರಿಸುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ
ರಾಜ್ಯ-Karnataka
February 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up