ಅಮರಾವತಿ: ಆಂಧ್ರಪ್ರದೇಶದ (Andhra Pradesh) ಮುಖ್ಯಮಂತ್ರಿಯಾಗಿ ಎನ್ ಚಂದ್ರಬಾಬು ನಾಯ್ಡು ಪ್ರಮಾಣವಚನ (Oath) ಸ್ವೀಕರಿಸಿದ್ದಾರೆ.
ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು(N Chandrababu Naidu) ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಅಬ್ದುಲ್ ನಜೀರ್ ಅವರು ಚಂದ್ರಬಾಬು ನಾಯ್ಡು ಅವರಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದರು. ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಪರಮೇಶ್ವರ್ ನಿವಾಸದ ಬಳಿ ಸಾರಾ ಗೋವಿಂದ್ ಹೇಳಿಕೆ

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವ್ಯಾಪಕ ಭದ್ರತೆ ಕಲ್ಪಿಸಲಾಗಿದೆ. ಮೂರು ಪಕ್ಷಗಳ ಒಂದಕ್ಕಿಂತ ಹೆಚ್ಚು ಲಕ್ಷ ಕಾರ್ಯಕರ್ತರು ಮತ್ತು ಕೇಡರ್ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದ 3 ದಿನಗಳಲ್ಲಿ 3ನೇ ಉಗ್ರ ದಾಳಿ – ದೋಡಾ ದ ಸೇನಾ ಪೋಸ್ಟ್ ಮೇಲೆ ದಾಳಿ

ಈ ಬಾರಿ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲ 175 ಸ್ಥಾನಗಳ ಪೈಕಿ 135ಸ್ಥಾನಗಳನ್ನು ಗೆಲ್ಲುವ ಮೂಲಕ ಟಿಡಿಪಿ ಸಂಪೂರ್ಣ ಬಹುಮತ ಸಾಧಿಸಿದೆ. ಇನ್ನು ಒಡಿಶಾದಲ್ಲಿ ಬಿಜೆಪಿ 147ರಲ್ಲಿ 78 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತ ಸಾಧಿಸಿದೆ. ಇದನ್ನೂ ಓದಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಪರಮೇಶ್ವರ್ ನಿವಾಸದ ಬಳಿ ಸಾರಾ ಗೋವಿಂದ್ ಹೇಳಿಕೆ

