ಬೆಂಗಳೂರು: ಬಿಜೆಪಿ ವಿರುದ್ಧ 40% ಭ್ರಷ್ಟಾಚಾರ (40% Commission) ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ್ದಕ್ಕೆ ಕಾನೂನು ಸಂಘರ್ಷ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಜಾಮೀನು ಮಂಜೂರಾಗಿದೆ.
ಕಾಂಗ್ರೆಸ್, ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಜಾಹೀರಾತು ಪ್ರಕಟಿಸಿತ್ತು. ಇದರಿಂದಾಗಿ ಬಿಜೆಪಿ, ಕಾಂಗ್ರೆಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿತ್ತು. ಈ ಕೇಸಿನ ಹಿನ್ನೆಲೆ ಇಂದು ಸಿಎಂ ಮತ್ತು ಡಿಸಿಎಂ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗಿ ಸಾಮಾನ್ಯರಂತೆ ನ್ಯಾಯಲಯದ ಹೊರಗಡೆ ಕುಳಿತ್ತಿದ್ದರು. ನಾಯಕರ ಪರವಾಗಿ ಪರವಾಗಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಹಮ್ಮದ್ ಹಾಜರಿದ್ದರು. ಬಿಜೆಪಿ ಪರವಾಗಿ ವಕೀಲ ವಿನೋದ್ ಕುಮಾರ್ ಹಾಜರಾಗಿದ್ದರು. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಲೆಕ್ಕಾಧಿಕಾರಿ ಎಸ್ಐಟಿ ವಶ
ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಚುನಾವಣೆ ಸಮಯದಲ್ಲಿ ಬಿಜೆಪಿ ಸರ್ಕಾರದ ಮೇಲೆ ಮಾಡಿದ್ದ ಭ್ರಷ್ಟಾಚಾರ ಆರೋಪವನ್ನು ಆಗ ಕಾಂಗ್ರೆಸ್ ಮಾಡಿತ್ತು. ಕಾಂಗ್ರೆಸ್ ವಿರುದ್ಧ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕೇಶವ್ ಪ್ರಸಾದ್ ದೂರು ದಾಖಲಿಸಿದ್ದರು. ಇದನ್ನೂ ಓದಿ: ಪೋರ್ಶೆ ಕಾರು ಅಪಘಾತ ಪ್ರಕರಣ-ಆರೋಪಿ ಅಪ್ರಾಪ್ತನ ತಾಯಿ ಬಂಧನ
ಪ್ರಕರಣ ಸಂಬಂಧ ಸಿಎಂ, ಡಿಸಿಎಂಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ ಆಗಿತ್ತು. ಇದನ್ನೂ ಓದಿ: ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆಯಲ್ಲಿ 69.50 ರೂ. ಇಳಿಕೆ

