ಮೈಸೂರು: ಜೆಡಿಎಸ್ ಪರಿಸ್ಥಿತಿ ಬಸ್ ಸ್ಟ್ಯಾಂಡ್ ನಲ್ಲಿ ನಿಂತ ಬಸವಿ ಥರ ಆಗಿದೆ. ಬಿಜೆಪಿಯನ್ನ ಲವ್ ಮಾಡಿದ್ದು ಆಯಿತು. ಈಗ ಅವರನ್ನ ಅಲ್ಲೇ ಬಿಟ್ಟುಬಿಡಬೇಕು. ನಾನು ಕುಮಾರಸ್ವಾಮಿ ಜೊತೆಯಲ್ಲಿದ್ದಾಗ ಚನ್ನಪಟ್ಟಣದಲ್ಲಿ ನಾಲ್ಕು ಕೋಟಿ ರೂಪಾಯಿ ಖರ್ಚು ಮಾಡಿ 20 ಸಾವಿರದಿಂದ ಗೆದ್ದರು. ಈಗ ನಾನು ಅವರ ಜೊತೆಯಲ್ಲಿಲ್ಲ, 150 ಕೋಟಿ ರೂಪಾಯಿ ಖರ್ಚು ಮಾಡಿ 25 ಸಾವಿರದಿಂದ ಸೋತಿದ್ದಾರೆ. ಅಲ್ಲಿಗೆ ಮುಸ್ಲೀಂರು ಇರದಿದ್ದರೇ ಜೆಡಿಎಸ್ ಗೆ ಒಂದು ಸ್ಥಾನವೂ ಬರುವುದಿಲ್ಲ. ಅವತ್ತು 19 ಜನ ಗೆದ್ದಿದ್ದು ಮುಸ್ಲೀಂರಿಂದ ಎಂಬುದು ಈಗ ಸಾಭೀತಾಗಿದೆ ಎಂದು ನಿಖಿಲ್ ಹೇಳಿಕೆಗೆ ಟಾಂಗ್ ಕೊಟ್ಟರು.
ಮೈಸೂರಿನಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಜೆಡಿಎಸ್ 12 ರಿಂದ 13 ಶಾಸಕರು ಪಕ್ಷದ ವಿಚಾರದಲ್ಲಿ ಬೇಸರಗೊಂಡಿದ್ದಾರೆ. ಜಿ.ಟಿ.ದೇವೇಗೌಡರಂತೆ ಹಲವು ಜೆಡಿಎಸ್ ಶಾಸಕರು ನೋವು ನುಂಗಿದ್ದಾರೆ. ನಮ್ಮ ಶಾಸಕರ ನೋವು ನಿವಾರಿಸುವ ಜವಾಬ್ದಾರಿ ನನ್ನದು. ತೃತೀಯ ರಂಗ ಸ್ಥಾಪನೆಯ ಬಗ್ಗೆ ಮನಸ್ಸು ಮಾಡುತ್ತಿದ್ದೇವೆ ಎಂದು ಸಿಎಂ ಇಬ್ರಾಹಿಂ ಹೇಳಿದ್ದಾರೆ.
ಬೇಸರಗೊಂಡ ಶಾಸಕರನ್ನೆಲ್ಲಾ ಒಗ್ಗೂಡಿಸುವ ಕೆಲಸವನ್ನು ನಾನು ಶುರು ಮಾಡಿದ್ದೇನೆ. ಮುಂದೆ ಏನೇನ್ ಆಗುತ್ತೆ ನೋಡೊಣಾ. ನಮ್ಮ ಶಾಸಕರ ನೋವು ನಿವಾರಿಸುವ ಜವಾಬ್ದಾರಿ ನನ್ನದು.ಈಗಲೂ ನಾನೇ ಜೆಡಿಎಸ್ ರಾಜ್ಯಾಧ್ಯಕ್ಷ ಎಂದು ಗುಟುರು ಹಾಕಿದರು.
ಜೆಡಿಎಸ್ ಹೆಸರಿನಲ್ಲೇ ನಾವು ಇರಬೇಕಾ? ತೃತೀಯ ರಂಗಕ್ಕೆ ಬೇರೆ ಹೆಸರು ಕೊಡಬೇಕಾ. ಮುಂದೆ ಎಲ್ಲವನ್ನೂ ಚರ್ಚೆ ಮಾಡುತ್ತೇನೆ. ಈಗ ಇರುವ ಜೆಡಿಎಸ್ ಮನೆಗೆ ಬೆಂಕಿ ಬಿದ್ದಾಗಿದೆ. ಎಲ್ಲಾ ಜೆಡಿಸ್ ಶಾಸಕರು ಅವರವರ ಕ್ಷೇತ್ರ ಕಾಪಾಡಿಕೊಳ್ಳಬೇಕಿದೆ. ಹೀಗಾಗಿ ಒಬ್ಬೊಬ್ಬರೇ ಮಾತು ಶುರು ಮಾಡಿದ್ದಾರೆ. ಕುಮಾರಸ್ವಾಮಿ ಈಗಲಾದರೂ ಬುದ್ದಿ ಕಲಿಯಬೇಕು. ಜೆಡಿಎಸ್ನ್ನು ಫ್ಯಾಮಿಲಿ ಕಂಪನಿ ಮಾಡುವುದನ್ನ ಬಿಡಬೇಕು. ಆಗ ಮಾತ್ರ ಜೆಡಿಎಸ್ ನ ಮೂಲ ಅಸ್ತಿತ್ವ ಸಾಧ್ಯ.
ಮುಂದುವರೆದು ಈಗ ನಾವೇನು ಕಾಂಗ್ರೆಸ್ ಜೊತೆ ಹೋಗಲು ನಿರ್ಧಾರ ಮಾಡಿಲ್ಲ. ತೃತೀಯ ರಂಗ ಸ್ಥಾಪನೆಯ ಬಗ್ಗೆ ಮನಸ್ಸು ಮಾಡುತ್ತಿದ್ದೇವೆ ಅಷ್ಟೇ. ಮುಂದಿನ ದಿನಗಳಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದು ಮೈಸೂರಿನಲ್ಲಿ ಸಿ.ಎಂ ಇಬ್ರಾಹಿಂ ಹೇಳಿಕೆ ನೀಡಿದ್ದಾರೆ.

