ಬೆಂಗಳೂರು : ದಿವಾಳಿಯತ್ತ ಮುಖಮಾಡಿರುವ ಕಾಂಗ್ರೆಸ್ ಸರ್ಕಾರ ಎಂದು ಜೆಡಿಎಸ್ ಆರೋಪ ಮಾಡಿದೆ. ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಉಚಿತ, ಉಚಿತ ಎಂದು ಭರವಸೆ ನೀಡಿ ಅಧಿಕಾರಕ್ಕೇರಿದ ಕಾಂಗ್ರೆಸ್, ವಚನ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಮತದಾರರಿಗೆ ಮಹಾದ್ರೋಹ ಎಸಗಿದೆ ಎಂದು ಆಪಾದಿಸಿದೆ.
ಮಹಿಳೆಯರಿಗೆ ಪ್ರತಿ ತಿಂಗಳು ನೀಡಬೇಕಾಗಿದ್ದ 2 ಸಾವಿರ ರೂ. ಗೃಹಲಕ್ಷ್ಮಿ ಹಣವನ್ನು ಕಳೆದ 3 ತಿಂಗಳಿಂದ ನೀಡಲಾಗದೇ ರಾಜ್ಯ ಕಾಂಗ್ರೆಸ್ ಸರ್ಕಾರ ಪಾಪರ್ ಆಗಿದೆ ಎಂದು ಟೀಕಿಸಿದೆ.
ಪ್ರತಿ ತಿಂಗಳೂ ತಾಂತ್ರಿಕ ಸಮಸ್ಯೆ ಎನ್ನುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರೇ, ಸದ್ದಿಲ್ಲದೆ ರಾಜ್ಯದಲ್ಲಿ 2 ಲಕ್ಷ ಮಹಿಳೆಯರಿಗೆ 2,000 ರೂ. ಗೃಹಲಕ್ಷ್ಮಿ ಹಣ ಸ್ಥಗಿತಗೊಳಿಸಿದ್ದೀರಿ.. ನಿಮ್ಮದು ವಚನಭ್ರಷ್ಟ ಸರ್ಕಾರ ಎಂದು ಮೂದಲಿಸಿದೆ.

