ಕಲಬುರಗಿ: ಇಲ್ಲಿನ ಹೋಟೆಲ್ವೊಂದರಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡಿದ್ದು (LPG Cylinder Blast), ಭಾರೀ ಅನಾಹುತ ಸಂಭವಿಸಿದೆ. 11 ಮಂದಿ ಕಾರ್ಮಿಕರು ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.
ಬೆಳ್ಳಂ ಬೆಳಗ್ಗೆ ಕಲಬುರಗಿಯ (Kalaburagi) ಸಪ್ತಗಿರಿ ಆರೆಂಜ್ ಹೋಟೆಲ್ ನಲ್ಲಿ ಘಟನೆದು ನಾಲ್ವರು ಹೋಟೆಲ್ ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ, ಕಾರ್ಮಿಕರನ್ನು ರಕ್ಷಿಸುವ ಕೆಲಸ ಮಾಡಿದ್ದಾರೆ. ಇದನ್ನೂ ಓದಿ: ಹೈದರಾಬಾದ್: ಕಾಂಗ್ರೆಸ್ ಶಾಸಕನ ಪತ್ನಿ, ಶಾಲಾ ಶಿಕ್ಷಕಿ ನೇಣಿಗೆ ಶರಣು
ಘಟನೆಯಲ್ಲಿ ಕಾರ್ಮಿಕರಾದ ರಾಕೇಶ್, ಶಂಕರ್, ಗುರುಮೂರ್ತಿ, ಪ್ರಶಾಂತ್, ಸತ್ಯವಾನ ಶರ್ಮ್, ಅಪ್ಪಾರಾಯ, ಮಲ್ಲಿನಾಥ್, ವಿಠಲ್, ಮಹೇಶ್ ಲಕ್ಷ್ಮಣ ಸೇರಿ 10 ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ದಾಲ್ ಸರೋವರ ತೀರದಲ್ಲಿ ನರೇಂದ್ರ ಮೋದಿ ಯೋಗ
ಬ್ರಹ್ಮಪುರ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: ಆರೋಗ್ಯದ ದೃಷ್ಟಿಯಿಂದ ಯೋಗ ಬಹಳ ಒಳ್ಳೆಯದು, ಪ್ರತಿಯೊಬ್ಬರು ಮಾಡಬೇಕು : ಮಹದೇವಪ್ಪ

