By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದೆಹಲಿ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ, ಒಂದೇ ಹಂತದಲ್ಲಿ ಮತದಾನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ದೆಹಲಿ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ, ಒಂದೇ ಹಂತದಲ್ಲಿ ಮತದಾನ

LatestMain PostTop Storiesರಾಷ್ಟ್ರೀಯ-National

ದೆಹಲಿ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ, ಒಂದೇ ಹಂತದಲ್ಲಿ ಮತದಾನ

Delhi Assembly Election dates announced: Voting on Feb 5, results on Feb 8

Published January 7, 2025
Share
4 Min Read
Delhi Election Date
SHARE

ನವದೆಹಲಿ : ರಾಷ್ಟ್ರ ರಾಜಧಾನಿ ನವದೆಹಲಿಯ ವಿಧಾನಸಭಾ ಚುನಾವಣೆಗೆ ಆಯೋಗ ದಿನಾಂಕ ಘೋಷಣೆ ಮಾಡಿದೆ. ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಫೆ.5 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಫೆ 8 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಯ ಅವಧಿ ಫೆ.23ರಂದು ಅಂತ್ಯಗೊಳ್ಳಲಿದ್ದು, ಅದಕ್ಕೂ ಮೊದಲೇ ಚುನಾವಣೆ ನಡೆಯಬೇಕಾದ ಹಿನ್ನಲೆಯಲ್ಲಿ ಸೋಮವಾರ ಭಾರತೀಯ ಮುುುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಪ್ರಕಟಿಸಿದರು.

ದೆಹಲಿಯಲ್ಲಿ ಒಟ್ಟು ವಿಧಾನಸಭಾ ಕ್ಷೇತ್ರಗಳು 70. ಇವುಗಳಲ್ಲಿ ಸಾಮಾನ್ಯ 58, ಎಸ್ಸಿ 12. ಪ್ರಸ್ತುತ ಇರುವ ವಿಧಾನಸಭೆಯ ಅವಧಿ 23, 2025ರಂದು ಮುಕ್ತಾಯಗೊಳ್ಳಲಿದೆ. ಒಟ್ಟು ಮತಗಟ್ಟೆಗಳು 13,033. 2697 ಪ್ರದೇಶಗಳಲ್ಲಿ ಇವುಗಳನ್ನು ಸ್ಥಾಪನೆ ಮಾಡಲಾಗುತ್ತದೆ. ಇವುಗಳಲ್ಲಿ ನಗರ ಪ್ರದೇಶ 13,033. ಪ್ರತಿ ಮತಗಟ್ಟೆಗೆ 1191 ಮತದಾರರು ಇರಲಿದ್ದಾರೆ. ಮಹಿಳೆಯರು 70, ಅಂಗವಿಕಲರು 70 ಮತಗಟ್ಟೆಗಳನ್ನು ನಿರ್ವಹಣೆ ಮಾಡಲಿದ್ದಾರೆ.

ತಕ್ಷಣವೇ ದೆಹಲಿಯಲ್ಲಿ ಮಾದರಿ ನೀತಿ ಸಂಹಿತಿ ಜಾರಿಯಾಗಿದ್ದು, ಇನ್ನು ಮುಂದೆ ಯಾವುದೇ ರಾಜಕೀಯ ಪಕ್ಷಗಳು ಮತದಾರರಿಗೆ ಅಮಿಷವೊಡ್ಡುವ ಇಲ್ಲವೇ ಆಶ್ವಾಸನೆಗಳನ್ನು ನೀಡುವುದಕ್ಕೆ ಆಯೋಗ ಕಟ್ಟುನಿಟ್ಟಾಗಿ ನಿಷೇಧ ಮಾಡಿದೆ.

ದೆಹಲಿಯಲ್ಲಿ ಈ ಬಾರಿ ಒಟ್ಟ್ಟು 1.55 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಇದರಲ್ಲಿ ಪುರುಷರು 83.49 ಲಕ್ಷ, 71.74 ಲಕ್ಷ ಮಹಿಳೆಯರು, 25.89 ಲಕ್ಷ (20-29) ಯುವ ಮತದಾರರು. ಮೊದಲ ಬಾರಿಯ ಮತದಾರರು 2.08 ಲಕ್ಷ. ಅಂಗವಿಕಲರು 79,436, 100 ವರ್ಷ ಮೀರಿದ 830, ತೃತೀಯ ಲಿಂಗಿಗಳು 1,261, 85 + ವಯಸ್ಸಿನ 1.09 ಲಕ್ಷ ಮತದಾರರು ಸೇರ್ಪಡೆಯಾಗಿದ್ದಾರೆ.

ಮನೆಯಿಂದಲೇ ಮತದಾನ :
85 ವರ್ಷ ಮೇಲ್ಪಟ್ಟ ಮತದಾರರು ಮತ್ತು ದಿವ್ಯಾಂಗರು ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ ಸೌಲಭ್ಯವಿರುತ್ತದೆ. ಮತದಾನದ ಅನುಕೂಲಕ್ಕಾಗಿ ಮತದಾನ ಕೇಂದ್ರಗಳಲ್ಲಿ ಸ್ವಯಂಸೇವಕರು, ಗಾಲಿಕುರ್ಚಿಗಳು ಮತ್ತು ರ್ಯಾಂಪ್‍ಗಳನ್ನು ಮಾಡಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ಇವಿಎಂ ಟ್ಯಾಂಪರಿಂಗ್ ಆರೋಪಗಳು ಆಧಾರರಹಿತ
ಮತ ಎಣಿಕೆಗೆ ಇವಿಎಂ ಸಂಪೂರ್ಣ ಸುರಕ್ಷಿತವಾಗಿದೆ, ಇವಿಎಂ ಟ್ಯಾಂಪರಿಂಗ್ ಆರೋಪಗಳು ಆಧಾರರಹಿತವಾಗಿವೆ ಎಂದರು. ಚುನಾವಣಾ ಪ್ರಕ್ರಿಯೆಗಳ ಕುರಿತು ಹಲವು ಅನುಮಾನಗಳಿವೆ. ಇವುಗಳಿಗೆ ದೆಹಲಿ ಚುನಾವಣೆ ಮೂಲಕ ಮತ್ತೆ ಉತ್ತರ ನೀಡಲಾಗುತ್ತದೆ. 5 ಗಂಟೆಯ ಬಳಿಕ ಮತದಾನ ಪ್ರಮಾಣ ಹೆಚ್ಚಾಗುತ್ತದೆ, ಇವಿಎಂ ಬಗ್ಗೆಯೂ ಹಲವು ಅನುಮಾನ ವ್ಯಕ್ತಪಡಿಸಲಾಗುತ್ತಿದೆ. 2024ರ ಲೋಕಸಭೆ ಚುನಾವಣೆ ಬಳಿಕ ಈ ಮಾದರಿ ಎಲ್ಲಾ ಗೊಂದಲಗಳನ್ನು ಬಗೆಹರಿಸಲಾಗಿದೆ ಎಂದು ವದಂತಿಗಳಿಗೆ ತೆರೆ ಎಳೆದರು.

ಚುನಾವಣಾ ಪ್ರಕ್ರಿಯೆ, ಮತದಾನ ಪಾರದರ್ಶಕವಾಗಿ ನಡೆಯುತ್ತಿದೆ. ಯಾವುದೇ ವೈರಸ್ ಬಳಕೆ ಮಾಡಿಕೊಂಡು ಇವಿಎಂ ಹ್ಯಾಕ್ ಮಾಡಲು ಸಾಧ್ಯವಿಲ್ಲ. ಇದನ್ನು ಪದೇ ಪದೇ ಹೇಳಲಾಗುತ್ತಿದೆ. ಮತ್ತೆ ಮತ್ತೆ ಸ್ಪಷ್ಟನೆಗಳನ್ನು ನೀಡಲಾಗುತ್ತದೆ ಎಂದು ರಾಜೀವ್ ಕುಮಾರ್ ಸ್ಪಷ್ಟಪಡಿಸಿದರು.

ಪಾರದರ್ಶಕ ಚುನಾವಣೆ ನಡೆಸುವುದು ನಮ್ಮ ಜವಾಬ್ದಾರಿ, ಕರ್ತವ್ಯ. ಸಂಜೆ 6 ಗಂಟೆಯ ಬಳಿಕ ಮತಗಟ್ಟೆ ಹೊರಗೆ ನಿಂತ ಎಲ್ಲರಿಗೂ ಟೋಕನ್ ವಿತರಣೆ ಮಾಡಿ ಅವರ ಮತಗಳನ್ನು ಪಡೆದು, ಮತದಾನವನ್ನು ಮುಕ್ತಾಯ ಮಾಡಲಾಗುತ್ತದೆ ಎಂದು ರಾಜೀವ್ ಕುಮಾರ್ ಹೇಳಿದರು.

ಆಮ್ ಆದ್ಮಿ ಅಭ್ಯರ್ಥಿಗಳ ಘೋಷಣೆ :
ಆಮ್ ಆದ್ಮಿ ಪಕ್ಷ ಎಲ್ಲಾ 70 ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಜೊತೆಗೆ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ನವದೆಹಲಿ ಕ್ಷೇತ್ರದಿಂದ ಹಾಗೂ ಹಾಲಿ ಸಿಎಂ ಅತಿಶಿ ಅವರು ಕಲ್ಕಾಜಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಜೈಲು ಸೇರಿ ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಚುನಾವಣೆ ನಡೆಯುತ್ತಿದೆ.

ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಬಾರಿಯೂ ಹೊಸದಿಲ್ಲಿಯಿಂದ ಸ್ಪರ್ಧಿಸುತ್ತಿದ್ದಾರೆ. ಅವರ ಸ್ಪರ್ಧೆ ಕಾಂಗ್ರೆಸ್ನ ಸಂದೀಪ್ ದೀಕ್ಷಿತ್ ಮತ್ತು ಬಿಜೆಪಿಯ ಪ್ರವೇಶ್ ವರ್ಮಾ ಅವರೊಂದಿಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ತಮ್ಮ ಸ್ಟಾರ್ ನಾಯಕರನ್ನು ಕಣಕ್ಕಿಳಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಹೋರಾಟ ರೋಚಕ ತಿರುವು ಪಡೆದುಕೊಂಡಿದೆ. ಮತ್ತೊಂದೆಡೆ ಮುಖ್ಯಮಂತ್ರಿ ಅತಿಶಿ ಕಲ್ಕಾಜಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಅವರು ಕಾಂಗ್ರೆಸ್ನ ಅಲ್ಕಾ ಲಂಬಾ ಮತ್ತು ದಕ್ಷಿಣ ದೆಹಲಿಯ ಬಿಜೆಪಿ ಮಾಜಿ ಸಂಸದ ರಮೇಶ್ ಬಿಧುರಿ ಅವರಿಂದ ಸ್ಪರ್ಧೆ ಎದುರಿಸುತ್ತಿದ್ದಾರೆ.

ಬಿಜೆಪಿ 29 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ :
ಬಿಜೆಪಿ 29 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಎಎಪಿ ತೊರೆದು ಬಿಜೆಪಿ ಸೇರಿದ್ದ ಕೈಲಾಶ್ ಗೆಹ್ಲೋಟ್ ಬಿಜವಸನ್ನಿಂದ ಸ್ಪರ್ಧಿಸುತ್ತಿದ್ದಾರೆ. ಪಟೇಲ್ ನಗರದಿಂದ ರಾಜ್ ಕುಮಾರ್, ದೆಹಲಿಯ ಮಾಜಿ ಕಾಂಗ್ರೆಸ್ ಮುಖ್ಯಸ್ಥ ಅರವಿಂದ್ ಸಿಂಗ್ ಲವ್ಲಿ ಗಾಂಧಿ ನಗರದಿಂದ ಸ್ಪರ್ಧಿಸಲಿದ್ದಾರೆ.

ಕಾಂಗ್ರೆಸ್ 48 ಅಭ್ಯರ್ಥಿಗಳ ಘೋಷಣೆ :
ಕಾಂಗ್ರೆಸ್ 48 ಅಭ್ಯರ್ಥಿಗಳನ್ನು ಘೋಷಿಸಿದ್ದು, ಮತ್ತೊಂದು ಪಟ್ಟಿ ಹೊರಬೇಕಿದೆ. ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್ ಮಗ ಸಂದೀಪ್ ದೀಕ್ಷಿತ್ ಈ ಬಾರಿ ವಿಧಾನಸಭಾ ಚುನಾವಣೆಗೆ ಇಳಿಯಲಿದ್ದಾರೆ. ಈ ಹಿಂದೆ ಎರಡು ಬಾರಿ ಸಂಸದರಾಗಿದ್ದ ದೀಕ್ಷಿತ್ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಣಕ್ಕಿಳಿಯಲಿದ್ದಾರೆ. 2013 ಮತ್ತ 2015ರಲ್ಲಿ ಕೇಜ್ರಿವಾಲ್ ಅವರು ಶೀಲಾ ದೀಕ್ಷಿತ್ ವಿರುದ್ದ ಜಯ ಸಾಧಿಸಿದ್ದರು.

ಮಹಾರಾಷ್ಟ್ರ ಹಾಗೂ ಜಾರ್ಖಾಂಡ್ ವಿಧಾನಸಭಾ ಕ್ಷೇತ್ರಗಳಲ್ಲಿ ಸೋಲು ಕಂಡಿರುವ ಕಾಂಗ್ರೆಸ್ ನೇತೃತ್ವದ ಇಚಿಡಿ ಮೈತ್ರಕೂಟ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಆದರೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ ಎಂದು ಆಮ್‍ಆದ್ಮಿ ಘೋಷಣೆ ಮಾಡಿರುವುದರಿಂದ ತ್ರಿಕೋನ ಸ್ಪರ್ಧೆ ಏರ್ಪಡುವುದು ಖಚಿತವಾಗಿದೆ.

You Might Also Like

ಉತ್ತರ ಪ್ರದೇಶದ ಲಕ್ನೋದಲ್ಲಿ ಮೂರಂತಸ್ತಿನ ಕಟ್ಟಡ ಕುಸಿತ, 8 ಮಂದಿ ಸಾವು

ಡಿಕೆ ಶಿವಕುಮಾರ್ ಆರ್‌ಎಸ್‌ಎಸ್ ಪ್ರಾರ್ಥನೆ ಹಾಡಿದ್ದು ತಪ್ಪು, ಕ್ಷಮೆ ಕೇಳಬೇಕು : ಬಿಕೆ ಹರಿಪ್ರಸಾದ್

Hyderabad : ಚಾರ್‌ಮಿನಾರ್ ಬಳಿಯ ಕಟ್ಟಡವೊಂದರಲ್ಲಿ ಬೆಂಕಿ, ಕನಿಷ್ಠ 17 ಮಂದಿ ಸಾವು

ಕೋವಿಡ್ ಅವ್ಯವಹಾರ ತನಿಖೆಗೆ ಎಸ್.ಐ.ಟಿ, ಸಂಪುಟ ಉಪಸಮಿತಿ

ಸಿಎಂ ಮತ್ತು ಶಾಸಕರು ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿದ್ದಾರೆ : ವಿಜಯೇಂದ್ರ

TAGGED:Delhi Assembly ElectionDelhi Election 2025
Share This Article
Facebook Copy Link Print
Previous Article Young man catches leopard by its tail and puts it in a cage ಚಿರತೆಯ ಬಾಲ ಹಿಡಿದು ಬೋನಿಗೆ ಹಾಕಿದ ಯುವಕ, ಅಚ್ಚರಿಗೊಳಗಾದ ಗ್ರಾಮಸ್ಥರು
Next Article Aero India 2025 - Air Show ಫೆ.10 ರಿಂದ ಬೆಂಗಳೂರಿನಲ್ಲಿ ಏಷ್ಯಾದ ಅತಿದೊಡ್ಡ ಏರ್‌ ಶೋ ಆರಂಭ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up