ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಶುಕ್ರವಾರ ಕೇಂದ್ರ ತನಿಖಾ ದಳಕ್ಕೆ (CBI) ನೋಟಿಸ್ ಜಾರಿ ಮಾಡಿದೆ.
ನ್ಯಾ. ನೀನಾ ಬನ್ಸಾಲ್ ಕೃಷ್ಣ ಸಿಬಿಐನ ಪ್ರತಿಕ್ರಿಯೆಯನ್ನು ಕೋರಿದ್ದು, ಪ್ರಕರಣದ ವಿಚಾರಣೆಯನ್ನು ಜುಲೈ 17 ಕ್ಕೆ ಮುಂದೂಡಿದ್ದಾರೆ. ಇದನ್ನೂ ಓದಿ: ಟಾಲಿವುಡ್ ನಟ ರಾಜ್ ತರುಣ್ ವಿರುದ್ಧ ಪ್ರೇಯಸಿಯಿಂದಲೇ ದೂರು
ಅರವಿಂದ್ ಕೇಜ್ರಿವಾಲ್ ಅವರು ಮೊದಲು ವಿಚಾರಣಾ ನ್ಯಾಯಾಲಯಕ್ಕೆ ತೆರಳುವ ಬದಲು ನೇರವಾಗಿ ಜಾಮೀನಿಗಾಗಿ ಹೈಕೋರ್ಟ್ (High Court) ಮೊರೆ ಹೋಗಿದ್ದಾರೆ ಎಂಬ ಅಂಶವನ್ನು ನ್ಯಾಯಾಲಯ ಗಮನಿಸಿದೆ. ಈ ಅಂಶವನ್ನು ಮುಂದಿನ ಹಂತದಲ್ಲಿ ಪರಿಗಣಿಸಲಾಗುವುದು. ಇದಕ್ಕೂ ಮೊದಲು ಸಿಬಿಐ ಒಂದು ವಾರದಲ್ಲಿ ಉತ್ತರವನ್ನು ನೀಡಬೇಕು ಎಂದು ಹೈಕೋರ್ಟ್ ಹೇಳಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಕೇಜ್ರಿವಾಲ್ ಅವರನ್ನು ಜೂನ್ 26 ರಂದು ಸಿಬಿಐ ಬಂಧಿಸಿತ್ತು. ಜೂನ್ 20 ರಂದು ಇಡಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ವಿಚಾರಣಾ ನ್ಯಾಯಾಲಯದಿಂದ ಜಾಮೀನು ನೀಡಲಾಯಿತು. ಆದರೆ ನಂತರ ಜೂನ್ 25 ರಂದು ದೆಹಲಿ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿತು. ಇದನ್ನೂ ಓದಿ: ಮಂಡ್ಯ: 100 ಅಡಿ ಭರ್ತಿಯಾದ ಕೆಆರ್ಎಸ್ ಡ್ಯಾಂ
ಈ ನಡುವೆ ಜೂನ್ 26ರಂದು ಸಿಬಿಐ ಕೇಜ್ರಿವಾಲ್ ಅವರನ್ನು ಬಂಧಿಸಿದ್ದು, ಜೂನ್ 29ರವರೆಗೆ ಸಿಬಿಐ ಕಸ್ಟಡಿಗೆ ನೀಡಿದೆ. ಜೂನ್ 29 ರಂದು ಸಿಬಿಐ ಕಸ್ಟಡಿ ವಿಸ್ತರಣೆಯನ್ನು ಕೋರದ ಹಿನ್ನೆಲೆಯಲ್ಲಿ ಜುಲೈ 12 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಯಿತು. ಸಿಬಿಐ ಬಂಧನ ಪ್ರಶ್ನಿಸಿ ಮತ್ತು ಜಾಮೀನು ಕೋರಿ ಕೇಜ್ರಿವಾಲ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

