ನವದೆಹಲಿ: ಫೆಬ್ರವರಿ 5ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಬಿಜೆಪಿ, ಕಾಂಗ್ರೆಸ್ ಹಾಗೂ ಎಎಪಿ ಜಿದ್ದಿಗೆ ಬಿದ್ದವರಂತೆ ಗ್ಯಾರಂಟಿಗಳ ಹೋಲ್ ಹರಿಸುತ್ತಿವೆ. ಇದರ ಭಾಗವಾಗಿ ಇಂದು ಬಿಜೆಪಿ ಕೂಡ ಪ್ರಣಾಳಿಕೆ ಬಿಡುಗಡೆ ಮಾಡಿದೆ.
ಇನ್ನೇನು ಕೆಲವೆ ದಿನಗಳಲ್ಲಿ ರಾಷ್ಟ್ರ ರಾಜಧಾನಿಗೆ ಚುನಾವಣೆ ನಡೆಯಲಿದ್ದು. ಈ ಚುನಾವಣೆಯಲ್ಲಿ ಗೆಲುವು ಸಾಧಿಸಲು ಎಲ್ಲಾ ರಾಜಕೀಯ ಪಕ್ಷಗಳು ಜನರಿಗೆ ಅನೇಕ ಯೋಜನೆಗಳನ್ನು ಘೋಷಣೆ ಮಾಡುತ್ತಿದ್ದಾರೆ. ಇದರ ಹಿನ್ನಲ್ಲೆಯಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಿಜೆಪಿಯ ಪ್ರಣಾಳಿಕೆಯನ್ನು ಘೋಷಣೆ ಮಾಡಿದ್ದಾರೆ.
‘ಸಂಕಲ್ಪ ಪತ್ರ’ ಹೆಸರಿನಲ್ಲಿ ಪ್ರಣಾಳಿಕೆಯನ್ನು ಬಿಜೆಪಿ ಬಿಡುಗಡೆ ಮಾಡಿದ್ದು. ಇದರಲ್ಲಿ ಅನೇಕ ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿದೆ. ಇಂದು ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, ಪ್ರಣಾಳಿಕೆಯು ಪ್ರಗತಿಗೆ ನೀಲನಕ್ಷೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಒತ್ತಿ ಹೇಳಿದರು.
ಪಕ್ಷವು ಅಧಿಕಾರಕ್ಕೆ ಬಂದರೆ ಅಸ್ತಿತ್ವದಲ್ಲಿರುವ ಎಲ್ಲಾ ಕಲ್ಯಾಣ ಯೋಜನೆಗಳನ್ನು ಮುಂದುವರಿಸುವುದಾಗಿ ಮತ್ತು ಹಲವಾರು ಹೊಸ ಉಪಕ್ರಮಗಳನ್ನು ಪರಿಚಯಿಸುವುದಾಗಿ ನಡ್ಡಾ ಪ್ರತಿಜ್ಞೆ ಮಾಡಿದರು.
ರಾಷ್ಟ್ರಮಟ್ಟದಲ್ಲಿ ಬಿಜೆಪಿಯ ಸಾಧನೆಗಳನ್ನು ಎತ್ತಿ ತೋರಿಸಿದ ನಡ್ಡಾ, “ನಾವು 2014 ರಲ್ಲಿ 500 ಭರವಸೆಗಳನ್ನು ನೀಡಿದ್ದೇವೆ ಮತ್ತು ಆ ಪೈಕಿ 499 ಭರವಸೆಗಳನ್ನು ಈಡೇರಿಸಿದ್ದೇವೆ. 2019 ರಲ್ಲಿ, ನಾವು 235 ಭರವಸೆಗಳನ್ನು ನೀಡಿದ್ದೇವೆ ಮತ್ತು 225 ಭರವಸೆಗಳನ್ನು ಈಡೇರಿಸಿದ್ದೇವೆ. ಉಳಿದವು ಅನುಷ್ಠಾನ ಹಂತದಲ್ಲಿವೆ” ಎಂದರು.
ಮಹಿಳೆಯರ ಸಬಲೀಕರಣವು ಬಿಜೆಪಿಯ ಆದ್ಯತೆಯಾಗಿದೆ ಎಂದ ನಡ್ಡಾ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಂತಹ ರಾಜ್ಯಗಳಂತೆ ದೆಹಲಿಯಲ್ಲಿಯೂ ನಾವು ಮಹಿಳೆಯರಿಗೆ ತಿಂಗಳಿಗೆ 2500 ರೂಪಾಯಿ ನೀಡುತ್ತೇವೆ ಮತ್ತು 500 ರೂ. ಗೆ ಎಲ್ಪಿಜಿ ಸಿಲಿಂಡರ್ ನೀಡುವುದಾಗಿಯೂ ಭರವಸೆ ನೀಡಿದರು.
ಪ್ರಣಾಳಿಕೆಯಲ್ಲಿ ಏನೇನಿದೆ..?
*ಬಿಜೆಪಿಯ ಸಂಕಲ್ಪ ಪತ್ರದಲ್ಲಿ ಮಹಿಳೆಯರಿಗೆ 6 ಪೌಷ್ಠಿಕಾಂಶ ಕಿಟ್ಗಳು, ಗರ್ಭಿಣಿಯರಿಗೆ 21,000 ರೂ. ನೀಡಲಾಗುವುದು ಎಂದು ಘೋಷಿಸಿದ್ದು. ಅಲ್ಲದೇ ಮಹಿಳಾ ಸಮೃದ್ಧಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ. ನೆರವು, 500 ರೂ. ಗೆ ಎಲ್ಪಿಜಿ ಸಿಲಿಂಡರ್ ನೀಡುವುದಾಗಿ ಘೋಷಿಸಿದರು. ಇದರೊಂದಿಗೆ 60-70 ವರ್ಷ ವಯಸ್ಸಿನ ಹಿರಿಯ ನಾಗರಿಕರಿಗೆ 2,500 ರೂ. ಮತ್ತು 70 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾಸಿಕ 3,000 ರೂ. ನೆರವು ನೀಡುವುದಾಗಿ ಘೋಷಿಸಿದ್ದಾರೆ.
*ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಆಯುಷ್ಮಾನ್ ಯೋಜನೆಯನ್ನು ಜಾರಿ ಮಾಡುವುದಾಗಿ ಘೋಷಿಸಿದ್ದು. 500 ರೂಪಾಯಿಗೆ ಸಿಲಿಂಡರ್ ಸೇರಿದಂತೆ, ದೀಪಾವಳಿ ಮತ್ತು ಹೋಳಿ ಹಬ್ಬಕ್ಕೆ ಒಂದೊಂದು ಸಿಲಿಂಡರ್ಗಳನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಬಿಜೆಪಿ ತನ್ನ ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿಕೊಂಡಿದೆ.
*60-70 ವರ್ಷ ವಯಸ್ಸಿನ ಹಿರಿಯ ನಾಗರಿಕರಿಗೆ 2,000-2,500 ರೂ. ಮತ್ತು 70 ವರ್ಷಕ್ಕಿಂತ ಮೇಲ್ಪಟ್ಟವರಿಗೆ 3,000 ರೂ.ಗಳನ್ನು ಪಡೆಯುವ ಪಿಂಚಣಿ ಯೋಜನೆ.

