ತುಮಕೂರು : ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಗ್ರಾಮಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ರವರು ಬೇಟಿ ನೀಡಿ ಅಲ್ಲಿನ ವಿವಿಧ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿದರು,,
ಕಳ್ಳಂಬೆಳ್ಳ ಗ್ರಾಮ ಪಂಚಾಯಿತಿಗೆ ಬೇಟಿ ನೀಡಿ ಪಿಡಿಒ ಕಚೇರಿಯಲ್ಲಿ ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ನೊಂದಣಿಯಾಗಿರುವ ಫಲಾನುಭವಿಗಳ ಸಂಪೂರ್ಣ ಮಾಹಿತಿ ಕಲೆ ಹಾಕಿದರು,,
ನಂತರ ಸಿರಾ ಪಟ್ಟಣದ ಪಿಎಂ ವಿಶ್ವಕರ್ಮ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಕಾರ್ಯಾಚರಣೆಯನ್ನು ವೀಕ್ಷಿಸಿದರು, ಹಾಗೂ ಶಿರಾ ಪುರಸಭೆಗೆ ಭೇಟಿ ನೀಡಿ ಪಿಎಂ ಸ್ವಾನಿಧಿ ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ಪಡೆದು ಪರಿಶೀಲನೆ ನಡೆಸಿದರು,,
ಕಳ್ಳಂಬೆಳ್ಳ ಗ್ರಾಮದ ಅಂಗನವಾಡಿಗೆ ಭೇಟಿ ನೀಡಿದವರು ಅಲ್ಲಿನ ಮೂಲ ಸ್ಥಿತಿಗತಿಗಳ ಬಗ್ಗೆ ಮಾಹಿತಿಯನ್ನು ಪಡೆದು ಪರಿಶೀಲನೆ ನಡೆಸಿದರು, ಅಲ್ಲದೆ ಮಕ್ಕಳಿಗೆ ನೀಡುತ್ತಿರುವ ವ್ಯಾಕ್ಸಿನೇಷನ್ ಮತ್ತು ಕುಡಿಯುವ ನೀರಿನ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದವರು ಅಂಗನವಾಡಿ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ಕುರಿತು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು,,
ಕಳ್ಳಂಬೆಳ್ಳ ಕೆನರಾ ಬ್ಯಾಂಕ್ ನ ಕೆಸಿಸಿ ಸಾಲ ಪದ್ಧತಿಯ ಕುರಿತು ರೈತರಿಗೆ ಸಾಲ ನೀಡುವುದರ ಬಗ್ಗೆ ಪರಿಶೀಲಿಸಿದರು, ಪ್ರಾಥಮಿಕ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ರೈತರಿಗೆ ಕೃಷಿ ಇಲಾಖೆಯಿಂದ ವಿತರಿಸುವ ಹಾಗೂ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡುವುದಕ್ಕೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದರು,,
ನಂತರ ಬಾಳೇನಹಳ್ಳಿ ಗ್ರಾಮದ ರಾಮಚಂದ್ರಪ್ಪ ಅವರ ಜಮೀನಿಗೆ ಭೇಟಿ ನೀಡಿ ಸಮಗ್ರ ಕೃಷಿ ಮಾಡುತ್ತಿರುವುದನ್ನು ವೀಕ್ಷಿಸಿ ಅಲ್ಲಿನ ರೈತರೊಂದಿಗೆ ಸಂವಾದ ನಡೆಸಿದರು,,
ವರದಿ : ನರಸಿಂಹರಾಜು