ಬೆಂಗಳೂರು : ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಗುರುವಾರ ನೆಲಮಂಗಲದ ಕಾವಾಡಿ ಮಠದ ಶ್ರೀರುದ್ರೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಭಗವಂತನು ಸಕಲರಿಗೂ ಒಳ್ಳೆಯದನ್ನು ಮಾಡಲಿ, ನಾಡಿನ ಪ್ರಗತಿಯಾಗಲಿ ಎಂದು ಪ್ರಾರ್ಥಿಸಿದರು. ಬಳಿಕ ಮಾಧ್ಯಮಗಳ ಜೊತೆ ಅವರು ಮಾತನಾಡಿದ ಅವರು ‘ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ” ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದರು.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಚನ್ನಪಟ್ಟಣದಲ್ಲಿ ಗುರುವಾರ ನಡೆದ ಧ್ವಜಾರೋಹಣ ವಿಚಾರವಾಗಿ ಮಾತನಾಡಿದ ಡಿ. ಕೆ. ಶಿವಕುಮಾರ್, “ನಾನು ರಾಮನಗರದಲ್ಲೂ 5 ವರ್ಷ ಧ್ವಜಾರೋಹಣ ಮಾಡಿದ್ದೇನೆ. ಅಧಿಕಾರಿಗಳನ್ನು ಕೇಳಿದ್ದೆ, ಅವರು ಬಂದಿಲ್ಲ ಅಂದರು. ನಮ್ಮ ಡ್ಯೂಟಿ ನಾವು ಮಾಡಿದ್ದೇವೆ. ಜೊತೆಗೆ ಚನ್ನಪಟ್ಟಣ ಉಪ ಚುನಾವಣೆಗೆ ನಾನೇ ಅಭ್ಯರ್ಥಿ” ಎಂದರು.
ಚನ್ನಪಟ್ಟಣ ಕೇಂದ್ರ ಸಚಿವ, ಮಂಡ್ಯ ಸಂಸದ ಎಚ್. ಡಿ. ಕುಮಾರಸ್ವಾಮಿ ತವರು ಕ್ಷೇತ್ರ. ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ತವರು ಜಿಲ್ಲೆ ರಾಮನಗರ ಜಿಲ್ಲೆಯಲ್ಲಿರುವ ಕ್ಷೇತ್ರವಾದ ಕಾರಣ ಉಪ ಚುನಾವಣೆ ಗೆಲುವಿನಲ್ಲಿ ಕುಮಾರಸ್ವಾಮಿ, ಡಿ. ಕೆ. ಶಿವಕುಮಾರ್ ಪ್ರತಿಷ್ಠೆ ಅಡಗಿದೆ.

