ಶಾಸಕ ಮುನಿರತ್ನ ಅನರ್ಹತೆಗೆ ಡಿ.ಕೆ.ಸುರೇಶ್ ಆಗ್ರಹ, ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ

ಬೆಂಗಳೂರು : ಜಾತಿ ನಿಂದನೆ ಹಾಗೂ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿರುವ ಹಾಗೂ ಗುತ್ತಿಗೆದಾರನ ಬಳಿ ಲಂಚಕ್ಕೆ ಬೇಡಿಕೆಯಿಟ್ಟಿರುವ ಶಾಸಕ ಮುನಿರತ್ನ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಬೇಕು ಹಾಗೂ ವಿಧಾನಸಭಾ ಸ್ಪೀಕರ್ ಅವರು ಶಾಸಕ ಸ್ಥಾನದಿಂದ ವಜಾ ಮಾಡಬೇಕು” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಆಗ್ರಹಿಸಿದರು. ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಮುನಿರತ್ನ ಅವರಂತ ನಾಯಕರು ರಾಜ್ಯದಲ್ಲಿ ಇದ್ದರೆ ಜಾತಿ ಸಂಘರ್ಷಗಳು ಹೆಚ್ಚಾಗುತ್ತವೆ. ಆದ ಕಾರಣಕ್ಕೆ ಇವರ ಮೇಲೆ ಶೀಘ್ರ ಕ್ರಮ ತೆಗೆದುಕೊಳ್ಳಬೇಕು … Continue reading ಶಾಸಕ ಮುನಿರತ್ನ ಅನರ್ಹತೆಗೆ ಡಿ.ಕೆ.ಸುರೇಶ್ ಆಗ್ರಹ, ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ