ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪ್ರಕರಣದಲ್ಲಿ ಪ್ರಧಾನಿ ಮೋದಿ (Narendra Modi) ಅವರನ್ನ ಎಳೆದು ತರುವುದು ಸೂಕ್ತವಲ್ಲ ಅಂತ ಕಾಂಗ್ರೆಸ್ (Congress) ನಾಯಕರಿಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy ) ತಿರುಗೇಟು ನೀಡಿದ್ದಾರೆ.
ದೇವೇಗೌಡರ ಭೇಟಿ ಬಳಿಕ ಪ್ರಜ್ವಲ್ ಪ್ರಕರಣದಲ್ಲಿ ಪ್ರಧಾನಿ ಮೋದಿ ಉತ್ತರ ಕೊಡಬೇಕು ಎಂಬ ಕಾಂಗ್ರೆಸ್ ನಾಯಕರ ಮಾತಿಗೆ ಉತ್ತರ ನೀಡಿದ ಅವರು, ಈ ಪ್ರಕರಣದಲ್ಲಿ ದೇಶದ ಪ್ರಧಾನಿಗಳನ್ನ ಎಳೆದು ತರೋದು ಸರಿಯಲ್ಲ, ಸೂಕ್ತವಲ್ಲ. ಮೋದಿ ಅವರಿಗೂ ಇದಕ್ಕೂ ಸಂಬಂಧವಿಲ್ಲ ಎಂದರು. ಇದನ್ನೂ ಓದಿ: ನಿಗದಿತ ಅವಧಿಗಿಂತ ಬೇಗ ಶಾಲೆ ಆರಂಭಿಸಿರುವ ಖಾಸಗಿ ಶಾಲೆಗಳಿಗೆ ಬೀಗ ಜಡಿಯಲು ಪ್ಲಾನ್! ಕಾರಣವೇನು?
ರೇವಣ್ಣ ವಿಚಾರ ಆಗಲಿ, ಹಾಸನ ಸಂಸದರ ವಿಚಾರ ಆಗಲಿ ನಾನು ಅನೇಕ ಸಮಯದಲ್ಲಿ ನಾನು ಮಾಧ್ಯಮಗಳಲ್ಲಿ ಹೇಳಿದ್ದೇನೆ. ನನ್ನ ರಾಜಕೀಯ ಬದುಕು, ನನ್ನ ಪಕ್ಷ, ನಾನು ಪಕ್ಷದ ಕಾರ್ಯಕರ್ತನಾಗಿ ನಾನು ಹೆಚ್ಚು ಹಾಸನ ಜಿಲ್ಲೆಗೆ ಕಾಲಿಟ್ಟವನು ಅಲ್ಲ. ಹಾಸನಾಂಬೆ ದರ್ಶನಕ್ಕೆ ಮಾತ್ರ ಹೋಗಿರೋದು ಮಾತ್ರ ಪ್ರತಿವರ್ಷ. ಅದು ಬಿಟ್ಟರೆ ನಾನು ಯಾವತ್ತೂ ಹೋಗಿಲ್ಲ. ನನಗೂ ಮತ್ತು ಹಾಸನ ಸಂಸದರಿಗೂ ಹೆಚ್ಚಿನ ಸಂಪರ್ಕ ಇಲ್ಲ ನಾನು ಸಲಹೆ ಕೊಡುವ ಅಷ್ಟು ಇಲ್ಲ. ಇದರ ಬಗ್ಗೆ ನಾನು ಹೆಚ್ಚು ಚರ್ಚೆ ಮಾಡಲ್ಲ ಎಂದರು.ಇದನ್ನೂ ಓದಿ: ಈಗ ಜಾಗತಿಕ ವೇದಿಕೆಯಲ್ಲಿ ಭಾರತವಲ್ಲ ಪಾಕಿಸ್ತನ ಅಳುತ್ತಿದೆ: ನರೇಂದ್ರ ಮೋದಿ

