ಮೈಸೂರು: ಭಾರತ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ಜಾವಗಲ್ ಅವರಿಗೆ ಮಾತೃ ವಿಯೋಗವಾಗಿದೆ. 88ನೇ ವಯಸ್ಸಿನ ಭಾಗ್ಯಲಕ್ಷ್ಮಿ ಅವರು ದೀರ್ಘಾವಧಿಯಿಂದ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇದರ ಪರಿಣಾಮ ಭಾನುವಾರ ಸಾಂಸ್ಕೃತಿಕ ನಗರಿ ಮೈಸೂರಿನ ಕುವೆಂಪು ನಗರದ ಮನೆಯಲ್ಲಿ ನಿಧನರಾಗಿದ್ದಾರೆ. ಅವರು ಇಬ್ಬರು ಗಂಡು ಮಕ್ಕಳು ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಅವರ ಅಂತ್ಯ ಸಂಸ್ಕಾರವನ್ನು ಆಗಸ್ಟ್ 17ರಂದೇ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸ್ಮಶಾನದಲ್ಲಿ ನಡೆಯಿತು.
ಮೈಸೂರಿನ ಜಾವಗಲ್ ಗ್ರಾಮದ ಕನ್ನಡಿಗ ಬ್ರಾಹ್ಮಣ ಕುಟುಂಬದಲ್ಲಿ ಭಾಗ್ಯಲಕ್ಷ್ಮಿ ಅವರು ಜನಿಸಿದ್ದರು. ತಮ್ಮ ಪತಿ ಜೆ ಕೆ ಚಂದ್ರಶೇಖರ್ರೊಂದಿಗೆ, ಅವರು ಕುವೆಂಪುನಗರದಲ್ಲಿ ಜೀವನ ನಡೆಸುತ್ತಿದ್ದರು. ಚಂದ್ರಶೇಖರ್ ಅವರು ವ್ಯಾಪಾರಿಯಾಗಿದ್ದು, ಕ್ರೀಡಾಪ್ರಿಯರಾಗಿದ್ದರು ಮತ್ತು ಕರ್ನಾಟಕದಲ್ಲಿ ಫುಟ್ಬಾಲ್ ಆಡಿದ್ದರು. 2018ರಲ್ಲಿ ಚಂದ್ರಶೇಖರ್ ಅವರ ನಿಧನದ ನಂತರ, ಭಾಗ್ಯಲಕ್ಷ್ಮಿ ಅವರು ಕುಟುಂಬದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

