ಬೆಂಗಳೂರು : ಬಮೂಲ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ಡಿಕೆ ಸುರೇಶ್ ( D.K Suresh ) ನಾಮಪತ್ರ ಸಲ್ಲಿಸಿದ್ದಾರೆ. ಬಮೂಲ್ ಅಧ್ಯಕ್ಷ ಸ್ಥಾನದ ಮೇಲೆ ಮಾಜಿ ಸಂಸದ ಡಿ.ಕೆ. ಸುರೇಶ್ ಕಣ್ಣಿಟ್ಟಿದ್ದು, ಇಂದು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಬೆಂಗಳೂರು ಡೇರಿ ವೃತ್ತದಲ್ಲಿರುವ ಕಚೇರಿಯಲ್ಲಿ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಸಿದ್ದು, ಒಟ್ಟು 14 ನಿರ್ದೇಶಕರನ್ನು ಬಮೂಲ್ ಒಳಗೊಂಡಿದೆ.
ಬಹುತೇಕ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಆಯ್ಕೆ ಖಚಿತವಾಗಿದೆ. ಕಳೆದ ತಿಂಗಳು ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿತ್ತು.ಇಂದು ಬೆಂಗಳೂರಿನ ಡೈರಿ ಸರ್ಕಲ್ನಲ್ಲಿ ಬಮೂಲ್ಲ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆಯನ್ನು ಸಲ್ಲಿಸಿದೆ.
ನಮ್ಮ ಹೈನುಗಾರರ ಬದುಕನ್ನು ಹಸನಾಗಿಸುವ ನಿಟ್ಟಿನಲ್ಲಿ ಈ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹ ಹಾಗೂ ಆಶೀರ್ವಾದವಿರಲಿ. ನಾವೆಲ್ಲರೂ ಸೇರಿ ಕ್ಷೀರೋದ್ಯಮದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರೋಣ ಎಂದು ಡಿಕೆ ಸುರೇಶ್ ಟ್ರೇಟ್ ಮಾಡಿದ್ದಾರೆ.
ಬಮೂಲ್ನ 14 ನಿರ್ದೇಶಕರ ಸ್ಥಾನಗಳಿಗೆ ಇತ್ತೀಚೆಗೆ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 11 ಮಂದಿ ಜಯ ಸಾಧಿಸುವುದರೊಂದಿಗೆ, ಬಮೂಲ್ ‘ಕೈ’ ತೆಕ್ಕೆಗೆ ಜಾರಿದೆ. ಅದರಲ್ಲೂ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದಿಂದ ಸುರೇಶ್ ಅವಿರೋಧವಾಗಿ ಆಯ್ಕೆಯಾಗಿದ್ದರು. ಇದರೊಂದಿಗೆ ಕೆಎಂಎಫ್ ಅಧ್ಯಕ್ಷ ಹುದ್ದೆ ಮೇಲೆ ಸುರೇಶ್ ಕಣ್ಣಿಟ್ಟಿದ್ದಾರೆಂಬ ಮಾತುಗಳಿಗೆ ಅಧಿಕೃತ ಮುದ್ರೆ ಬಿದ್ದಿತ್ತು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹೋದರರು ಆಗಿರುವ ಸುರೇಶ್ ಅವರು, ಹಾಲಿನ ರಾಜಕೀಯ ಪ್ರವೇಶವು ಬಮೂಲ್ ಚುನಾವಣೆಯಲ್ಲಿ ಸಂಚಲನ ಮೂಡಿಸಿತ್ತು. ಅಲ್ಲದೆ, ಬೆಂಗಳೂರು ದಕ್ಷಿಣದ ಆರೂ ನಿರ್ದೇಶಕ ಸ್ಥಾನಗಳು ‘ಕೈ’ ಪಾಲಾಗಿದ್ದವು. ಚನ್ನಪಟ್ಟಣದಲ್ಲಿದ್ದ ತನ್ನ ಏಕೈಕ ಪ್ರಾತನಿಧ್ಯವನ್ನು ಜೆಡಿಎಸ್ ಕಳೆದುಕೊಂಡಿತ್ತು.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ದಕ್ಷಿಣ ಸೇರಿ ಮೂರು ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿರುವ ಬಮೂಲ್ಗೆ ಸುರೇಶ್ ಅವರೇ ಅಧ್ಯಕ್ಷರಾಗಬೇಕು. ಇದರ ಜೊತೆಗೆ ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ಅಧ್ಯಕ್ಷ ಹುದ್ದೆಯನ್ನು ಸಹ ಅಲಂಕರಿಸಬೇಕು ಎಂದು ನಾವು ಆರಂಭದಿಂದಲೂ ಬಹುತೇಕ ನಿರ್ದೇಶಕರು ಒತ್ತಾಯಿಸುತ್ತಲೇ ಬಂದಿದ್ದರು ಎಂದು ಮೂಲಗಳು ತಿಳಿಸಿವೆ.