ಮಂಡ್ಯ: ಜನರ ಕಣ್ಮನ ಸೆಳೆಯುವ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿರುವ ಗಗನಚುಕ್ಕಿ ಜಲಪಾತದ ಉತ್ಸವವನ್ನು ಇದೇ ಸೆಪ್ಟೆಂಬರ್ 13 ಹಾಗೂ 14 ರಂದು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿ ಗಗನಚುಕ್ಕಿ ಜಲಪಾತವನ್ನು ಉನ್ನತ ಪ್ರವಾಸಿ ತಾಣ ಮಾಡಿ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು 2 ದಿನಗಳ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಾಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.
ರೊಟ್ಟಿಕಟ್ಟೆಯ ಬಳಿ ನೀರು ಸರಬರಾಜು ಕಾಮಗಾರಿ ನಡರಯುತ್ತಿರುವ ಹಿನ್ನಲೆಯಲ್ಲಿ ಈ ಬಾರಿ ಮಳ್ಳಿ ಕ್ಯಾತನಹಳ್ಳಿಯ ಬಳಿ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ವೇದಿಕೆಯ ಬಳಿ ಜಲಪಾತದ ಮನಮೋಹಕ ದೃಶ್ಯಗಳನ್ನು ಸವಿಯಲು ಎಲ್.ಇ.ಡಿ ವ್ಯವಸ್ಥೆ ಸಹ ಮಾಡಲಾಗುವುದು ಎಂದರು.
ಉಚಿತ ಬಸ್ ವ್ಯವಸ್ಥೆ ಪ್ರವಾಸಿಗರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಹಾಗೂ ಸುಗಮ ವಾಹನ ಸಂಚಾರದ ದೃಷ್ಟಿಯಿಂದ ಮಳವಳ್ಳಿ ತಾಲ್ಲೂಕಿನಿಂದ ಗಗನಚುಕ್ಕಿಯ ವರೆಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದರು.
ಉಚಿತ ಆಹಾರ ವ್ಯವಸ್ಥೆ ಜಲಪಾತೋತ್ಸವ ನಡೆಯುವ ಸೆಪ್ಟೆಂಬರ್ 13 ಹಾಗೂ 14 ರಂದು ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಬೆಳಿಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಉಚಿತವಾಗಿ ಉಪಹಾರದ ವ್ಯವಸ್ಥೆ ಮಾಡಲಾಗಿದೆ ಎಂದರು.
ಜಲಪಾತ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಅನುಕೂಲವಾಗುವ ರೀತಿ ಕುಳಿತಿಕೊಂಡು ವೀಕ್ಷಿಸಲು ಮೆಟ್ಟಿಲುಗಳು, ಲೈಟಿಂಗ್ ವ್ಯವಸ್ಥೆಗಳನ್ನು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಅಕ್ವ ಪಾಕ್೯ ಅಭಿವೃದ್ಧಿ ಪಡಿಸಲು ಚಿಂತಿಸಲಾಗುತ್ತಿದೆ. ಇದಲ್ಲದೆ ಪಿ.ಪಿ.ಪಿ ಮಾಡಲ್ ನಲ್ಲಿ ಉದ್ಯಾನವನ, ಜಲಕ್ರೀಡೆ ಮಾಡಲು ಸಹ ಯೋಜಿಸಲಾಗುತ್ತಿದೆ ಎಂದರು.
ಸ್ಥಳೀಯ ಕಲಾವಿದರಿಗೆ ಅವಕಾಶ ಎರಡು ದಿನಗಳ ಕಾರ್ಯಕ್ರಮದಲ್ಲಿ ಬೆಳಿಗ್ಗೆ 11 ರಿಂದ 3 ಗಂಟೆಯವರೆಗೆ ಸ್ಥಳೀಯ ಕಲಾವಿದರ ಪ್ರದರ್ಶನಕ್ಕೆ ಅವಕಾಶ ಮಾಡಿಕಪಡಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಉತ್ತಮವಾದ 2 ಅಥವಾ 3 ಶಾಲಾ/ ಕಾಲೇಜು ವಿದ್ಯಾರ್ಥಿಗಳಿಗೆ ಪ್ರದರ್ಶನ ನೀಡಲು ಅವಕಾಶ ನೀಡಲಾಗುವುದು ಎಂದರು.
ಸೆಪ್ಟೆಂಬರ್ 13 ರಂದು ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 03.00 ಗಂಟೆಯವರೆಗೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು. ಮಧ್ಯಾಹ್ನ 03:00 ರಿಂದ ಸಂಜೆ 06:00 ಗಂಟೆಯವರೆಗೆ ಸಾದ್ವಿನಿ ಕೊಪ್ಪ, ಸಾಕ್ಷಿ ಕೊಲ್ಲೂರು, ಹನುಮಂತ ಹಾಗೂ ಕಂಬದ ರಂಗಯ್ಯ ಗಾಯಕರಿಂದ ಜಾನಪದ ಸಂಗೀತ ಕಾರ್ಯಕ್ರಮ. ಸಂಜೆ 06.00 ಗಂಟೆಗೆ ಶಿವರಾಜ್. ಕೆ.ಆರ್.ಪೇಟೆ ಮತ್ತು ಅವರ ತಂಡದ ವತಿಯಿಂದ ಕಾಮಿಡಿ ಶೋ ಕಾರ್ಯಕ್ರಮ.
ಸಂಜೆ 06.30 ಗಂಟೆಗೆ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಕಾರ್ಯಕ್ರಮದ ಉದ್ಘಾಟನೆ. ಸಂಜೆ 07:30 ರಿಂದ ರಾತ್ರಿ 11:00 ರವರೆಗೆ ಅರ್ಜುನ್ ಜನ್ಯಾ ಮತ್ತು ಅವರ ತಂಡದಿಂದ ಹಾಗೂ ಖ್ಯಾತ ಗಾಯಕಿ ಮಂಗಲಿ ಅವರಿಂದ ಸಂಗೀತ ಕಾರ್ಯಕ್ರಮ,ಚಲನಚಿತ್ರ ನಟಿಯರಾದ ರಾಗಿಣಿ ತ್ರಿವೇದಿ, ಮನ್ವಿತ ಹರೀಶ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

