By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಂವಿಧಾನ ನನಗೆ ಎಲ್ಲವನ್ನೂ ಕೊಟ್ಟಿದೆ ಎಂದು ಭಾವುಕರಾದ ಮಾಜಿ ಪ್ರಧಾನಿ ದೇವೇಗೌಡರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಸಂವಿಧಾನ ನನಗೆ ಎಲ್ಲವನ್ನೂ ಕೊಟ್ಟಿದೆ ಎಂದು ಭಾವುಕರಾದ ಮಾಜಿ ಪ್ರಧಾನಿ ದೇವೇಗೌಡರು

BlogLatestTop Storiesರಾಜ್ಯ-Karnataka

ಸಂವಿಧಾನ ನನಗೆ ಎಲ್ಲವನ್ನೂ ಕೊಟ್ಟಿದೆ ಎಂದು ಭಾವುಕರಾದ ಮಾಜಿ ಪ್ರಧಾನಿ ದೇವೇಗೌಡರು

HD Devegowda's Remarks on Journey of 75 Years of Constitution of India

Published December 17, 2024
Share
3 Min Read
HD Devegowda
SHARE

ನವದೆಹಲಿ: ಅತ್ಯಂತ ಬಡ ರೈತನ ಮಗನಾದ ನನಗೆ ಈ ದೇಶದ ಸಂವಿಧಾನ ಎಲ್ಲವನ್ನೂ ಕೊಟ್ಟಿದೆ ಎಂದು ರಾಜ್ಯಸಭೆಯಲ್ಲಿ ಮಂಗಳವಾರ ಭಾವಪೂರ್ಣವಾಗಿ ಮಾತನಾಡಿದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಸಂವಿಧಾನದ ಬಲದಿಂದಲೇ ನಾನು ಮುಖ್ಯಮಂತ್ರಿ, ಪ್ರಧಾನಮಂತ್ರಿ ಆಗುವಂತೆ ಆಯಿತು ಎಂದರು.

ಸಂವಿಧಾನವನ್ನು ಅಳವಡಿಸಿಕೊಂಡ 75 ವರ್ಷಗಳ ಸಂದರ್ಭದಲ್ಲಿ ರಾಜ್ಯಸಭೆಯಲ್ಲಿ ಭಾಷಣ ಮಾಡಿದ ಅವರು; ಸಂವಿಧಾನ ನನಗೆ ಎಲ್ಲವನ್ನೂ ಕೊಟ್ಟಿದೆ. ಒಬ್ಬ ಬಡ ರೈತನ ಮಗನಾಗಿ, ದೂರದ ಹಳ್ಳಿಯಿಂದ ಮತ್ತು ಜಾತಿ ಸ್ತರದ ಕೆಳಮದಿಂದ ನಾನು ಮುಖ್ಯಮಂತ್ರಿ ಮತ್ತು ಪ್ರಧಾನಿಯಾಗಲು ಸಾಧ್ಯವಾಗಿದ್ದರೆ ಅದು ನಮ್ಮ ಸಂವಿಧಾನದಿಂದ ಮಾತ್ರ ಎಂದರು.

ಕಳೆದ 75 ವರ್ಷಗಳ ಅವಧಿಯಲ್ಲಿ ಸಂವಿಧಾನದ ಚೌಕಟ್ಟಿನಲ್ಲಿ ಭಾರತದ ಬೆಳೆದ ರೀತಿ, ಮಾಡಿದ ಸಾಧನೆಗಳ ಬಗ್ಗೆ ಮಾಜಿ ಪ್ರಧಾನಿಗಳು ಅನೇಕ ಮಹತ್ವಪೂರ್ಣ ಅಂಶಗಳನ್ನು ಸದನದಲ್ಲಿ ಹಂಚಿಕೊಂಡರು. ಆಧುನಿಕ ಭಾರತವನ್ನು ರೂಪಿಸುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ದೂರದೃಷ್ಟಿಯ ಸಂವಿಧಾನ ಅಸಾಧಾರಣ ಕೊಡುಗೆ ನೀಡಿದೆ. ಬಾಬಾ ಸಾಹೇಬ್ ಅವರ ನೇತೃತ್ವದಲ್ಲಿ ರಚನೆಯಾದ ನಮ್ಮ ಸಂವಿಧಾನವು ಅನೇಕ ಒತ್ತಡಗಳು ಮತ್ತು ನಮ್ಮ ಕಾಲದ ರಾಜಕೀಯವನ್ನು ತಡೆದುಕೊಂಡು ನಿಂತಿದೆ” ಎಂದು ಅವರು ಹೇಳಿದರು.

ಸಂವಿಧಾನದ ಮೇಲಿನ ಚರ್ಚೆಯ ಸಂದರ್ಭದಲ್ಲಿ ತುರ್ತು ಪರಿಸ್ಥಿತಿ ಸಂದರ್ಭವನ್ನು ನೆನಪು ಮಾಡಿಕೊಂಡ ಮಾಜಿ ಪ್ರಧಾನಿಗಳು; ತುರ್ತು ಪರಿಸ್ಥಿತಿಯ ಕಾಲ ಕರಾಳ ಅವಧಿ. ಐವತ್ತು ವರ್ಷಗಳ ಹಿಂದೆ ತುರ್ತು ಪರಿಸ್ಥಿತಿಯನ್ನು ಘೋಷಿಸಿದಾಗ, ಈ ರಾಷ್ಟ್ರದ ಬಹುತೇಕ ರಾಜಕೀಯ ವಿರೋಧಿಗಳೆಲ್ಲರೂ ಜೈಲು ಪಾಲಾದರು. ಸರಕಾರದ ವಿರುದ್ಧ ಟೀಕೆ ಮಾಡುತ್ತಿದ್ದವರು ಎಲ್ಲರನ್ನೂ ಜೈಲಿಗೆ ಕಳುಹಿಸಲಾಯಿತು ಎಂದು ಅವರು ಹೇಳಿದರು.

“ನನ್ನನ್ನೂ ಜೈಲಿಗೆ ಕಳುಹಿಸಲಾಯಿತು. ನನ್ನ ಸೆರೆವಾಸವು ನನ್ನ ತಂದೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಿ ಕುಟುಂಬದ ಮೇಲೆ ಮಾನಸಿಕ ಒತ್ತಡ ಉಂಟು ಮಾಡಿತು. ಕೊನೆಗೆ ಆ ನೋವಿನಲ್ಲಿಯೇ ತಂದೆಯವರು ವಿಧಿವಶರಾದರು. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟಿರುವ ಮತ್ತು ತಮ್ಮ ರಾಜಕೀಯ ನಂಬಿಕೆಗಳ ಜತೆ ನಿಂತಿದ್ದ ಅನೇಕರಿಗೆ ಇದು ಆಘಾತಕಾರಿ ಸಮಯವಾಗಿತ್ತು” ಎಂದು ದೇವೇಗೌಡರು ಭಾವುಕರಾಗಿ ಹೇಳಿದರು.

ತುರ್ತು ಪರಿಸ್ಥಿತಿ ಅವಧಿಯಲ್ಲಿ ಭಾರತ ಅನೇಕ ಪಾಠಗಳನ್ನು ಕಳಿತುಕೊಂಡಿತು. ಆ ಸಮಯದಲ್ಲಿಯೇ ರಾಷ್ಟ್ರವು ಸಂವಿಧಾನವು ನಮಗೆ ನೀಡಿದ ಸ್ವಾತಂತ್ರ್ಯ ಎಂತಹುದು ಎಂಬುದನ್ನು ಅರಿತುಕೊಂಡಿತು ಎಂದ ಮಾಜಿ ಪ್ರಧಾನಿಗಳು; ಯುವ ಪೀಳಿಗೆಯು ಪ್ರಜಾಪ್ರಭುತ್ವವನ್ನು ಸಂರಕ್ಷಿಸಲು ತುರ್ತು ಪರಿಸ್ಥಿತಿ ಸಮಯದಲ್ಲಿ ಅನೇಕರು ಮಾಡಿದ ತ್ಯಾಗವನ್ನು ಸ್ಮರಿಸಬೇಕೆಂದು ಮನವಿ ಮಾಡಿದರು.

“ನಮ್ಮ ಸಂವಿಧಾನ ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದು. ಅಂತಹ ಮಹೋನ್ನತ ಸಂವಿಧಾನವನ್ನು ನಾವು ಹೊಂದಿದ್ದೇವೆ. ಇದರ ಸಂರಚನೆ ನಮ್ಮ ವೈವಿಧ್ಯತೆ ಮತ್ತು ಒಕ್ಕೂಟ ವ್ಯವಸ್ಥೆಯ ರಚನೆಯನ್ನು ಗುರುತಿಸುವಾಗ ಪ್ರಜಾಪ್ರಭುತ್ವದ ವಿವಿಧ ಸಾಂಸ್ಥಿಕ ಸ್ತಂಭಗಳ ನಡುವೆ ಅಧಿಕಾರದ ಸಮತೋಲನವನ್ನು ಸಂವಿಧಾನವು ಅತ್ಯಂತ ಬಲವಾಗಿ ಎತ್ತಿ ಹಿಡಿದಿದೆ” ಎಂದು ಅವರು ಹೇಳಿದರು.

1977ರ ನಂತರ ಭಾರತದಲ್ಲಿ ಸಮ್ಮಿಶ್ರ ಸರಕಾರಗಳ ಯಶಸ್ಸು ಸಂವಿಧಾನದ ಸಧೃಢತೆಗೆ ಹಿಡಿದ ಕನ್ನಡಿ ಎಂದ ಅವರು; ನಾನು ಮೊದಲ ಬಾರಿಗೆ 13 ಪಕ್ಷಗಳ ಒಕ್ಕೂಟವನ್ನು ಮುನ್ನಡೆಸಿದ್ದೇನೆ. ಆ ಸರಕಾರದ ಆರ್ಥಿಕ ಸಾಧನೆಯ ಪ್ರಜಾಪ್ರಭುತ್ವದೆಡೆಗಿನ ಹೆಗ್ಗುರುತುಗಳನ್ನು ಗಮನಿಸಿದರೆ ನಮ್ಮ ಸಂವಿಧಾನದ ಶಕ್ತಿ ಎಂತದ್ದು ಎನ್ನುವುದು ಅರ್ಥವಾಗುತ್ತದೆ. ನಾನು ಅನುಸರಿಸಿದ ಸರಳ ನಿಯಮವೆಂದರೆ, ನೀವು ಸಂವಿಧಾನವನ್ನು ನಿಕಟವಾಗಿ ಮತ್ತು ನಿಷ್ಠೆಯಿಂದ ಅನುಸರಿಸಿದರೆ, ನಾವು ದೊಡ್ಡ ತಪ್ಪುಗಳನ್ನು ತಪ್ಪಿಸಬಹುದು ಎಂದರು.

ಸಂವಿಧಾನದ ಪಾವಿತ್ರ್ಯತೆಯನ್ನು ಎತ್ತಿ ಹಿಡಿಯಲು ನಿರಂತರ ಪ್ರಯತ್ನಗಳು ನಡೆಯಬೇಕು ಎಂದು ಕರೆ ನೀಡಿದ ಅವರು; ಇಂತಹ ಪ್ರಯತ್ನವನ್ನು ನಾವು ಎಂದಿಗೂ ಕೈಬಿಡಬಾರದು ಎಂದರು. ಹಾಗೂ ಸಂವಿಧಾನಕ್ಕೆ ಕೊಡುಗೆ ನೀಡಿದ ಡಾ.ಅಂಬೇಡ್ಕರ್ ಮತ್ತು ಇತರರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

“ನಾವು ನಮ್ಮ ಸಂವಿಧಾನ ಅಳವಡಿಸಿಕೊಂಡ ಶತಮಾನೋತ್ಸವವನ್ನು ಆಚರಿಸೋಣ ಮತ್ತು ಈ ರಾಷ್ಟ್ರದ ಭವ್ಯ ಭವಿಷ್ಯದಲ್ಲಿ ಅದರ ಅನೇಕ ಶತಮಾನಗಳನ್ನು ಆಚರಿಸೋಣ” ಎಂದು ಅವರು ಕರೆ ನೀಡಿದರು.

You Might Also Like

Donald Trump : ಪುಟಿನ್ ಹುಚ್ಚನಂತೆ ವರ್ತಿಸುತ್ತಿದ್ದಾನೆ : ರೊಚ್ಚಿಗೆದ್ದ ಟ್ರಂಪ್

ಟ್ರೇಡ್ ಡೀಲ್ ವಿವಾದ : ಪ್ರಧಾನಿ ಮೋದಿ ರಾಜಿಯಾಗಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪ

ಆತ್ಮಾಹುತಿ ಡ್ರೋನ್ ಪರೀಕ್ಷೆ ನಡೆಸಿದ ಉತ್ತರ ಕೊರಿಯಾ ದೊರೆ ಕಿಮ್

ತಿರುಪತಿಯಲ್ಲಿ ಕಾಲ್ತುಳಿತ, 6 ಮಂದಿ ಸಾವು, ಹಲವರ ಸ್ಥಿತಿ ಗಂಭೀರ

ಮಹತ್ವ ಯೋಜನೆ ಎಳ್ಳುನೀರು ಬಿಟ್ಟ ಬಿಬಿಎಂಪಿ

TAGGED:#Indian constitutionConstitutionHD Devegowda
Share This Article
Facebook Copy Link Print
Previous Article ನಾಗಮೋಹನದಾಸ್ ವರದಿ ಜಾರಿ ಮಾಡಬಾರದೆಂದು ಒತ್ತಾಯಿಸಿ ಪ್ರತಿಭಟನೆ
Next Article Uddhav Thackeray ಮಹಾ ಸಿಎಂ ಫಡ್ನವೀಸ್ ಭೇಟಿಯಾದ ಉದ್ಧವ್ ಠಾಕ್ರೆ, ಸಾವರ್ಕರ್​ಗೆ ಭಾರತರತ್ನ ನೀಡಲು ಒತ್ತಾಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up