By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಈಗಿರುವುದು ಗಾಂಧಿ ಕಾಂಗ್ರೆಸ್ ಅಲ್ಲ, ಅಲಿಬಾಬಾ ನಲವತ್ತು ಕಳ್ಳರ ಕಾಂಗ್ರೆಸ್ : ಹೆಚ್ಡಿಕೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜಕೀಯ | Politics > ಈಗಿರುವುದು ಗಾಂಧಿ ಕಾಂಗ್ರೆಸ್ ಅಲ್ಲ, ಅಲಿಬಾಬಾ ನಲವತ್ತು ಕಳ್ಳರ ಕಾಂಗ್ರೆಸ್ : ಹೆಚ್ಡಿಕೆ
BlogLatestರಾಜಕೀಯ | Politicsರಾಜ್ಯ-Karnataka

ಈಗಿರುವುದು ಗಾಂಧಿ ಕಾಂಗ್ರೆಸ್ ಅಲ್ಲ, ಅಲಿಬಾಬಾ ನಲವತ್ತು ಕಳ್ಳರ ಕಾಂಗ್ರೆಸ್ : ಹೆಚ್ಡಿಕೆ

HD Kuamraswamy on Congress's Belagavi Conference

Published December 26, 2024
Share
2 Min Read
HD Kumaraswamy
SHARE

ಮಂಡ್ಯ: ಬೆಳಗಾವಿಯಲ್ಲಿ ಜನರ ತೆರಿಗೆ ದುಡ್ಡಿನಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ ನಡೆಯುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು. ಮಂಡ್ಯದಲ್ಲಿ ಗುರುವಾರ ದಿಶಾ ಸಭೆಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು ಕೇಂದ್ರ ಸಚಿವರು.

ಬೆಳಗಾವಿಯಲ್ಲಿ ಕಾಂಗ್ರೆಸ್‌ನಿಂದ ಗಾಂಧಿ ಶತಮಾನೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಮುಂದಿನ ವರ್ಷ ಗಾಂಧಿ ಹೆಸರಲ್ಲಿ ಕಾರ್ಯಕ್ರಮ ಮಾಡಲು ಸರಕಾರ ಹೊರಟಿದೆ. ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಗಾಂಧೀಜಿ ಶತಮಾನೋತ್ಸವ ಕಾರ್ಯಕ್ರಮ ಮಾಡುತ್ತಿದೆ ಸರಕಾರ. ಆದರೆ ಅಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಕಟೌಟ್‌ಗಳಲ್ಲಿ ಗಾಂಧೀಜಿ ಫೋಟೋ ನೋಡಲಿಲ್ಲ. ನಕಲಿ ಗಾಂಧಿಗಳ ಫೋಟೋಗಳು ಇರುವ ಕಟೌಟ್‌ಗಳನ್ನು ಆಕಾಶದೆತ್ತರಕ್ಕೆ ಹಾಕಿದ್ದಾರೆ ಎಂದು ಅವರು ಪ್ರಹಾರ ನಡೆಸಿದರು.

ಈಗ ಇರುವುದು ಅಸಲಿ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್. ಬೆಳಗಾವಿಯಲ್ಲಿ ಕಾರ್ಯಕ್ರಮ ಮಾಡುತ್ತಿರುವುದು ಅದೇ ನಕಲಿ ಕಾಂಗ್ರೆಸ್. ಸ್ವಾತಂತ್ರ್ಯ ಗಳಿಸಿದ ಮೇಲೆ ಕಾಂಗ್ರೆಸ್ ಅನ್ನು ವಿಸರ್ಜನೆ ಮಾಡಿ ಎಂದು ಸ್ವತಃ ಮಹಾತ್ಮ ಗಾಂಧೀಜಿ ಅವರು ಆಗಲೇ ಹೇಳಿದ್ದರು. ಅವರ ಕಾಂಗ್ರೆಸ್ ಈಗಿಲ್ಲ. ಈಗ ಇರುವುದು ಆಲಿಬಾಬ ಮತ್ತು 40 ಮಂದಿ ಕಳ್ಳರ ಕಾಂಗ್ರೆಸ್ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಗಾಂಧೀಜಿ ಅವರ ಹೆಸರಲ್ಲಿ ಕಾರ್ಯಕ್ರಮ ಮಾಡಲು ನನ್ನ ತಕರಾರಿಲ್ಲ. ಸಂಘಟಿತ ಹೋರಾಟದ ಮೂಲಕ ಹೋರಾಟ ನಡೆಸಿ ಸ್ವಾತಂತ್ರ್ಯ ತಂದುಕೊಟ್ಟರು ಅವರು. ಗಾಂಧೀಜಿ ಅವರ ರಾಮರಾಜ್ಯದ ಪರಿಕಲ್ಪನೆ ಇವತ್ತು ರಾಜ್ಯದಲ್ಲಿ ಸಾಕಾರ ಆಗಿದೆಯಾ? ಅವರ ಗ್ರಾಮ ಸ್ವರಾಜ್ಯದ ಕನಸು ಈಡೇರಿದೆಯಾ? 15ನೇ ಹಣಕಾಸು ಆಯೋಗದ ಅನುದಾನದ ಮೂಲಕ ಗ್ರಾಮಗಳ ಅಭಿವೃದ್ಧಿಗಾಗಿ ಪಂಚಾಯಿತಿಗಳಿಗೆ ಕೇಂದ್ರ ಸರಕಾರ ಬಿಡುಗಡೆ ಮಾಡಿರುವ ₹448.29 ಕೋಟಿ ಬಳಕೆ ಮಾಡಿಲ್ಲ. ಈ ಹಣ ಬಿಡುಗಡೆಯಾಗಿ ಹಲವಾರು ತಿಂಗಳೇ ಕಳೆದಿದ್ದರೂ ಇನ್ನೂ ಪಂಚಾಯತಿಗಳಿಗೆ ಆ ಹಣ ಹೋಗಿಲ್ಲ ಎಂದು ಕೇಂದ್ರ ಸಚಿವರು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸರಕಾರಿ ಆಸ್ಪತ್ರೆಗಳ ಪರಿಸ್ಥಿತಿ ದಯನೀಯವಾಗಿದೆ. ಗುಣಮಟ್ಟದ ಚಿಕಿತ್ಸೆ ದೊರೆಯದೆ ಬಾಣಂತಿಯರು, ಮಕ್ಕಳ ಸರಣಿ ಸಾವುಗಳು ಸಂಭವಿಸುತ್ತಿವೆ. ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳಿಲ್ಲ. 2.756 ಲಕ್ಷ ಸರಕಾರಿ ಹುದ್ದೆಗಳು ಖಾಲಿ ಬಿದ್ದಿವೆ. ಹೀಗಿದ್ದ ಮೇಲೆ ಆಡಳಿತ ಹೇಗೆ ಉತ್ತಮವಾಗಿರಲು ಸಾಧ್ಯ ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.

ಸರಕಾರ ಪ್ರತಿದಿನವೂ ಗ್ಯಾರಂಟಿ ಗ್ಯಾರಂಟಿ ಎನ್ನುತ್ತಿದೆ. ಜನರಿಗೆ ಇನ್ನೂ ಎರಡು ಸಾವಿರ ರೂಪಾಯಿ ಕೊಡಲಿ, ನಮ್ಮ ಅಭ್ಯಂತವಿಲ್ಲ. ಆದರೆ, ಮಿತಿ ಮೀರಿದ ತೆರಿಗೆ ಹೇರಿಕೆ ಮಾಡುತ್ತಿದ್ದಾರೆ. ಎರಡು ಲಕ್ಷ ಕೋಟಿ ರೂಪಾಯಿ ಸಾಲ ಮಾಡಿ ಎರಡು ಸಾವಿರ ರೂಪಾಯಿ ಕೊಡಲಿಕ್ಕೆ ಇವರೇ ಬೇಕಾ? ಬೇಕಾಬಿಟ್ಟಿಯಾಗಿ ಆ ಸಾಲ ತೀರಿಸುವವರು ಯಾರು? ಜನ ಸಾಮಾನ್ಯರೇ ಆ ಸಾಲ ತೀರಿಸಬೇಕಲ್ವಾ? ಎಂದು ಕೇಂದ್ರ ಸಚಿವರು ಕಿಡಿಕಾರಿದರು.

ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿದ ಸಚಿವರು :
ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸೇನಾ ವಾಹನ ಪ್ರಪಾತಕ್ಕೆ ಉರುಳಿ ರಾಜ್ಯದ ಮೂವರು ಯೋಧರು ಹುತಾತ್ಮರಾಗಿವುದಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಕಂಬಿನಿ ಮಿಡಿದಿದ್ದಾರೆ.

ಅಪಘಾತದಲ್ಲಿ ಯೋಧರು ಸಾವನ್ನಪ್ಪಿದ ವಿಚಾರ ತಿಳಿದು ನನಗೆ ಬಹಳ ದುಃಖವಾಯಿತು. ಮೃತ ಯೋಧರಲ್ಲಿ ಮೂವರು ಕನ್ನಡಿಗರು ಇದ್ದಾರೆ. ಅವರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ. ಆ ಅನಾಹುತ ಕರುಣಾಜನಕ ಘಟನೆ. ಕೇಂದ್ರ ಸರಕಾರ ಆ ಕುಟುಂಬಗಳ ನೆರವಿಗೆ ನಿಲ್ಲಲಿದೆ ಎಂದು ಸಚಿವರು ಹೇಳಿದರು.

ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಶಾಸಕ ಹೆಚ್.ಟಿ.ಮಂಜುನಾಥ್, ಮಾಜಿ ಶಾಸಕ ಡಾ.ಕೆ.ಅನ್ನದಾನಿ, ರಾಮಚಂದ್ರ ಮುಂತಾದವರು ಜತೆಯಲ್ಲಿ ಇದ್ದರು.

You Might Also Like

ಕಾಂತಾರ ಚಾಪ್ಟರ್ 1 ಚಿತ್ರದ ಜೂನಿಯರ್ ಕಲಾವಿದ ನದಿಯಲ್ಲಿ ಮುಳುಗಿ ಸಾವು

ಭಾರಿ ಮಳೆಗೆ ಆಂಧ್ರ ಮತ್ತು ತೆಲಂಗಾಣದಲ್ಲಿ 29 ಮಂದಿ ಸಾವು

ಬೆಂಗಳೂರಿನಲ್ಲಿ ಮಳೆ ಆರ್ಭಟ, ವಾಹನ ಸವಾರರ ಪರದಾಟ

ಮುಡಾ ಹಗರಣದ ಇಡಿ ತನಿಖೆಗೆ ಹೈಕೋರ್ಟ್‌ ಅಸ್ತು, ಸಿಎಂ ಸಿದ್ದುಗೆ ಮತ್ತೆ ಸಂಕಷ್ಟ

ಮುಂದಿನ 6 ದಿನ ರಾಜ್ಯದ 10 ಜಿಲ್ಲೆಗಳಲ್ಲಿ ಭಾರೀ ಮಳೆ

Share This Article
Facebook Copy Link Print
Previous Article ಜಮ್ಮು-ಕಾಶ್ಮೀರದ ಸೇನಾ ವಾಹನ ಕಂದಕಕ್ಕೆ ಉರುಳಿ ಕರ್ನಾಟಕದ ಮೂವರು ಯೋಧರು ಹುತಾತ್ಮ
Next Article Christmas ಇಮ್ಮಾನುವೆಲ್ ಗ್ಲೋರಿ ಚರ್ಚ್ ನಲ್ಲಿ ಅದ್ದೂರಿಯಾಗಿ ಕ್ರಿಸಮಸ್ ಆಚರಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up