ಬೆಂಗಳೂರು : ಮುಂದಿನ ಐದು ದಿನಗಳ ಮತ್ತೆ ಮಳೆ ಅಲರ್ಟ್ ನೀಡಲಾಗಿದ್ದು ಇಂದು ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಎರಡೂ ಭಾಗದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಆಗಸ್ಟ್ 29 ರಿಂದ ಆಗಸ್ಟ್ 31ರ ವರೆಗೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಶೋಷಿಸಲಾಗಿದ್ದು, ಆಗಸ್ಟ್ 29 ರಿಂದ 30ರ ವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಆಗಸ್ಟ್ 29ರಿಂದ ಸೆಪ್ಟೆಂಬರ್1ರ ವರೆಗೆ ಉತ್ತರ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು ಈ ಕುರಿತು ಭಾರತೀಯ ಹವಾಮಾನ ಇಲಾಕೆಯಿಂದ ಮಾಧ್ಯಮಗಳಿಗೆ ಮಾಹಿತಿ ನೀಡಿದೆ.


