ಕರ್ನಾಟಕದ ಹವಾಮಾನ ಇಲಾಖೆಯು ಮೇ 17ರಿಂದ ರಾಜ್ಯದ 23 ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ಘೋಷಿಸಿದೆ. ಬೆಂಗಳೂರು ನಗರ ಮತ್ತು ಗ್ರಾಮೀಣ ಜಿಲ್ಲೆಗಳು ಸೇರಿದಂತೆ ರಾಯಚೂರು, ಯಾದಗಿರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ.
ಕರಾವಳಿ ಮತ್ತು ಮಲೆನಾಡ ಪ್ರದೇಶಗಳಲ್ಲಿ ಸಾಧಾರಣ ಮಳೆ
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಜಗಳೂರು, ಹರಪನಹಳ್ಳಿ, ಬೇಗೂರು, ಕೋಣನೂರು, ಚಿಂತಾಮಣಿ, ಚಿತ್ತಾಪುರ, ಹುಣಸೂರು, ಹೊಸಕೋಟೆ, ರಾಯಲ್ಪಾಡು, ಎಲೆಕ್ಟ್ರಾನಿಕ್ ಸಿಟಿ, ಚಾಮರಾಜನಗರ, ಲಕ್ಷ್ಮೇಶ್ವರ, ಬೀದರ್, ನಾಯಕನಹಟ್ಟಿ, ಹಿರಿಯೂರು, ನಾಪೋಕ್ಲು, ಕಡೂರು, ಅಂಕೋಲಾ, ಚಿಕ್ಕಬಳ್ಳಾಪುರ, ಬೆಂಗಳೂರು ಕೆಐಎಎಲ್, ಕಳಸ, ಶಿಗ್ಗಾಂವ್, ಚಿಟಗುಪ್ಪ, ಲೋಂಡಾ ಮತ್ತು ಗೋಕರ್ಣ ಪ್ರದೇಶಗಳಲ್ಲಿ ಸ್ಥಳೀಯ ಮಳೆ ಸಾಧ್ಯತೆ ಇದೆ.

