By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಯವಾಗಿ ರಾಜ್ಯ ಚಲನಚಿತ್ರ ಪ್ರಶಸ್ತಿ ತಿರಸ್ಕರಿಸಿದ ಕಿಚ್ಚ ಸುದೀಪ್, ಕಾರಣವೇನು..?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ನಯವಾಗಿ ರಾಜ್ಯ ಚಲನಚಿತ್ರ ಪ್ರಶಸ್ತಿ ತಿರಸ್ಕರಿಸಿದ ಕಿಚ್ಚ ಸುದೀಪ್, ಕಾರಣವೇನು..?

EntertainmentLatestMain PostTop Storiesಸ್ಯಾಂಡಲ್​ವುಡ್-Sandalwood

ನಯವಾಗಿ ರಾಜ್ಯ ಚಲನಚಿತ್ರ ಪ್ರಶಸ್ತಿ ತಿರಸ್ಕರಿಸಿದ ಕಿಚ್ಚ ಸುದೀಪ್, ಕಾರಣವೇನು..?

Here's why Kichcha Sudeep turned down Karnataka government's Best Actor Award

Published January 24, 2025
Share
3 Min Read
Kiccha Sudeep 2 Kiccha Sudeep 2 Kiccha Sudeep 2
SHARE

ಬೆಂಗಳೂರು : ‘ಪೈಲ್ವಾನ್’ ಚಿತ್ರಕ್ಕಾಗಿ ಸುದೀಪ್ ಅವರಿಗೆ ಬಂದಿದ್ದ 2019ರ ಸಾಲಿನ ‘ಉತ್ತಮ ನಟ’ ಎಂಬ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ಕಿಚ್ಚ ನಯವಾಗೇ ತಿರಸ್ಕರಿಸಿ ಅದಕ್ಕೆ ಸೂಕ್ತ ಕಾರಣ ಕೊಟ್ಟಿದ್ದಾರೆ. ಕೆಲ ವರ್ಷಗಳಿಂದ ಪ್ರಶಸ್ತಿಗಳನ್ನು ಸುದೀಪ್ ನಿರಾಕರಿಸುತ್ತಾ ಬಂದಿದ್ದಾರೆ. ಈ ನಿರಾಕರಣೆಯ ಹಿಂದೆ ಅದರದ್ದೇ ಆದ ನೋವಿದೆ ಎಂದು ಹೇಳಲಾಗುತ್ತಿದೆ.

2002ರ ನಂತರ ಕಿಚ್ಚ ಸುದೀಪ್​ಗೆ ಇದುವರೆಗೂ ರಾಜ್ಯ ಪ್ರಶಸ್ತಿ ಬಂದಿಲ್ಲ. 2004 ರಲ್ಲಿ ರಂಗ SSLC ನಟನೆಗೆ ರಾಜ್ಯ ಪ್ರಶಸ್ತಿ ನಿರೀಕ್ಷೆಯಲ್ಲಿದ್ದ ಕಿಚ್ಚ ಅವರಿಗೆ ಅದಕ್ಕೂ ಪ್ರಶಸ್ತಿ ಸಿಕ್ಕಿರಲಿಲ್ಲ. 2004 ರಲ್ಲಿ ಕಿಚ್ಚನಿಗೆ ರಾಜ್ಯ ಪ್ರಶಸ್ತಿ ಬಂದಿರಲಿಲ್ಲ. ಹೊಸ ನಟನಿಗೆ 2004 ರಲ್ಲಿ ರಾಜ್ಯ ಪ್ರಶಸ್ತಿ ಕೊಡಲಾಗಿತ್ತು.

ಇದಾದ ನಂತರ ರಾಜ್ಯ ಪ್ರಶಸ್ತಿ ಮೇಲಿನ ನಂಬಿಕೆ ಕಳೆದು ಕೊಂಡಿರುವ ಕಿಚ್ಚ ಅವರು ರಾಜ್ಯ ಪ್ರಶಸ್ತಿ ಪಡೆಯ ಬೇಕಾದರೆ ಲಾಭಿ ಮಾಡಬೇಕು. ಲಾಭಿ ಮಾಡುವ ಪ್ರಶಸ್ತಿಗಳು ನನಗೆ ಬೇಡವೇ ಬೇಡ ಎಂದು ಅವಾರ್ಡ್ ಮೇಲಿನ ನಂಬಿಕೆ ಕಳೆದು ಕೊಂಡಿರುವ ಬಗ್ಗೆ ಅಪ್ತರ ಬಳಿ ನಟ ಹೇಳಿದ್ದಾರೆ ಎನ್ನಲಾಗಿದೆ.

ಪಾತ್ರದಲ್ಲಿ ಕಿಚ್ಚ ಹೇಳಿದ್ದೇನು..?
‘ನನಗೆ ಅತ್ಯುತ್ತಮ ನಟ ವಿಭಾಗದಲ್ಲಿ 2019ರ ರಾಜ್ಯ ಪ್ರಶಸ್ತಿ ಸಿಕ್ಕಿರೋದು ನಿಜಕ್ಕೂ ಒಂದು ಗೌರವದ ವಿಷಯ. ಈ ಗೌರವ ನೀಡಿದ್ದಕ್ಕಾಗಿ ನಾನು ತೀರ್ಪುಗಾರರಿಗೆ ಹಾಗೂ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸುತ್ತೇನೆ. ಆದರೆ ನಾನು ಅನೇಕ ವರ್ಷಗಳಿಂದ ಪ್ರಶಸ್ತಿಗಳನ್ನು ಪಡೆಯೋದನ್ನು ನಿಲ್ಲಿಸಿದ್ದೇನೆ.

Respected Government of Karnataka and Members of the Jury,

It is truly a privilege to have received the state award under the best actor category, and I extend my heartfelt thanks to the respected jury for this honor. However, I must express that I have chosen to stop receiving…

— Kichcha Sudeepa (@KicchaSudeep) January 23, 2025

ನನ್ನದೇ ಆದ ಕೆಲವು ವೈಯಕ್ತಿಕ ಕಾರಣಗಳಿಂದ ನಾನು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ನಟನೆ ಕಲೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ಅನೇಕ ಕಲಾವಿದರಿದ್ದಾರೆ. ಈ ಪ್ರತಿಷ್ಠಿತ ಮನ್ನಣೆಯನ್ನು ನಾನು ಮೆಚ್ಚುತ್ತೇನೆ. ಆದರೆ ನಾನು ಈ ಪ್ರಶಸ್ತಿಯನ್ನು ಸ್ವೀಕಾರ ಮಾಡೋದಕ್ಕಿಂತ ನನಗಿಂತಲೂ ಅರ್ಹರೊಬ್ಬರು ಪ್ರಶಸ್ತಿ ಪಡೆಯೋದನ್ನು ನೋಡೋದು ನನಗೆ ತುಂಬ ಖುಷಿ ಕೊಡುತ್ತದೆ’ ಎಂದು ನಟ ಕಿಚ್ಚ ಸುದೀಪ್‌ ಅವರು ಸೋಶಿಯಲ್‌ ಮೀಡಿಯಾದಲ್ಲಿ ಪತ್ರ ಬರೆದು ತಿಳಿಸಿದ್ದಾರೆ.

ಮುಂದುವರೆದು ಕಿಚ್ಚ ಸುದೀಪ್ ‘ಸಿನಿಪ್ರೇಕ್ಷಕರನ್ನು ರಂಜಿಸೋದು ನನ್ನ ಕೆಲಸ. ಇಷ್ಟು ವರ್ಷಗಳಿಂದ ಈ ಕೆಲಸವನ್ನು ಯಾವುದೇ ಪ್ರಶಸ್ತಿ-ಪುರಸ್ಕಾರಗಳ ನಿರೀಕ್ಷೆಯೇ ಇಲ್ಲದೆ ಮಾಡುತ್ತ ಬಂದಿದ್ದೇನೆ. ತೀರ್ಪುಗಾರರ ಈ ನಿರ್ಧಾರವು ಸ್ವಾಗತಾರ್ಹ, ಇದು ನನ್ನನ್ನು ಇನ್ನಷ್ಟು ಹೆಚ್ಚು ಸಿನಿಮಾದಲ್ಲಿ ತೊಡಗಿಸಿಕೊಳ್ಳಲು, ಕೆಲಸ ಮಾಡಲು, ಮುಂದುವರೆಯಲು ಇನ್ನಷ್ಟು ಹೆಚ್ಚಾಗಿ ಪ್ರೇರೇಪಿಸುವುದು ಖಂಡಿತ.

2019ರ ಅತ್ಯುತ್ತಮ ನಟ ಪ್ರಶಸ್ತಿಗೆ ನೀವೆಲ್ಲ ನನ್ನನ್ನು ಆಯ್ಕೆ ಮಾಡಿದ್ದಕ್ಕಾಗಿ ನಾನು ಪ್ರತಿಯೊಬ್ಬ ತೀರ್ಪುಗಾರರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ನನ್ನ ಈ ನಿರ್ಧಾರದಿಂದ ತೀರ್ಪುಗಾರರು ಹಾಗು ರಾಜ್ಯ ಸರ್ಕಾರಕ್ಕೆ ನೋವಾದರೆ, ನಾನು ಪ್ರಾಮಾಣಿಕವಾಗಿ ಕ್ಷಮೆ ಕೇಳುತ್ತೇನೆ. ಆದರೆ, ನೀವು ನನ್ನ ಈ ನಿರ್ಧಾರವನ್ನು ಗೌರವಿಸುತ್ತೀರಿ, ನನ್ನ ಆಯ್ಕೆಯಲ್ಲಿ ನಾನು ಸಾಗಲು ನನ್ನನ್ನು ಬೆಂಬಲಿಸುತ್ತೀರಿ ಎಂದು ನಂಬಿರುವೆ. ನನ್ನ ಕೆಲಸವನ್ನು ಗುರುತಿಸಿ ಈ ಪ್ರಶಸ್ತಿ ಕೊಡಲು ನಿರ್ಧಾರ ಮಾಡಿದವರಿಗೆ, ರಾಜ್ಯ ಸರ್ಕಾರಕ್ಕೆ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸುತ್ತೇನೆ’ ಎಂದು ನಟ ಕಿಚ್ಚ ಸುದೀಪ್‌ ಹೇಳಿದ್ದಾರೆ.

ನೋವು ನೀಡಿದ್ದ ಆ ಎರಡು ಘಟನೆಗಳು “
‘ರಂಗ ಎಸ್ಎಸ್ಎಲ್​ಸಿ’ (2004) ಮತ್ತು ‘ಮುಸ್ಸಂಜೆ ಮಾತು’ (2008) ಸಿನಿಮಾ ಮಾಡಿದಾಗ ಪ್ರಶಸ್ತಿ ಕಮಿಟಿಯಲ್ಲಿದ್ದವರೇ ಸುದೀಪ್‌ಗೆ ಕರೆ ಮಾಡಿ ನಿಮಗೆ ಅತ್ಯುತ್ತಮ ನಟ ಪ್ರಶಸ್ತಿ ಬಂದಿದೆ ಎಂದು ಹೇಳಿದ್ದರಂತೆ. ಚಿತ್ರರಂಗದಲ್ಲಿ ಗುರುತಿಸಿಕೊಳ್ಳುವಾಗ ಅವಾರ್ಡ್ ಬಂದಿದೆ ಎಂದರೆ ಖುಷಿ ಆಗಿಯೇ ಆಗುತ್ತದೆ. ಹೀಗಾಗಿ ಅವಾರ್ಡ್​ ಕಮಿಟಿಯವರ ಮಾತನ್ನು ಕೇಳಿ ಸುದೀಪ್ ಸಂಭ್ರಮಿಸಿದ್ದರಂತೆ.

ಆದರೆ, ರಾಜ್ಯ ಪ್ರಶಸ್ತಿ ಘೋಷಣೆ ಆದಾಗ ಮಾತ್ರ ಅಲ್ಲಿ ಅದು ಬೇರೆ ನಟರ ಪಾಲಾಗಿತ್ತು. ಈ ಎರಡು ಘಟನೆಯಿಂದಾಗಿ ಅವರು ಪ್ರಶಸ್ತಿಗಳನ್ನು ನಿರಾಕರಿಸುತ್ತಲೇ ಬಂದಿದ್ದಾರೆ ಎಂದಿದ್ದಾರೆ. ಈ ಮೊದಲು ‘ಸೈಮಾ ಅವಾರ್ಡ್​’ ಸಮಾರಂಭಕ್ಕೆ ಗೆಸ್ಟ್ ಆಗಿ ಹೋಗಿದ್ದರು ಅಷ್ಟೇ. ಅದನ್ನು ಹೊರತುಪಡಿಸಿ ಅವರು ಅವಾರ್ಡ್ ಸ್ವೀಕರಿಸಿಲ್ಲ.

2019ರ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರ ಘೋಷಿಸಿದೆ. ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್‌ ಅವರು ಅತ್ಯುತ್ತಮ ನಟ ಪ್ರಶಸ್ತಿ ಹಾಗೂ ಅನುಪಮಾ ಗೌಡ ಅವರು ಅತ್ಯುತ್ತಮ ನಟಿ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಈ ಪ್ರಶಸ್ತಿಯು 20 ಸಾವಿರ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ ಒಳಗೊಂಡಿದೆ.

You Might Also Like

Uttarakhand: ಕಾರಿನಲ್ಲಿ ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಆತ್ಮಹತ್ಯೆ

ಇಂದಿನ TOP 10 ಸುದ್ದಿಗಳು (08-04-2025)

ದರ್ಶನ್ ಅರೆಸ್ಟ್…ಮೊದಲ ಬಾರಿಗೆ ಬೇಸರ ಹೊರ ಹಾಕಿದ ಪತ್ನಿ ವಿಜಯಲಕ್ಷ್ಮಿ

ಮಾಲಿವುಡ್‌ ಹೇಮಾ ಕಮಿಟಿಯಂತೆ ಸ್ಯಾಂಡಲ್‌ವುಡ್‌ನಲ್ಲಿಯೂ ಕಮಿಟಿ ರಚನೆ ಕುರಿತು ಮಹತ್ವದ ಸಭೆ

ರಾಮಲಲ್ಲಾನ ಪ್ರಾಣಪ್ರತಿಷ್ಠೆಯಲ್ಲಿ ಭಾಗಿಯಾಗಿದ್ದ ಅರ್ಚಕ ನಿಧನ

TAGGED:Best Actor AwardKarnataka Film AwardsKichcha Sudeep
Share This Article
Facebook Copy Link Print
Previous Article Jagadish ಕಿರಿಕ್ ಲಾಯರ್ ಖ್ಯಾತಿಯ ಜಗದೀಶ್‌ಗೆ ನಡುರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿತ
Next Article Gallantry Medals 76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ 942 ಸಿಬ್ಬಂದಿಗಳಿಗೆ ಶೌರ್ಯ ಪ್ರಶಸ್ತಿ ಪ್ರಕಟ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up