ಕೇರಳದ (Kerala) ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ (BJP) ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು (Voting Machine) ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ.
ಅಣಕು ಮತದಾನ ನಡೆದ ವೇಳೆ 4 ಇವಿಎಂಗಳು ಮತ್ತು ವಿವಿಪ್ಯಾಟ್ಗಳ ಹೋಲಿಕೆಯಲ್ಲಿ ಬಿಜೆಪಿಗೆ ಒಂದು ಹೆಚ್ಚುವರಿ ಮತ ಬಂದಿದೆ. ಮಾಧ್ಯಮಗಳ ವರದಿ ಆಧರಿಸಿ ವಕೀಲ ಪ್ರಶಾಂತ್ ಭೂಷಣ್ ಕೋರ್ಟ್ ಮುಂದೆ ಈ ವಿಚಾರ ಪ್ರಸ್ತಾಪಿಸಿದರು. ಮನವಿಯನ್ನು ಆಲಿಸಿದ ಪೀಠ ಚುನಾವಣಾ ಆಯೋಗದ ಸಲಹೆಗಾರ ಮಣಿಂದರ್ ಸಿಂಗ್ ಅವರಿಗೆ ಸೂಚನೆ ನೀಡಿದೆ. ಇದನ್ನೂ ಓದಿ: ಸ್ಮೋಕ್ ಬಿಸ್ಕೆಟ್ ತಿಂದು ಬಾಲಕ ಅಸ್ವಸ್ಥ
ಪ್ರತಿ ಮತವನ್ನು ಚುನಾವಣಾ ಸಮಯದಲ್ಲಿ ವಿವಿಪ್ಯಾಟ್ ಸ್ಲಿಪ್ ಗಳೊಂದಿಗೆ ತಾಳೆ ಮಾಡಲು ಕೋರಿ ಸಲ್ಲಿಸಲಾದ ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ಅರ್ಜಿದಾರರಲ್ಲಿ ಒಬ್ಬರಾದ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ಅರುಣ್ ಕುಮಾರ್ ಅಗರ್ವಾಲ್ ಪ್ರತಿಯೊಂದು ಇವಿಎಂ ಮತವನ್ನು ವಿವಿಪ್ಯಾಟ್ ಸ್ಲಿಪ್ಗಳಿಗೆ ಹೋಲಿಸಿ ಪರಿಶೀಲಿಸಬೇಕು ಎಂದು ಮನವಿ ಮಾಡಿದ್ದರು.ಇದನ್ನೂ ಓದಿ: ಗಂಡನ ಮನೆಯವರಿಂದ ಮಕ್ಕಳಾಗಿಲ್ಲ ಎಂದು ಕಿರುಕುಳ- ಮನನೊಂದು ಮಹಿಳೆ ಆತ್ನಹತ್ಯೆ
ಮತದಾರರ ಮತವನ್ನು ದಾಖಲಿಸಿದಂತೆ ಖಚಿತಪಡಿಸಿಕೊಳ್ಳಲು ಮತಪೆಟ್ಟಿಗೆಯಲ್ಲಿ ವಿವಿಪ್ಯಾಟ್ ಸ್ಲಿಪ್ಗಳನ್ನು ಭೌತಿಕವಾಗಿ ಬಿಡಲು ಮತದಾರರಿಗೆ ಅವಕಾಶ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಪ್ರಸ್ತುತ, ಪ್ರತಿ ವಿಧಾನಸಭೆ ಚುನಾವಣೆಯಲ್ಲಿ ಆಯ್ಕೆ ಮಾಡಿದ ಐದು ಇವಿಎಂಗಳಲ್ಲಿ ದಾಖಲಾದ ಮತಗಳಿಗೆ ಮಾತ್ರ ವಿವಿಪ್ಯಾಟ್ ಪರಿಶೀಲನೆಯನ್ನು ಮಾಡಲಾಗುತ್ತಿತ್ತು. ಇದನ್ನೂ ಓದಿ: ಜೈಲಿನಲ್ಲಿ ಹಣ ಬೇಡಿಕೆ ಇಟ್ಟ ಜೈಲರ್ ಸಸ್ಪೆಂಡ್

