ನವದೆಹಲಿ: ನಾನು, ನನ್ನ ಪೋಷಕರು ಮತ್ತು ಹೆಂಡತಿಯೊಂದಿಗೆ ಪೊಲೀಸರಿಗಾಗಿ ಕಾಯುತ್ತಿದ್ದೇನೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಹೇಳಿದ್ದಾರೆ.

ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ (Swati Maliwal) ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಕ್ಸ್ನಲ್ಲಿ ಕೇಜ್ರಿವಾಲ್ ಪೋಸ್ಟ್ ಹಾಕಿದ್ದು, ತಮ್ಮ ಪೋಷಕರು, ಪತ್ನಿ ಜೊತೆ ಮನೆಯಲ್ಲಿ ಕಾಯುತ್ತಿರುವ ವೀಡಿಯೋ ಕೂಡ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣ ಅತ್ಯಂತ ಸ್ವಚ್ಛ ನಿಲ್ದಾಣ ಹೆಗ್ಗಳಿಕೆಗೆ ಪಾತ್ರ
ಸ್ವಾತಿ ಮಲಿವಾಲ್ ಅವರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್ (Bibhav Kumar) ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣ ಅತ್ಯಂತ ಸ್ವಚ್ಛ ನಿಲ್ದಾಣ ಹೆಗ್ಗಳಿಕೆಗೆ ಪಾತ್ರ
ಪ್ರಕರಣ ಸಂಬಂಧ ಬುಧವಾರ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದ ಕೇಜ್ರಿವಾಲ್ ಅವರು, ನ್ಯಾಯಯುತ ತನಿಖೆ ಆಗಬೇಕು ಎಂದು ಕೋರಿದ್ದರು.ಇದನ್ನೂ ಓದಿ: ರೇವ್ ಪಾರ್ಟಿ ಪ್ರಕರಣ: 86 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್

