ಡೆಮಾಸ್ಕಸ್:: ಜಿಹಾದಿ ಗುಂಪು ಹಯಾತ್ ತಹ್ರೀರ್ ಅಲ್-ಶಾಮ್ ನೇತೃತ್ವದ ದಂಗೆಕೋರರು ಸಿರಿಯಾದ ಪ್ರಮುಖ ನಗರಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಬಿಕ್ಕಟ್ಟು ತಲೆದೋರಿದ್ದು, ಭಾರತೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸಿರಿಯಾದಲ್ಲಿ ಹದಗೆಡುತ್ತಿರುವ ಈ ಪರಿಸ್ಥಿತಿಯ ಬಗ್ಗೆ ಭಾರತ ಸರ್ಕಾರ ಕಳವಳ ವ್ಯಕ್ತಪಡಿಸಿದರೆ. ಆದಷ್ಟು ಬೇಗ ಅಲ್ಲಿಂದ ಭಾರತಕ್ಕೆ ವಾಪಸ್ ಆಗಿ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಸೂಚನೆ ನೀಡಿದೆ.
ಭಾರತದ ವಿದೇಶಾಂಗ ಸಚಿವಾಲಯ ಪ್ರಕಟಣೆ ಹೊರಡಿಸಿದ್ದು, ಅನಗತ್ಯ ಪ್ರಯಾಣ ಮುಂದೂಡಿ. ಲಭ್ಯವಿರುವ ವಾಣಿಜ್ಯ ವಿಮಾನಗಳ ಮೂಲಕ ಸಿರಿಯಾ ತೊರೆದು, ಆದಷ್ಟು ಬೇಗ ವಾಪಸ್ ಬನ್ನಿ ಎಂದು ಸಲಹೆ ನೀಡಿದೆ.
ತುರ್ತು ಸಹಾಯವಾಣಿ ಸಂಖ್ಯೆಯನ್ನು (+963 993385973) ಡೆಮಾಸ್ಕಸ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಗಾಗಿ ಹಂಚಿಕೊಳ್ಳಲಾಗಿದೆ.

