ಶ್ರೀನಗರ : ಇದು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ಮೊದಲ ವಿಧಾನಸಭಾ ಚುನಾವಣೆಯಾಗಿದೆ.24 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ಮೂರು ಹಂತದ ಚುನಾವಣೆಯ ಮೊದಲ ಹಂತದಲ್ಲಿ ಇಂದು ಪಿರ್ ಪಂಜಾಲ್ ಪರ್ವತ ಶ್ರೇಣಿಯ ಎರಡೂ ಬದಿಯಲ್ಲಿರುವ ಜಮ್ಮು ಮತ್ತು ಕಾಶ್ಮೀರದ ಏಳು ಜಿಲ್ಲೆಗಳು ತಮ ಪ್ರತಿನಿಧಿಗಳನ್ನು ಆಯ್ಕೆ ಮಾಡಲಿದ್ದಾರೆ. 90 ಪಕ್ಷೇತರರು ಸೇರಿದಂತೆ 219 ಅಭ್ಯರ್ಥಿಗಳ ಭವಿಷ್ಯವನ್ನು 23 ಲಕ್ಷಕ್ಕೂ ಹೆಚ್ಚು ಮತದಾರರು ನಿರ್ಧರಿಸಲಿದ್ದಾರೆ.
370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಮೊದಲ ಬಾರಿಗೆ, ಕೇಂದ್ರಾಡಳಿತ ಪ್ರದೇಶದ ಏಳು ಜಿಲ್ಲೆಗಳಲ್ಲಿ ಹರಡಿರುವ 24 ಕ್ಷೇತ್ರಗಳು ಬಿಗಿಯಾದ ಭದ್ರತಾ ವ್ಯವಸ್ಥೆಗಳ ನಡುವೆ ಮತದಾನ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಚುನಾವಣಾ ಆಯೋಗದ ಪ್ರಕಾರ, 11,76,462 ಪುರುಷರು, 11,51,058 ಮಹಿಳೆಯರು ಮತ್ತು 60 ತೃತೀಯಲಿಂಗಿ ಮತದಾರರನ್ನು ಒಳಗೊಂಡಂತೆ ಒಟ್ಟು 23,27,580 ಮತದಾರರು ಹಂತ 1 ರಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದರು.ಸರಿ ಸುಮಾರು ಶೇ.60 ರಷ್ಟು ಮತದಾನ ನಿರೀಕ್ಷಿಸಲಾಗಿದೆ.
18 ರಿಂದ 19 ವರ್ಷ ವಯಸ್ಸಿನ 1.23 ಲಕ್ಷ ಯುವಕರು, 28,309 ವಿಕಲಾಂಗ ವ್ಯಯಕ್ತಿಗಳು (ಮತ್ತು 85 ವರ್ಷಕ್ಕಿಂತ ಮೇಲ್ಪಟ್ಟ 15,774 ಹಿರಿಯ ಮತದಾರರು ಸಹ ಮೊದಲ ಹಂತದಲ್ಲಿ ತಮ್ಮ ಹಕ್ಕು ಚಲಾಯಿಸಲು ಮುಂದಾಗಿದ್ದಾರೆ.
ಒಟ್ಟಾರೆ 3,276 ಮತಗಟ್ಟೆಗಳಲ್ಲಿ ಒಟ್ಟು 14,000 ಮತಗಟ್ಟೆ ಸಿಬ್ಬಂದಿ ಪ್ರಕ್ರಿಯೆಯ ಮೇಲ್ವಿಚಾರಣೆ ನಡೆಸಲಿದ್ದಾರೆ 302 ನಗರ ಮತಗಟ್ಟೆಗಳು ಮತ್ತು 2,974 ಗ್ರಾಮೀಣ ಮತಗಟ್ಟೆಗಳಿವೆ. ಪ್ರತಿ ಮತಗಟ್ಟೆಯಲ್ಲಿ ಒಬ್ಬ ಉಸ್ತುವಾರಿ ಸೇರಿದಂತೆ ನಾಲ್ವರು ಚುನಾವಣಾ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಸುಮಾರು 14,000 ಕ್ಕೂ ಹೆಚ್ಚು ಚುನಾವಣಾ ಸಿಬ್ಬಂದಿಯನ್ನು ಚುನಾವಣೆಗೆ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದರು. ಇನ್ನೆರಡು ಹಂತಗಳು ಚುನಾವಣೆ ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ನಡೆಯಲಿದ್ದು, ಮತಗಳ ಎಣಿಕೆ ಅಕ್ಟೋಬರ್ 8 ರಂದು ನಡೆಯಲಿದೆ.
ಮೋದಿ, ಅಮಿತ್ ಶಾ ನೇತೃತ್ವದ ಬಿಜೆಪಿ, ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಡ, ಮೆಹಬೂಬಾ ಮುಫ್ತಿಯವರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಮತ್ತು ಇತರ ಪಕ್ಷಗಳು ಅಬ್ದುಲ್ ಘನಿ ಲೋನ್ ಅವರ ಪೀಪಲ್ಸ್ ಕಾನ್ಫರೆನ್ಸ್, ಗುಲಾಮ್ ನಬಿ ಆಜಾದ್ ಅವರ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ ಮತ್ತು ಅಲ್ತಾಫ್ ಬುಖಾರಿಯವರ ಅಪ್ನಿ ಪಾರ್ಟಿ ಚುನಾವಣೆಯಲ್ಲಿ ಸ್ಪರ್ಧಿಸಲಿವೆ. ಕೆಲವು ಅಭ್ಯರ್ಥಿಗಳನ್ನು ಬೆಂಬಲಿಸುತ್ತಿರುವ ನಿಷೇಧಿತ ಜಮಾತೆ ಇಸ್ಲಾಮಿ ಚುನಾವಣೆಗೆ ಎಂಟ್ರಿ ಕೊಟ್ಟಿರುವುದು ಕುತೂಹಲಕಾರಿ ಬೆಳವಣಿಗೆಯಾಗಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಹಕ್ಕು ಚಲಾಯಿಸಲು ಮೋದಿ ಕರೆ :
ಜಮ್ಮು ಮತ್ತು ಕಾಶ್ಮೀರದ ಜನತೆ ಅದರಲ್ಲೂ ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ ಪ್ರಜಾಪ್ರಭುತ್ವದ ಹಬ್ಬವನ್ನು ಬಲಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಅರ್ಟಿಕಲ್ 370 ರದ್ದುಗೊಂಡ ನಂತರ ಇದೇ ಮೊದಲ ಬಾರಿಗೆ ಜಮು-ಕಾಶೀರದಲ್ಲಿ ಚುನಾವಣೆ ನಡೆಯುತ್ತಿದ್ದು, ಕಣಿವೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ ಮತ್ತು ಪ್ರಜಾಪ್ರಭುತ್ವದ ಹಬ್ಬವನ್ನು ಬಲಪಡಿಸುವಂತೆ ನಾನು ವಿನಂತಿಸುತ್ತೇನೆ ಎಂದು ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ನಾನು ವಿಶೇಷವಾಗಿ ಯುವ ಮತ್ತು ಮೊದಲ ಬಾರಿಗೆ ಮತದಾರರಿಗೆ ತಮ ಹಕ್ಕು ಚಲಾಯಿಸಲು ಕರೆ ನೀಡುತ್ತೇನೆ ಎಂದು ಅವರು ಹೇಳಿದರು. ಮೂರು ಹಂತದ ಚುನಾವಣೆಯ ಮೊದಲ ಹಂತದಲ್ಲಿ, ಪಿರ್ ಪಂಜಾಲ್ ಪರ್ವತ ಶ್ರೇಣಿಯ ಎರಡೂ ಬದಿಯಲ್ಲಿರುವ ಜಮು ಮತ್ತು ಕಾಶೀರದ ಏಳು ಜಿಲ್ಲೆಗಳು ತಮ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಮತದಾನ ಮಾಡುತ್ತಿವೆ.
ಪ್ರತ್ಯೇಕತಾವಾದ ಕೊನೆಗಾಣಿಸಲು ಮತದಾನ ಮಾಡಿ : ಅಮಿತ್ ಶಾ
ಯುವಕರ ಶಿಕ್ಷಣ, ಉದ್ಯೋಗ, ಮಹಿಳೆಯರ ಸಬಲೀಕರಣ ಮತ್ತು ಪ್ರತ್ಯೇಕತಾವಾದವನ್ನು ಕೊನೆಗಾಣಿಸಲು ಬದ್ಧವಾಗಿರುವ ಸರಕಾರ ರಚಿಸಲು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಜಮು ಮತ್ತು ಕಾಶೀರದ ಜನತೆಗೆ ಕೇಂದ್ರ ಗಹ ಸಚಿವ ಅಮಿತ್ ಶಾ ಮನವಿ ಮಾಡಿದ್ದಾರೆ.
ಬಲವಾದ ಇಚ್ಛಾಶಕ್ತಿ ಹೊಂದಿರುವ ಸರ್ಕಾರ ಮಾತ್ರ ಭಯೋತ್ಪಾದನೆ ಮುಕ್ತ ಜಮು ಮತ್ತು ಕಾಶೀರವನ್ನು ರಚಿಸಲು, ಅಲ್ಲಿನ ನಾಗರಿಕರ ಹಕ್ಕುಗಳನ್ನು ರಕ್ಷಿಸಲು ಮತ್ತು ಅಭಿವದ್ಧಿ ಕಾರ್ಯಗಳನ್ನು ವೇಗಗೊಳಿಸಲು ಸಾಧ್ಯ ಎಂದು ಶಾ ಹೇಳಿದರು.
ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶ ಮಾಡಿದವರನ್ನು ಗಮನದಲ್ಲಿಟ್ಟುಕೊಂಡು ಮತ ಹಾಕಿ : ಖರ್ಗೆ
ಜಮ್ಮು ಮತ್ತು ಕಾಶ್ಮಿರದ ಮತದಾರರು ತಮ್ಮ ಮತ ಚಲಾಯಿಸುವಾಗ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶದಿಂದ ಕೆಳಮಟ್ಟಕ್ಕಿಳಿಸಿರುವ ಅಪಹಾಸ್ಯಕ್ಕೆ ಯಾರು ಹೊಣೆ ಎಂಬುದನ್ನು ನೆನಪಿಟ್ಟುಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿಕೊಂಡಿದ್ದಾರೆ. ಜಮು ಮತ್ತು ಕಾಶೀರದ ಜನರು ತಮ ಹಕ್ಕುಗಳನ್ನು ಕಾಪಾಡಲು ಮತ್ತು ನಿಜವಾದ ಅಭಿವದ್ಧಿ ಮತ್ತು ಸಂಪೂರ್ಣ ರಾಜ್ಯತ್ವದ ಹೊಸ ಯುಗವನ್ನು ಪ್ರಾರಂಭಿಸಲು ಉತ್ಸುಕರಾಗಿದ್ದಾರೆ ಎಂದು ಖರ್ಗೆ ಪ್ರತಿಪಾದಿಸಿದರು.

