ನವದೆಹಲಿ: ಮದ್ಯ ನೀತಿ ಆಗರಣದಲ್ಲಿ ಜೈಲು (jail) ಪಾಲಾಗಿದ್ದ ಅರವಿಂದ್ ಕೇಜ್ರಿವಾಲ್ (Aravind Kreziwal) ಅವರ 50 ದಿನಗಳ ಸೆರೆವಾಸಕ್ಕೆ ಮಧ್ಯಂತರ ವಿರಾಮ ಸಿಕ್ಕಿದ್ದು, ನ್ಯಾಯಲಯ ಷರತ್ತುಬದ್ದ ಮಧ್ಯಂತರ ಜಾಮೀನು (Bail) ನೀಡಿದೆ ನಿನ್ನೆ ಕುಟುಂಬದವರು ಆರತಿ ಬೆಳಗುವ ಮೂಲಕ ಸ್ವಾಗತಿಸಿದ್ದಾರೆ.
ಮಧ್ಯಂತರ ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಹೊರ ಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ದೇವರ ಆಶೀರ್ವಾದ ನನ್ನ ಜೊತೆಗಿದೆ. ಸರ್ವಾಧಿಕಾರದ ವಿರುದ್ಧ ನಾವು ಹೋರಾಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ:SSLC ವಿದ್ಯಾರ್ಥಿನಿ ಭೀಕರ ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್ – ಇನ್ನೂ ಪತ್ತೆಯಾಗದ ರುಂಡ

ಇಂದು ಬೆಳಗ್ಗೆ 11 ಗಂಟೆಗೆ ಹನುಮಾನ್ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದು ಕೇಜ್ರಿವಾಲ್ ಅವರು ಭಾಗಿಯಾಗಲಿದ್ದಾರೆ. ನಂತರ ಮಧ್ಯಾಹ್ನ ಒಂದು ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಬಳಿಕ ಚುನಾವಣಾ ಪ್ರಚಾರಕ್ಕೆ ತೆರಳಲಿದ್ದಾರೆ. ಇದನ್ನೂ ಓದಿ: ದೇವರಾಜೇಗೌಡ ಇಂದು ನ್ಯಾಯಾಧೀಶರ ಮುಂದೆ

