ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ವಿಧಿಸಿರುವ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ವಿಧಾನಸೌಧದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಂತಾಗಿದೆ ಎಂದು ಆರೋಪಿಸಿದರು. ಸರ್ವಾಧಿಕಾರಿ ಮನೋಭಾವ ಕಾಂಗ್ರೆಸ್ ನಾಯಕರ ಡಿಎನ್ಎಯಲ್ಲೇ ಇದೆ ಎಂದು ಟೀಕಿಸಿದರು. ಮಾಧ್ಯಮಗಳಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಸಂಪೂರ್ಣ ಅವಕಾಶ ಇರಬೇಕು ಎಂದು ಅವರು ಹೇಳಿದರು.
ಕಾಂಗ್ರೆಸ್ ಸರ್ಕಾರದ ನಡೆ ಕರಾಳ ದಿನವನ್ನು ನೆನಪಿಸುವಂತಾಗಿದೆ ಎಂದು ಹೇಳಿದ ನಿಖಿಲ್, ಜೆಡಿಎಸ್ ಹಾಗೂ ಏಳು ಕೋಟಿ ಕನ್ನಡಿಗರು ಪತ್ರಕರ್ತರ ಜೊತೆಗೆ ನಿಂತಿದ್ದಾರೆ ಎಂದು ಸ್ಪಷ್ಟಪಡಿಸಿದರು.

