ನವದೆಹಲಿ: ತಿಹಾಶದಲ್ಲೇ ಮೊದಲ ಬಾರಿಗೆ ತಾಲಿಬಾನ್ ವಿದೇಶಾಂಗ ಸಚಿವರ ಜೊತೆ ಎಸ್.ಜೈಶಂಕರ್ ಮಾತುಕತೆ ನಡೆಸಿದ್ದಾರೆ. ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತದ ಜೊತೆ ಭಾರತವು ನಡೆಸಿದ ಮೊದಲ ಸಚಿವ ಮಟ್ಟದ ಸಂಪರ್ಕ ಇದಾಗಿರುವುದರಿಂದ ಈ ಕರೆ ಮಹತ್ವದ್ದಾಗಿದೆ.
ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ತಾಲಿಬಾನ್ ಹಂಗಾಮಿ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಾಕಿ ಅವರೊಂದಿಗೆ ಮೊದಲ ಬಾರಿಗೆ ಸಂವಾದ ನಡೆಸಿದ ನಂತರ ಉಭಯ ದೇಶಗಳ ನಡುವೆ ಅಪನಂಬಿಕೆಯನ್ನು ಸೃಷ್ಟಿಸುವ ಪ್ರಯತ್ನಗಳನ್ನು ಅಫ್ಘಾನಿಸ್ತಾನ ತಿರಸ್ಕರಿಸಿರುವುದನ್ನು ಭಾರತ ಗುರುವಾರ ಸ್ವಾಗತಿಸಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಕ್ಕಾಗಿ ಜೈಶಂಕರ್ ಮುತ್ತಾಕಿ ಅವರಿಗೆ ಧನ್ಯವಾದ ಅರ್ಪಿಸಿದರು.
ಗುರುವಾರ ದೂರವಾಣಿ ಸಂಭಾಷಣೆಯಲ್ಲಿ, ಜೈಶಂಕರ್ ಅಫ್ಘಾನ್ ಜನರೊಂದಿಗೆ ಭಾರತದ ಸಾಂಪ್ರದಾಯಿಕ ಸ್ನೇಹವನ್ನು ಒತ್ತಿಹೇಳಿದರು ಮತ್ತು ಅವರ ಅಭಿವೃದ್ಧಿ ಅಗತ್ಯಗಳಿಗೆ ಭಾರತದ ನಿರಂತರ ಬೆಂಬಲವನ್ನು ಪುನರುಚ್ಚರಿಸಿದರು. ತಾಲಿಬಾನ್ ಸಚಿವರೊಂದಿಗಿನ “ಉತ್ತಮ ಸಂಭಾಷಣೆ” ಎಂದು ಕರೆದ ಜೈಶಂಕರ್, “ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಖಂಡಿಸುವುದನ್ನು ಆಳವಾಗಿ ಪ್ರಶಂಸಿಸುತ್ತೇನೆ” ಎಂದು ಬರೆದಿದ್ದಾರೆ.
“ಸುಳ್ಳು ಮತ್ತು ಆಧಾರರಹಿತ ವರದಿಗಳ ಮೂಲಕ ಭಾರತ ಮತ್ತು ಅಫ್ಘಾನಿಸ್ತಾನದ ನಡುವೆ ಅಪನಂಬಿಕೆಯನ್ನು ಸೃಷ್ಟಿಸುವ ಇತ್ತೀಚಿನ ಪ್ರಯತ್ನಗಳನ್ನು ಅವರು ದೃಢವಾಗಿ ತಿರಸ್ಕರಿಸಿರುವುದನ್ನು ಸ್ವಾಗತಿಸುತ್ತೇನೆ” ಎಂದು ಜೈಶಂಕರ್ ಹೇಳಿದರು, ಪಹಲ್ಗಾಮ್ನಲ್ಲಿ “ಸುಳ್ಳು ಧ್ವಜ” ಕಾರ್ಯಾಚರಣೆ ನಡೆಸಲು ಭಾರತವು ತಾಲಿಬಾನ್ ಅನ್ನು “ನೇಮಿಸಿಕೊಂಡಿದೆ” ಎಂದು ಪಾಕಿಸ್ತಾನದ ಮಾಧ್ಯಮಗಳ ಒಂದು ವಿಭಾಗದ ವರದಿಯನ್ನು ನೇರವಾಗಿ ಉಲ್ಲೇಖಿಸದೆ ಜೈಶಂಕರ್ ಹೇಳಿದರು.
ಇನ್ನುಈ ಮಹತ್ವದ ಮಾತುಕತೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿದೇಶಾಂಗ ಸಚಿವಾಲಯ ಪೋಸ್ಟ್ವೊಂದನ್ನು ಮಾಡಿದ್ದು, ಆಫ್ಘನ್ ಜನರೊಂದಿಗಿನ ನಮ್ಮ (ಭಾರತದ) ಸಾಂಪ್ರದಾಯಿಕ ಸ್ನೇಹ ಮತ್ತು ಅವರ ಅಭಿವೃದ್ಧಿ ಅಗತ್ಯಗಳಿಗೆ ನಿರಂತರ ಬೆಂಬಲದ ಕುರಿತು ಮಾತಕತೆ ನಡೆಸಲಾಗಿದೆ. ಇನ್ನು ಉಭಯ ರಾಷ್ಟ್ರಗಳು ಪರಸ್ಪರ ಸಹಕಾರವನ್ನು ಮುಂದಕ್ಕೆ ಕೊಂಡೊಯ್ಯುವ ಮಾರ್ಗಗಳು ಮತ್ತು ವಿಧಾನಗಳ ಬಗ್ಗೆ ಚರ್ಚಿಸಲಾಯಿತು ಎನ್ನಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಉಗ್ರರ ಅಟ್ಟಹಾಸಕ್ಕೆ ತಾಲಿಬಾನ್ ಕಾರಣ ಎಂದು ಹೇಳುವ ಮೂಲಕ ತನ್ನನ್ನು ತಾನು ಅಮಾಯಕ ಎಂದು ಬಿಂಬಿಸಿಕೊಳ್ಳುವ ಪಾಕಿಸ್ತಾನ ಸಂಚಿಗೆ ಮುತಾಕಿ ಖಂಡನೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ತಾಲಿಬಾನ್ನ ಸಂವಹನ ನಿರ್ದೇಶಕ ಹಫೀಜ್ ಜಿಯಾ ಅಹ್ಮದ್ ಅವರ ಪ್ರಕಾರ, ಮಹತ್ವದ ಮಾತುಕತೆ ವೇಳೆ ಮುತ್ತಕಿ ಅವರು ಡಾ. ಜೈಶಂಕರ್ ಅವರನ್ನು ಆಫ್ಘನ್ ಪ್ರಜೆಗಳಿಗೆ, ವಿಶೇಷವಾಗಿ ವೈದ್ಯಕೀಯ ಆರೈಕೆಯನ್ನು ಬಯಸುವವರಿಗೆ ಹೆಚ್ಚಿನ ವೀಸಾಗಳನ್ನು ಒದಗಿಸುವಂತೆ ಕೇಳಿಕೊಂಡರು. ದ್ವಿಪಕ್ಷೀಯ ವ್ಯಾಪಾರ, ಭಾರತೀಯ ಜೈಲುಗಳಲ್ಲಿರುವ ಆಫ್ಘನ್ ಕೈದಿಗಳ ಬಿಡುಗಡೆ ಮತ್ತು ವಾಪಸಾತಿಗೂ ಕೋರಲಾಯಿತು. ಇನ್ನು ಇದೇ ವೇಳೆ ಇರಾನ್ನ ಚಬಹಾರ್ ಬಂದರಿನ ಅಭಿವೃದ್ಧಿಯ ಬಗ್ಗೆಯೂ ಚರ್ಚಿಸಲಾಯಿತು ಎಂದು ಅವರು ಉಲ್ಲೇಖಿಸಿದರು. ಹಿರಿಯ ತಾಲಿಬಾನ್ ಅಧಿಕಾರಿ ಪಾಷ್ಟೋ ಭಾಷೆಯಲ್ಲಿ ಸರಣಿ ಪೋಸ್ಟ್ಗಳನ್ನು ಹಂಚಿಕೊಂಡಿದ್ದು, ಅದರಲ್ಲಿ ಇಬ್ಬರು ಸಚಿವರ ನಡೆದಿರುವ ಚರ್ಚೆಗಳ ಬಗ್ಗೆ ಸವಿಸ್ತಾರವಾದ ಪಟ್ಟಿ ಮಾಡಿದೆ.

