By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 30ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ “ಜನರೊಂದಿಗೆ ಜನತಾದಳ” 2ನೇ ಹಂತದ ಪ್ರವಾಸ : ನಿಖಿಲ್ ಕುಮಾರಸ್ವಾಮಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜಕೀಯ | Politics > 30ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ “ಜನರೊಂದಿಗೆ ಜನತಾದಳ” 2ನೇ ಹಂತದ ಪ್ರವಾಸ : ನಿಖಿಲ್ ಕುಮಾರಸ್ವಾಮಿ
ರಾಜಕೀಯ | PoliticsLatest

30ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ “ಜನರೊಂದಿಗೆ ಜನತಾದಳ” 2ನೇ ಹಂತದ ಪ್ರವಾಸ : ನಿಖಿಲ್ ಕುಮಾರಸ್ವಾಮಿ

Janata Dal with the People" 2nd phase tour in more than 30 assembly constituencies:

Published February 18, 2026
Share
2 Min Read
Nikhil Kumaraswamy
SHARE

ಬೆಂಗಳೂರು, ಫೆ.18: ಜೆಪಿ ನಗರ ನಿವಾಸದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಲವು ರಾಜಕೀಯ ಬೆಳವಣಿಗೆಗಳ ಕುರಿತು ಪ್ರತಿಕ್ರಿಯೆ ನೀಡಿದರು.

“ಜನರೊಂದಿಗೆ ಜನತಾದಳ” ಎರಡನೇ ಹಂತದ ಪ್ರವಾಸ ಮೈಸೂರಿನ ಪಿರಿಯಾಪಟ್ಟಣದಿಂದ ಆರಂಭವಾಗಲಿದ್ದು, 30ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ನಡೆಯಲಿದೆ ಎಂದು ತಿಳಿಸಿದರು. ಒಂದು ತಿಂಗಳ ಕಾಲ ಸದಸ್ಯತ್ವ ಅಭಿಯಾನ ನಡೆಯಲಿದ್ದು, ಈಗಾಗಲೇ 52 ಕ್ಷೇತ್ರಗಳಲ್ಲಿ ಪ್ರವಾಸ ಮುಗಿಸಿ 9000 ಕಿಲೋಮೀಟರ್ ಕ್ರಮಿಸಲಾಗಿದೆ ಎಂದು ಹೇಳಿದರು. ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಉತ್ತರ ಕರ್ನಾಟಕ ಹಾಗೂ ಹಳೆ ಮೈಸೂರು ಭಾಗಗಳಲ್ಲಿ ಪ್ರವಾಸ ಯಶಸ್ವಿಯಾಗಿ ನಡೆದಿರುವುದಾಗಿ ಹೇಳಿದರು.

ಮೈತ್ರಿ ಕುರಿತ ಹೇಳಿಕೆ
ಮೈತ್ರಿಗೆ ಧಕ್ಕೆ ಉಂಟುಮಾಡುವಂತ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, “ನಾಲ್ಕು ಗೋಡೆಗಳ ಒಳಗೆ ಚರ್ಚೆಯಾಗಬೇಕಾದ ವಿಷಯ ಹೊರಗೆ ಬರಬಾರದು. ಹಾದಿಬೀದಿಯಲ್ಲಿ ಚರ್ಚೆ ಮಾಡಿದರೆ ಸಮಸ್ಯೆ ಬಗೆಹರಿಯುವುದಿಲ್ಲ” ಎಂದರು. ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಮೈತ್ರಿಗೆ ಬೆಂಬಲವಾಗಿ ನಿಂತಿದ್ದಾರೆ ಎಂದು ಹೇಳಿದರು. ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಹಾಗೂ ಸಂತೋಷ್ ಜಿ ಅವರ ಮಾರ್ಗದರ್ಶನವೂ ಮೈತ್ರಿಗೆ ಇದೆ ಎಂದು ಹೇಳಿದರು.

“ಆಂತರಿಕ ಚರ್ಚೆಯಲ್ಲಿ ಅಪಸ್ವರಗಳು ಸಹಜ. ಆದರೆ ಅವನ್ನು ಮಾಧ್ಯಮಗಳ ಮುಂದೆ ಹೇಳದಂತೆ ನೋಡಿಕೊಳ್ಳುವುದು ನಾಯಕರ ಜವಾಬ್ದಾರಿ,” ಎಂದರು.

ಮೈತ್ರಿ ಮುರಿಯುವ ಹೇಳಿಕೆಗಳ ಬಗ್ಗೆ
28 ಕ್ಷೇತ್ರಗಳಲ್ಲಿ ಜೆಡಿಎಸ್ ಉತ್ತಮ ಮತಗಳನ್ನು ಪಡೆದಿದೆ ಎಂದು ಹೇಳಿದ ಅವರು, ಸೌದತ್ತಿಯಲ್ಲಿ 32 ಸಾವಿರ, ಶೃಂಗೇರಿಯಲ್ಲಿ 19 ಸಾವಿರ, ತಿಪಟೂರಿನಲ್ಲಿ 31 ಸಾವಿರ ಮತಗಳನ್ನು ಪಡೆದಿರುವುದಾಗಿ ಉದಾಹರಣೆ ನೀಡಿದರು. “ನಾವು ಒಳ್ಳೆಯ ಉದ್ದೇಶಕ್ಕಾಗಿ ಕೈಜೋಡಿಸಿದ್ದೇವೆ. ಈ ಭ್ರಷ್ಟ ಸರ್ಕಾರವನ್ನು ಕರ್ನಾಟಕದಿಂದ ದೂರ ಮಾಡಲು ಮೈತ್ರಿ ಮಾಡಿಕೊಂಡಿದ್ದೇವೆ,” ಎಂದರು.

ಜೆಡಿಎಸ್ ಅಸ್ತಿತ್ವದ ಪ್ರಶ್ನೆ
ಮೈತ್ರಿಯಿಂದ ಜೆಡಿಎಸ್ ಅಸ್ತಿತ್ವ ಕಳೆದುಕೊಳ್ಳುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಈ ಅಲಯನ್ಸ್ ಪರಸ್ಪರ ಪ್ರೀತಿ-ವಿಶ್ವಾಸದಿಂದ ಹುಟ್ಟಿಕೊಂಡಿದೆ. ಎಚ್.ಡಿ. ದೇವೇಗೌಡ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ. ಹಿಂದೆ ತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ,” ಎಂದು ಸ್ಪಷ್ಟಪಡಿಸಿದರು.

ಎನ್‌ಡಿಎ 140 ರಿಂದ 150 ಸೀಟುಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. “ಅಣ್ಣತಮ್ಮಂದಿರಂತೆ ಕೆಲಸ ಮಾಡಿ ಲೋಕಸಭೆಯಲ್ಲಿ ಗೆದ್ದಂತೆ ವಿಧಾನಸಭೆಯಲ್ಲೂ ಗೆಲ್ಲುತ್ತೇವೆ,” ಎಂದರು.

ಪ್ರಿಯಾಂಕ ಖರ್ಗೆ ಹೇಳಿಕೆ
ಪ್ರಿಯಾಂಕ ಖರ್ಗೆ ಅವರು ಜೆಡಿಎಸ್ ಕಡೆಗಣಿಸಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, “25 ವರ್ಷ ಪೂರೈಸಿದ ಪ್ರಾದೇಶಿಕ ಪಕ್ಷವಾಗಿ ಬೆಳ್ಳಿಹಬ್ಬ ಆಚರಿಸಿದ್ದೇವೆ. ಜನತಾದಳದ ಶಕ್ತಿ ಎಲ್ಲರಿಗೂ ಗೊತ್ತಿದೆ,” ಎಂದರು.

ಕುಮಾರಸ್ವಾಮಿ ರಾಜ್ಯ ರಾಜಕಾರಣಕ್ಕೆ?
ಕುಮಾರಸ್ವಾಮಿ ರಾಜ್ಯ ರಾಜಕಾರಣಕ್ಕೆ ಬರುತ್ತಾರೆ ಎಂಬ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ನಾವು ಯಾವುದೇ ಘೋಷಣೆ ಮಾಡಿಲ್ಲ. ಹೇಳಿಕೆಯನ್ನು ತಿರುಚಲಾಗಿದೆ,” ಎಂದು ಹೇಳಿದರು.

ZP & TP ಮೈತ್ರಿ
ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಮೈತ್ರಿ ವಿಚಾರ ಇನ್ನೂ ಚರ್ಚೆಗೆ ಬಂದಿಲ್ಲ ಎಂದರು. “ಚುನಾವಣೆಗಳೇ ನಡೆಯುತ್ತವೆಯೋ ಇಲ್ಲವೋ ತಿಳಿದಿಲ್ಲ. ಸೂಕ್ತ ಸಂದರ್ಭದಲ್ಲಿ ಕಾರ್ಯಕರ್ತರ ಹಿತದೃಷ್ಟಿಯಿಂದ ತೀರ್ಮಾನ ಮಾಡಲಾಗುತ್ತದೆ,” ಎಂದು ತಿಳಿಸಿದರು.

ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ
ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ಕುರಿತು ಮಾತನಾಡಿದ ಅವರು, “135 ಜನರಿಗೆ ಜನರು ಸ್ಪಷ್ಟ ಬಹುಮತ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸುವುದು ಮೊದಲ ಆದ್ಯತೆ ಆಗಬೇಕು,” ಎಂದರು. ರಾಜ್ಯದಲ್ಲಿ 3 ಲಕ್ಷ ಕೋಟಿ ಸಾಲವಾಗಿದೆ ಎಂದು ಆರೋಪಿಸಿದರು.

ಜಿ.ಟಿ. ದೇವೇಗೌಡ ವಿಚಾರ
ಜಿ.ಟಿ. ದೇವೇಗೌಡರ ರಾಜಕೀಯ ಮುಗಿಯುತ್ತದೆಯೇ ಎಂಬ ಪ್ರಶ್ನೆಗೆ, “ಯಾರದ್ದೂ ಮುಗಿದ ಅಧ್ಯಾಯ ಅಲ್ಲ, ನೋಡೋಣ,” ಎಂದು ಹೇಳಿದರು.

You Might Also Like

ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ

ಮಾಜಿ ಸಚಿವ ಬಿ.ಸಿ ಪಾಟೀಲ್‌ ಅಳಿಯ ವಿಷ ಸೇವಿಸಿ ಆತ್ಮಹತ್ಯೆ

ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ

ರೌಡಿಶೀಟರ್ ಅಜಿತ್ ಬರ್ಬರ ಹತ್ಯೆ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಸಿಂಧೂ ನದಿಯ ಒಂದು ಹನಿ ನೀರಿನ್ನು ಭಾರತ ತೆಗೆದುಕೊಳ್ಳಲು ಬಿಡುವುದಿಲ್ಲ : ಶೆಹಬಾಜ್ ಷರೀಫ್

TAGGED:Nikhil Kumaraswamy
Share This Article
Facebook Copy Link Print
Previous Article ನಟ ಸಲ್ಮಾನ್ ಖಾನ್ ಅವರ ತಂದೆ ಸಲೀಂ ಖಾನ್ ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ
Next Article Suresh Kumar ಬೆಳ್ಳಂಬೆಳಿಗ್ಗೆ ಓಪನ್ ಆಗಿದ್ದ ಬಾರ್ ಕ್ಲೋಸ್ ಮಾಡಿಸಿದ ಶಾಸಕ ಎಸ್.ಸುರೇಶ್‌ಕುಮಾರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಬೆಂಗಳೂರಲ್ಲಿ ಒಂದೇ ಮಾದರಿಯ 2 ಕೊಲೆ : ಪ್ರತ್ಯಕ ಪ್ರಕರಣಗಳಲ್ಲಿ ಪತ್ನಿಯರನ್ನು ಹತ್ಯೆ ಮಾಡಿದ ಗಂಡಂದಿರು
ಬೆಂಗಳೂರು-Bengaluru
February 18, 2026
ನಾಳೆಯಿಂದ ಸಾರಿಗೆ ನೌಕರರ ಮುಷ್ಕರ : ಬಸ್ ಸೇವೆ ಇರುತ್ತಾ..? ಸಾರಿಗೆ ಸಚಿವರು ಹೇಳಿದ್ದೇನು..? ಜಾರಿಯಾಗುತ್ತಾ ಎಸ್ಮಾ..?
ರಾಜ್ಯ-Karnataka
February 18, 2026
ರಾಜ್ಯದಲ್ಲಿ ಪ್ರಾಣಿಗಳ ರಾಜಕೀಯ : ನಾಯಿ-ಕೋತಿ-ದನಗಳನ್ನು ಬಳಸಿಕೊಂಡು ಕಚ್ಚಾಟ
ರಾಜಕೀಯ | Politics
February 18, 2026
ಡಿಸಿಎಂ ಭೇಟಿಯಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲ
ಸ್ಯಾಂಡಲ್​ವುಡ್-Sandalwood
February 18, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up