ಪಾಟ್ನಾ: ನೀತಿಶ್ ಕುಮಾರ್ ನೇತೃತ್ವದ ಜನತಾ ದಳ (JDU) ಯುನೈಟೆಡ್ ಯುವ ಮುಕಂಡನನಿಗೆ ಗುಂಡು ಹಾರಿಸಿ ಹತೈಗೈದ ಘಟನೆ ಪಾಟ್ನಾದಲ್ಲಿ (Patna) ನಡೆದಿದೆ.
ಗುಂಡಿನ ದಾಳಿಯಲ್ಲಿ ಮೃತಪಟ್ಟ ಜೆಡಿಯು ನಾಯಕನನ್ನು ಸೌರಭ್ ಕುಮಾರ್ ಎಂದು ಗುರತಿಸಲಾಗಿದೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಬೈಕ್ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ: ನಟಿ ಅಮೂಲ್ಯ ಮಾವ, ಬಿಜೆಪಿ ಮುಖಂಡ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ
ಗುಂಡು ಸೌರಭ್ ಅವರ ತಲೆಗೆ ಎರಡು ಗುಂಡುಗಳು ತಗುಲಿವೆ. ಜೊತೆಗೆ ದಾಳಿಯಲ್ಲಿ ಮುನ್ನನ್ ಎಂಬವರಿಗೂ ಮುರು ಗುಂಡುಗಳು ತಗುಲಿದ್ದು ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಡಾ.ರಾಜ್ಕುಮಾರ್ ಅವರ ಹುಟ್ಟುಹಬ್ಬದಂದು ಹೊಸ ಉದ್ಯಮದತ್ತ ಅಶ್ವಿನಿ
ಸೌರಭ್ ಅವರ ಮೆಲೆ ಗುಂಡು ಹಾರಿಸಿದ ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆವರು ಹೀಗಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದರು. ಮತ್ತೋರ್ವ ಗಾಯಾಳುವಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಬಾಡಿಗೆ ಮನೆ ನೋಡಲು ಹೋಗಿದ್ದ ವಿದ್ಯಾಥಿಗಳನ್ನು ಮೇಲೆ ಹಲ್ಲೆ

