ರಂಗಭೂಮಿ ಕಲಾವಿದ, ನಿವೃತ್ತ ಬ್ಯಾಂಕ್ ಆಫ್ ಬರೋಡಾ ಉದ್ಯೋಗಿ, ಉಡುಪಿ ಪೆರ್ಡೂರಿನ ಟಿ ಪ್ರಭಾಕರ್ ಕಲ್ಯಾಣಿ (64) ಆ. 8ರಂದು ಹೃದಯಾಘಾತದಿಂದ ನಿಧನ ಹೊಂದಿದರು.
ಎಳೆಯ ವಯಸ್ಸಿನಿಂದಲೇ ರಂಗಭೂಮಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಅವರು ಹಲವಾರು ನಾಟಕ, ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೂ ಭಾಜನರಾಗಿದ್ದರು. ಮೃತರು ತಾಯಿ, ಪತ್ನಿ ಶೈಲಜಾ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

