ನವದೆಹಲಿ: ದೆಹಲಿ ಮದ್ಯ (Liquor Scam) ಹಗರಣ ಪ್ರಕರಣದಲ್ಲಿ ಸಿಎಂ ಕೇಜ್ರಿವಾಲ್ಗೆ (Aravind Kerziwal) ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು (bail) ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಗೃಹ ಸಚಿವ ಅಮಿತ್(Amith Shah) ಶಾ ಬಹಿರಂಗವಾಗಿಯೇ ಅಭಿಪ್ರಾಯ ವ್ಯಕ್ತಪಡಿಸಿದ್ದು, ಅರವಿಂದ್ ಕೇಜ್ರಿವಾಲ್ ಜಾಮೀನನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದರು.
ಸುದ್ದಿಸಂಸ್ಥಯ ಸಂದರ್ಶನದಲ್ಲಿ ಮಾತನಾಡಿದ ಅವರು, ಕೇಜ್ರವಾಲ್ ಅವರಿಗೆ ‘ವಿಶೇಷ ಸೌಲಭ್ಯ’ ನೀಡಲಾಗಿದೆ ಎಂದು ಜನ ಮಾತನಾಡುತ್ತಿದ್ದಾರೆ. ಸುಪ್ರೀಂ ಕರ್ಟ್ನ ತರ್ಪಿನ ಬಗ್ಗೆ ನಾನು ಯಾವುದೇ ಟಿಪ್ಪಣಿ ಹೇಳುವುದಿಲ್ಲ. ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿದ ಸುಪ್ರೀಂ ತರ್ಪು ಎಂದಿನ ತರ್ಪಿನಂತಿರಲಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಮುಂದಿನ 5 ದಿನಗಳು ರಾಜ್ಯದಲ್ಲಿ ಗಾಳಿ ಮಳೆ
ಸುಪ್ರೀಂ ನೀಡಿದ ತರ್ಪು ಕೇಜ್ರಿವಾಲ್ ಅವರಿಗೆ ನೀಡಿದ ವಿಶೇಷ ಸೌಲಭ್ಯದಂತಿದೆ ಎಂದು ಜನ ಮಾತನಾಡುತ್ತಿದ್ದಾರೆ. INDIA ಒಕ್ಕೂಟಕ್ಕೆ ಅಧಿಕಾರ ಸಿಕ್ಕಿದರೆ ನಾನು ಮತ್ತೆ ಜೈಲಿಗೆ ಹೋಗುವುದಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಇದು ಹೇಗೆ ಅಂದರೆ ಚುನಾವಣೆಯಲ್ಲಿ ಗೆದ್ದರೆ ಅವರು ತಪ್ಪು ಮಾಡಿದ್ದರೂ ಸುಪ್ರೀಂ ಅವರನ್ನು ಜೈಲಿಗೆ ಕಳುಹಿಸುವುದಿಲ್ಲ ಎಂಬುದನ್ನು ಹೇಳಲು ದೆಹಲಿ ಸಿಎಂ ಹೊರಟಿದ್ದಾರೆ. ಇದು ಸ್ಪಷ್ಟವಾದ ನ್ಯಾಯಾಂಗ ನಿಂದನೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಇದನ್ನೂ ಓದಿ: ಭಾವಾನಿ ರೇವಣ್ಣ ವಿರುದ್ಧ ಎಚ್ಚರಿಕೆಯ ಹೆಜ್ಜೆ ಇಡುವಂತೆ ಎಸ್ಐಟಿಗೆ ಸೂಚನೆ

ಜೊತೆಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಧೀಶರು ಕೇಜ್ರಿವಾಲ್ ಹೇಗೆ ಜಾಮೀನನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂಬುದನ್ನು ಗಮನಿಸಬೇಕು ಎಂದರು. ಇದನ್ನೂ ಓದಿ: ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ನಿಗೆ ಹೆದರಿಸಲು ಹೋಗಿ ಜಿಮ್ ಟ್ರೈನರ್ ಸಾವು
ಕೇಜ್ರಿವಾಲ್ ಅವರನ್ನು ಗಂಭೀರವಾಗಿ ಪರಿಗಣಿಸಬೇಡಿ. ಅವರ ಪಕ್ಷವು ಕೇವಲ 22 ಸ್ಥಾನಗಳಲ್ಲಿ ಹೋರಾಡುತ್ತಿದೆ ಮತ್ತು ಅವರು ಇಡೀ ದೇಶಕ್ಕೆ ವಿದ್ಯುತ್ ಬಿಲ್ಗಳನ್ನು ಮನ್ನಾ ಮಾಡಲಾಗುವುದು ಎಂದು ಅವರು ಭರವಸೆ ನೀಡುತ್ತಿದ್ದಾರೆ. ಕೇವಲ 22 ಸ್ಥಾನಗಳಲ್ಲಿ ಸ್ರ್ಧೆ ಮಾಡುವ ಆಪ್ ಸರ್ಕಾರ ಹೇಗೆ ರಚನೆ ಮಾಡುತ್ತದೆ ಎಂದು ಪ್ರಶ್ನಿಸಿ ವ್ಯಂಗ್ಯವಾಡಿದರು.ಇದನ್ನೂ ಓದಿ: ಹಸುಗೂಸನ್ನು ರಸ್ತೆ ಬದಿಗೆ ಎಸೆದ ಅನಾಮಿಕರು

