ತುಮಕೂರು : ನ್ಯಾಯಾಲಯದ ಆದೇಶಕ್ಕೆ ನಾವೆಲ್ಲರೂ ತಲೆಬಾಗಬೇಕು. ಇವತ್ತಿನ ಕೋರ್ಟ್ ತೀರ್ಪಿನಿಂದ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡರೇ ಸಾಕು. ಕೇತಗಾನಹಳ್ಳಿ ಜಮೀನು ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಅದರ ಬಗ್ಗೆ ಚರ್ಚೆ ಮಾಡಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ತುಮಕೂರಿನ ಶಿರಾದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ನ್ಯಾಯಾಲಯದ ಆದೇಶಕ್ಕೆ ನಾವೆಲ್ಲರೂ ತಲೆಬಾಗಬೇಕು. ಕಳೆದ ಎರಡೂವರೆ ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ಕೆಲ ರಾಜಕೀಯ ವ್ಯಕ್ತಿಗಳನ್ನು ರಾಜಕೀಯವಾಗಿ ಬಲಿಪಶು ಮಾಡಲು ಎಸ್ ಐಟಿ ಯನ್ನ ದುರ್ಬಳಕೆ ಮಾಡಿಕೊಳ್ಳುತ್ತಿರುವ ಪ್ರಕರಣ ಬಹಳಷ್ಟು ಇದೆ ಎಂದು ಅವರು ಆರೋಪಿಸಿದರು.
ಎಸ್ ಐಟಿ ಅನ್ನುವುದನ್ನು ರಾಜ್ಯ ಸರ್ಕಾರ ಯಾವ ರೀತಿ ದ್ವೇಷದ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ ಎನ್ನುವುದಕ್ಕೆ ಅನೇಕ ನಿದರ್ಶನ ನಮ್ಮ ಮುಂದೆ ಇದೆ. ಎಸ್ ಐಟಿ ಹಾಗೂ ಲೋಕಾಯುಕ್ತ ಸ್ವತಂತ್ರ ಸಂಸ್ಥೆಯಾಗಿ ಕೆಲಸ ಮಾಡಲು ಸರ್ಕಾರ ಅವಕಾಶ ಕೊಡಬೇಕು. ಪಾರದರ್ಶಕತೆಯಿಂದ ಕೆಲಸ ಮಾಡಲು ಬಿಡಬೇಕು ಎಂದು ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಇಂತಹ ದ್ವೇಷದ ರಾಜಕಾರಣ ಮೂರು ಪಕ್ಷಕ್ಕೂ ಒಳ್ಳೆಯ ಬೆಳವಣಿಗೆಯಲ್ಲ. ಇದರಿಂದ ಸಾಧನೆ ಮಾಡುವಂತಹದ್ದು ಏನು ಇಲ್ಲ. ಅವಕಾಶ ಸಿಕ್ಕಾಗ ಜನಪರವಾಗಿ ಒಳ್ಳೆಯ ಕೆಲಸ ಮಾಡಿ. ನೀವು ಈ ರೀತಿ ದ್ವೇಷ ಮಾಡಿಕೊಂಡು ಹೋದರೇ, ನೀವು ಹಾಕಿ ಕೊಟ್ಟ ಹಾದಿಯಲ್ಲೇ ಮುಂಬರುವ ಸರ್ಕಾರ ನಡೆಯುತ್ತದೆ ಎಂದು ವಾಗ್ದಾಳಿ ನಡೆಸಿದರು.
- ತರಗತಿಯಲ್ಲೇ ಪ್ರಪೋಸ್ ಮಾಡಿದ ಪ್ರೊಫೆಸರ್ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
- ಭಾರೀ ಮೊತ್ತಕ್ಕೆ ಆರ್ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
- ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್
- ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
- ”ನನ್ನನ್ನೇ ಸುಪ್ರೀಂ ಲೀಡರ್ ಮಾಡಲು ಮುಂದಾಗಿತ್ತು ಇರಾನ್, ನಾನು ಒಪ್ಪಲಿಲ್ಲ” : ಟ್ರಂಪ್

