ಬೆಂಗಳೂರು : ಕಿಚ್ಚ ಸುದೀಪ್ ಅವರು 11 ಸೀಸನ್ಗಳ ಕಾಲ ಬಿಗ್ ಬಾಸ್ ಕನ್ನಡವನ್ನು ನಿರೂಪಿಸಿದ ನಂತರ ಕಾರ್ಯಕ್ರಮದಿಂದ ನಿರ್ಗಮಿಸುತ್ತಿದ್ದಾರೆ ಎಂದು ಘೋಷಿಸಿದ್ದಾರೆ. ಇದು ಅವರ ಅಂತಿಮ ನಿರ್ಧಾರ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕಲರ್ಸ್ ಕನ್ನಡದವರು ಅವರ ರಾಜೀನಾಮೆಯನ್ನು ಒಪ್ಪಿಕೊಂಡಿಲ್ಲವಾದರೂ, ಸುದೀಪ್ ಅವರು ತಮ್ಮ ನಿರ್ಧಾರದಲ್ಲಿ ದೃಢವಾಗಿದ್ದಾರೆ.
ಸುದೀಪ್ ತಮ್ಮ ಟ್ವಿಟರ್ ಖಾತೆಯ ಪೇಜ್ ಅಲ್ಲಿಯೇ ಇದನ್ನ ಬರೆದುಕೊಂಡಿದ್ದಾರೆ. ಜನವರಿ 20 ರಂದು ಅಂದ್ರೆ ಇಂದು ಬೆಳಗ್ಗೇನೆ ಸುದೀಪ್ ಈ ಒಂದು ಪೋಸ್ಟ್ ಹಾಕಿದ್ದಾರೆ. ಈ ಮೂಲಕ ತಮ್ಮ ಬಿಗ್ ಬಾಸ್ ಹೋಸ್ಟಿಂಗ್ನ ಕೊನೆ ಪಂಚಾಯಿತಿ ಎಂಡ್ ಆಗಿದೆ ಅಂತಲೇ ಹೇಳಿಕೊಂಡಿದ್ದಾರೆ.
ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ’ದ ಹೋಸ್ಟ್ ಆಗಿ 11 ಸೀಸನ್ಗಳನ್ನು ನಡೆಸಿಕೊಟ್ಟಿದ್ದಾರೆ. ಇದು ಅವರ ಕೊನೆಯ ಸೀಸನ್ ಎಂದು ಈ ಮೊದಲು ಹೇಳಿದ್ದರು. ಸಂದರ್ಶನ ಒಂದರಲ್ಲಿ ಈ ಬಗ್ಗೆ ಮಾತನಾಡಿದ್ದ ಸುದೀಪ್ ಅವರು, ‘ಕಲರ್ಸ್ ಕನ್ನಡದವರು ನನ್ನ ರೆಸಿಗ್ನೇಶನ್ ಲೆಟರ್ನ ಸ್ವೀಕರಿಸಿಲ್ಲ’ ಎಂದಿದ್ದರು. ಈಗ ಅವರು ಬಿಗ್ ಬಾಸ್ ತೊರೆಯುವ ಬಗ್ಗೆ ಮತ್ತೊಮ್ಮೆ ಘೋಷಣೆ ಮಾಡಿದ್ದಾರೆ. ಈ ಮೂಲಕ ಅವರು ಗಟ್ಟಿ ನಿರ್ಧಾರವನ್ನು ಸ್ಪಷ್ಟಪಡಿಸಿದ್ದಾರೆ.
ಈ ಮೊದಲು ಸಂದರ್ಶನ ಒಂದರಲ್ಲಿ ಮಾತನಾಡಿದ್ದ ಸುದೀಪ್ ಅವರು, ‘ಮುಂದೆ ಯಾರು ಬಿಗ್ ಬಾಸ್ ನಡೆಸಿಕೊಡುತ್ತಾರೆ ಅಥವಾ ಯಾರು ನಡೆಸಿಕೊಡಬೇಕು ಎಂದು ನಾನು ಹೇಳುವುದಿಲ್ಲ. ಕಲರ್ಸ್ನವರು ನಾನು ಬಿಡುವುದನ್ನು ಒಪ್ಪುತ್ತಿಲ್ಲ. ಮುಂದೆ ಮತ್ತೆ ನಾನೇ ಹೋಸ್ಟ್ ಮಾಡಬೇಕು ಎಂದು ಬಂದರೆ ಈ ಮೊದಲು ಟ್ವೀಟ್ ಮಾಡಿದ್ದೆ ಎಂದೆಲ್ಲ ಹಿಂಜರಿಯುವುದಿಲ್ಲ’ ಎಂದು ಹೇಳಿದ್ದರು.
ಆದರೆ, ಈಗ ಸುದೀಪ್ ಅವರು ಬಿಗ್ ಬಾಸ್ ತೊರೆಯುವ ಬಗ್ಗೆ ಗಟ್ಟಿ ನಿರ್ಧಾರ ಮಾಡಿದಂತೆ ಕಾಣುತ್ತಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಬಿಗ್ ಬಾಸ್ನ ಕಳೆದ 11 ಸೀಸನ್ಗಳಿಂದ ನಾನು ಆನಂದಿಸಿದ್ದೇನೆ. ನೀವು ತೋರಿದ ಎಲ್ಲಾ ಪ್ರೀತಿಗಾಗಿ ನಿಮ್ಮೆಲ್ಲರಿಗೂ ಧನ್ಯವಾದಗಳು. ಮುಂಬರುವ ಫಿನಾಲೆ, ಹೋಸ್ಟ್ ಆಗಿ ನನ್ನ ಕೊನೆಯ ಸೀಸನ್. ನಿಮ್ಮನ್ನು ಒಳ್ಳೆಯ ರೀತಿಯಲ್ಲಿ ರಂಜಿಸಿದ್ದೇನೆ ಎಂದು ನಾನು ಭಾವಿಸುತ್ತೇನೆ. ಇದೊಂದು ಅವಿಸ್ಮರಣೀಯ ಪಯಣ. ಅದನ್ನು ನನ್ನ ಕೈಲಾದಷ್ಟು ನಿಭಾಯಿಸಿದ್ದಕ್ಕೆ ನನಗೆ ಖುಷಿ ಇದೆ. ಈ ಅವಕಾಶಕ್ಕಾಗಿ ಕಲರ್ಸ್ ಕನ್ನಡಕ್ಕೆ ಧನ್ಯವಾದ’ ಎಂದಿದ್ದಾರೆ.
‘ಬಿಗ್ ಬಾಸ್ ಸೀಸನ್ 11’ ಆರಂಭ ಆಗಿ ಕೆಲವೇ ವಾರಗಳಲ್ಲಿ ಸುದೀಪ್ ಟ್ವೀಟ್ ಮಾಡಿದ್ದರು. ಈಗ ಸುದೀಪ್ ಅವರು ಮತ್ತೊಮ್ಮೆ ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ವಿಚಾರವನ್ನು ಮತ್ತೊಮ್ಮೆ ಖಚಿತಪಡಿಸಿದ್ದಾರೆ. ಅವರು ಬಿಗ್ ಬಾಸ್ ತೊರೆಯೋದು ಬಹುತೇಕ ಖಚಿತವಾಗಿದೆ ಎಂದು ಹೇಳಲಾಗುತ್ತಿದೆ.

