ಬೆಂಗಳೂರು: ಕೋಗಿಲು ಬಡಾವಣೆಯ ಅಕ್ರಮ ನಿವಾಸಿಗಳ ತೆರವಿಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರಿಗೆ ಸತ್ಯಶೋಧನಾ ತಂಡವು ಇಂದು ತನ್ನ ವರದಿಯನ್ನು ಸಲ್ಲಿಸಿದೆ.
ಘಟನೆಗೆ ಸಂಬಂಧಿಸಿದ ಎಲ್ಲಾ ಅಂಶಗಳನ್ನು ಪರಿಶೀಲಿಸಿ ವರದಿ ನೀಡುವ ಉದ್ದೇಶದಿಂದ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರ ನೇತೃತ್ವದಲ್ಲಿ ಸತ್ಯಶೋಧನಾ ತಂಡವನ್ನು ರಚಿಸಲಾಗಿತ್ತು. ಈ ತಂಡವು ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ವರದಿಯನ್ನು ಅಧಿಕೃತವಾಗಿ ಸಲ್ಲಿಸಿತು.
ಈ ಸಂದರ್ಭದಲ್ಲಿ ಶಾಸಕ ಎಸ್. ಮುನಿರಾಜು, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ಮಾಳವಿಕ ಅವಿನಾಶ್, ರಾಜ್ಯ ಕಾರ್ಯದರ್ಶಿ ಹೆಚ್.ಸಿ. ತಮ್ಮೇಶ್ ಗೌಡ, ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಎಸ್. ಹರೀಶ್ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸತ್ಯಶೋಧನಾ ತಂಡದ ವರದಿಯ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

