ಚಿಕ್ಕಬಳ್ಳಾಪುರ: ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಇಂದು ಅಸಮಾಧಾನಕಾರಿ ಘಟನೆ ನಡೆದಿದೆ. ಕೆಎಸ್ಆರ್ಟಿಸಿ ಬಸ್ ಒಂದರಲ್ಲಿ ನೂರಾರು ಪ್ರಯಾಣಿಕರು ಪ್ರಯಾಣಿಸುತ್ತಿದ್ದ ವೇಳೆ, ಡ್ರೈವರ್ ಹಾಗೂ ಕಂಡಕ್ಟರ್ ಊಟಕ್ಕೆ ಹೋಗುವುದಾಗಿ ನೆಪವಿಟ್ಟು, ಟೆಂಪೋದಲ್ಲಿದ್ದ ಸರಕು ಮೂಟೆಗಳನ್ನು ಸಾಗಿಸಲು ಮುಂದಾದರು ಎಂಬ ಆರೋಪ ಕೇಳಿಬಂದಿದೆ.
ಈ ಸಂದರ್ಭ ಬಸ್ನಲ್ಲಿದ್ದ ಪ್ರಯಾಣಿಕರನ್ನು ಬಿಸಿಲಿನಲ್ಲಿ ಇಳಿಸಿ ಕಾಯಿಸಲು ಮಾಡಲಾಗಿದ್ದು, ಸಿಬ್ಬಂದಿ ನಿರ್ಲಕ್ಷ್ಯವಾಗಿ ವರ್ತಿಸಿದ್ದರಿಂದ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು. ಸುಮಾರು 30 ರಿಂದ 35 ಡಿಗ್ರಿ ಉಷ್ಣಾಂಶ ಇರುವ ಹಿನ್ನೆಲೆಯಲ್ಲಿ, ಬಿಸಿಲಿನ ತಾಪವನ್ನು ತಡೆಯಲಾಗದೆ ಕೆಲವರು ಗಾಬರಿಗೊಂಡ ಘಟನೆ ಕೂಡ ನಡೆದಿದೆ.
ಈ ವಿಚಾರಕ್ಕೆ ಸಂಬಂಧಿಸಿ ಪ್ರಯಾಣಿಕರು ಮತ್ತು ಕೆಎಸ್ಆರ್ಟಿಸಿ ಸಿಬ್ಬಂದಿ ನಡುವೆ ತೀವ್ರ ವಾಗ್ವಾದ ನಡೆದಿದೆ. ಸುಮಾರು 30 ನಿಮಿಷಗಳ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.
ಈ ಘಟನೆ ಸಾರ್ವಜನಿಕ ವಲಯದಲ್ಲಿ ಕೆಎಸ್ಆರ್ಟಿಸಿ ಸೇವೆಗಳ ಬಗ್ಗೆ ಮತ್ತೆ ಪ್ರಶ್ನೆಗಳನ್ನು ಹುಟ್ಟಿಸಿದೆ.
ವರದಿ:
ಅರುಣ್ ಕುಮಾರ್
ಸಂಪೂರ್ಣ ನ್ಯೂಸ್, ಕೋಲಾರ

