ಪಾಟ್ನಾ: ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದೆಹಲಿಗೆ ತೆರಳುವ ಸಲುವಾಗಿ ಸಂಜೆ ಪಾಟ್ನಾ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಲಾಲೂ ಪ್ರಸಾದ್ ಯಾದವ್ ಅವರ ಬ್ಲಡ್ ಶುಗರ್ ಲೆವೆಲ್ಏ ರಿಕೆಯಾಗಿ ಆರೋಗ್ಯ ಹದಗೆಟ್ಟಿದೆ. ಏರ್ ಅಂಬುಲೆನ್ಸ್ ಮೂಲಕ ಲಾಲೂ ಪ್ರಸಾದ್ ಅವರನ್ನು ದೆಹಲಿಯ ಏಮ್ಸ್ಗೆ ಕರೆದೊಯ್ಯುವ ಸಾಧ್ಯತೆಯಿದೆ.
ಕಳೆದ ವರ್ಷ ಲಾಲೂ ಪ್ರಸಾದ್ ಅವರನ್ನು ಮುಂಬೈನ ಏಷ್ಯನ್ ಹಾರ್ಟ್ ಇನ್ಸ್ಟಿಟ್ಯೂಟ್ನಲ್ಲಿ ಆಂಜಿಯೋಪ್ಲ್ಯಾಸ್ಟಿಗೆ ಒಳಪಡಿಸಲಾಯಿತು. ಅವರ ಆರೋಗ್ಯ ಹದಗೆಟ್ಟ ಬಳಿಕ ಜುಲೈ 2024ರಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಲಾಲೂ ಪ್ರಸಾದ್ ದಾಖಲಾಗಿದ್ದರು
ಡಿಸೆಂಬರ್ 2022ರಲ್ಲಿ ಸಿಂಗಾಪುರದಲ್ಲಿ ಲಾಲೂ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರ ಕಿರಿಯ ಮಗಳು ರೋಹಿಣಿ ಆಚಾರ್ಯ ತಮ್ಮ ಮೂತ್ರಪಿಂಡವನ್ನು ತಂದೆಗೆ ದಾನ ಮಾಡಿದ್ದರು.

