ಬೆಳಗಾವಿ : ಖಾನಾಪೂರ ತಹಶೀಲ್ದಾರ್ ಪ್ರಕಾಶ್ ಗಾಯಕವಾಡ ಇವರ ಬೆಳಗಾವಿ ಮನೆ ಮತ್ತು ಖಾನಾಪುರ ಮನೆಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಖಾನಾಪೂರ ತಹಶೀಲ್ದಾರ್ ಕಚೇರಿಯಲ್ಲೂ ದಾಖಲೆ ಪರಿಶೀಲನೆ ಮಾಡುವ ಕಾರ್ಯ ನಡೆದಿದ್ದು ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿ ಯಾರಿಗೂ ಒಳಗಡೆಗೆ ಬಿಡದೆ ಪರಿಶೀಲನೆ ನಡೆಸುತ್ತಿದ್ದಾರೆ ಬೆಳಗಾವಿ ಲೋಕಾಯುಕ್ತ ಎಸ್ಪಿ ಹನುಮಂತರಾಯ ನೇತೃತ್ವದಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ
ಪ್ರಕಾಶ್ ಗಾಯಕವಾಡ ಇವರು ಸುಮಾರು ವರ್ಷಗಳಿಂದ ಖಾನಾಪೂರ ತಹಶೀಲ್ದಾರ್ ರಾಗಿ ಕಾರ್ಯಗೃತರಾಗಿದ್ದು ಸುಮಾರು ಅಕ್ರಮ ಆಸ್ತಿ ಮಾಡಿರುವ ಬಗ್ಗೆ ಖಾನಾಪೂರ ಸಾಮಾಜಿಕ ಕಾರ್ಯಕರ್ತ ವಿವೇಕ ತಡಕೋಡ ಲೋಕಾಯುಕ್ತ ಅಧಿಕಾರಿಗಳಿಗೆ, ಕಂದಾಯ ಇಲಾಖೆಯ ಸಚಿವರಿಗೂ ದೂರು ನೀಡಿ ಅವರ ಅಕ್ರಮ ಆಸ್ತಿ ಬಗ್ಗೆ ತನಿಖೆ ನಡೆಸುವಂತೆ ಮನವಿ ಸಲ್ಲಿಕೆ ಮಾಡಿದ್ರು.
ಈಗಾಗಲೇ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ತಹಶೀಲ್ದಾರ್ ಪ್ರಕಾಶ್ ಗಾಯಕವಾಡ ಅವರ ಖಾನಾಪೂರ, ಬೆಳಗಾವಿ ಮನೆ, ಖಾನಾಪೂರ ಕಚೇರಿಗೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ವರದಿ. ದಯಾನಂದ. ಎಂ.

