ಮಂಡ್ಯ: ಜಿಲ್ಲೆಯ ಮದ್ದೂರಲ್ಲಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದು, ಗಲಾಟೆಯಾಗಿತ್ತು. ಈ ಪ್ರಕರಣದಲ್ಲಿ ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಪೋಲೀಸ್ ಠಾಣೆಯ ಇನ್ಸೆಕ್ಟರ್ ಶಿವಕುಮಾರ್ ತಲೆದಂಡವಾಗಿದೆ. ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ.
ಮಂಡ್ಯದಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಮದ್ದೂರು ಗಲಭೆ ಪ್ರಕರಣದಲ್ಲಿ ಎಎಸ್ಪಿ ವರ್ಗಾವಣೆ ವಿಚಾರವಾಗಿ ಮಾತನಾಡಿ ಅವರ ಅವಧಿ ಮುಗಿದಿತ್ತು. ಡಿಸೆಂಬರ್ ವರೆಗೂ ಮುಂದುವರೆಸಲು ಹೇಳಿದ್ದೆ.
ಎಎಸ್ಪಿ ವರ್ಗಾವಣೆಗೂ ಮದ್ದೂರು ಪ್ರಕರಣಕ್ಕೂ ಸಂಬಂಧ ಇಲ್ಲ. ಸಾಮಾನ್ಯ ವರ್ಗಾವಣೆಯಂತೆ ವರ್ಗವಾಗಿದೆ. ತಿಮ್ಮಯ್ಯ ಒಳ್ಳೆಯ ಕೆಲಸ ಮಾಡಿದ್ದಾರೆ. ಸರ್ಕಾರದಲ್ಲಿ ವರ್ಗಾವಣೆ ಪ್ರಕ್ರಿಯೆ ಸಹಜ. ನೂರಕ್ಕೆ ಲಕ್ಷ ಪರ್ಸೆಂಟ್ ಮದ್ದೂರು ಗಲಾಟೆಗೂ ವರ್ಗಾವಣೆಗೂ ಸಂಬಂಧ ಇಲ್ಲ ಎಂದರು.
ಈ ಘಟನೆಗೆ ಪೊಲೀಸ್ ವೈಫಲ್ಯ ಕಾರಣ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದಂತ ಅವರು ಇನ್ನು ವರದಿ ಬಂದಿಲ್ಲ. ವರದಿ ಬಂದ ನಂತರ ಆ ಬಗ್ಗೆ ಮಾಹಿತಿ ನೀಡುವೆ. ಘಟನೆ ಸಂಬಂಧ ಮತ್ತೋರ್ವ ಪೊಲೀಸ್ ಅಧಿಕಾರಿ ತಲೆದಂಡವಾಗಿದೆ. ಮದ್ದೂರು ಟೌನ್ ಇನ್ಸ್ ಪೆಕ್ಟರ್ ಶಿವಕುಮಾರ್ ಸಸ್ಪೆಂಡ್ ಮಾಡಲಾಗಿದೆ.
ಘಟನೆ ನಡೆದಾಗ ಸ್ಥಳದಲ್ಲಿ ಇಲ್ಲದ ಕಾರಣಕ್ಕೆ ಇನ್ಸ್ ಪೆಕ್ಟರ್ ಸಸ್ಪೆಂಡ್ ಮಾಡಲಾಗಿದತೆ, ಶಾಂತಿ ಸಭೆಯಲ್ಲೇ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದೇನೆ. ಹೆಚ್ಚಿನ ಗಮನಹರಿಸಿ ಬಂದೋಬಸ್ತ್ ಮಾಡುವಂತೆ. ಇನ್ಮುಂದೆ ಇಂತಹ ಯಾವುದೇ ಇಂತಹ ಘಟನೆ ನಡೆಯಬಾರದು. ನಡೆದರೆ ನಿಮ್ಮನ್ನೇ ನೇರ ಹೊಣೆ ಮಾಡುವುದಾಗಿ ವಾರ್ನಿಂಗ್. ಡಿಸಿ, ಎಸ್ಪಿಗೆ ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದರು.

