ಕೊಣಾಜೆ ಜುಲೈ 10: ನವವಿವಾಹಿತ ಯುವಕನೊಬ್ಬ ಏಕಾಏಕಿ ಕುಸಿದು ಬಿದ್ದು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಉಳ್ಳಾಲದಲ್ಲಿ ನಡೆದಿದೆ.
ಮೃತ ಯುವಕನನ್ನು ಉಳ್ಳಾಲ ತಾಲೂಕಿನ ಮಂಜನಾಡಿ ಪೆರಡೆ ದಿ. ವೆಂಕಪ್ಪ ಹಾಗೂ ಪಾರ್ವತಿ ದಂಪತಿಯ ಪುತ್ರ ಭರತ್ (32) ಎಂದು ಗುರುತಿಸಲಾಗಿದೆ. ನಗರದಲ್ಲಿ ಟೈಲರ್ ಕೆಲಸ ಮಾಡುತ್ತಿದ್ದ ಭರತ್ ನಾಲ್ಕು ದಿನದ ಹಿಂದೆ ರಕ್ತದೊತ್ತಡದಿಂದ ಕುಸಿದು ಬಿದ್ದಿದ್ದರು.
ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ. ಎಪ್ರಿಲ್ 22ರಂದು ಭರತ್ ವಿವಾಹ ಸಮಾರಂಭ ನಡೆದಿದ್ದು, ಪತ್ನಿ ನಗರದ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಭರತ್ ಅವರಿಗೆ ತಾಯಿ ಹಾಗೂ ಮೂವರು ಸೋದರಿಯರು ಇದ್ದಾರೆ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

