ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಅಧಿಕಾರದಲ್ಲಿ ಸಾಕಷ್ಟು ಭ್ರಷ್ಟಾಚಾರ, ಅನ್ಯಾಯ ಆಗುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಿರುವಾಗಲೇ ರಾಜ್ಯದ ಸರ್ಕಾರದಲ್ಲಿ ಬಿರುಗಾಳಿ ಎದ್ದಿದ್ದು, ಸೆಪ್ಟೆಂಬರ್ ಒಳಗೆ ರಾಜಕಾರಣದಲ್ಲಿ ಭಾರೀ ಬದಲಾವಣೆ ನಡೆಯಲಿದೆ ಎಂದು ಸಚಿವ ಕೆ. ಎನ್. ರಾಜಣ್ಣ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಆಶ್ಚರ್ಯಕರ ರೀತಿಯಲ್ಲಿ ಬದಲಾವಣೆ ಆಗಲಿದೆ. ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಗಾಳಿ ತಣ್ಣಗೆ ಬೀಸುತ್ತಿದೆ. ಸೆಪ್ಟೆಂಬರ್ ಒಳಿಕ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಹೇಳಿದರು.
ಇತ್ತ ಸಚಿವ ಸತೀಶ್ ಜಾರಕಿಹೊಳಿ ಕೂಡ ಈ ಬಗ್ಗೆ ಮಾತನಾಡಿದ್ದು, ರಾಜ್ಯದ ಪರಿಸ್ಥಿತಿಯ ಬಗ್ಗೆ ಹೈಕಮಾಂಡ್ ಚರ್ಚೆ ನಡೆಸುತ್ತಿದೆ. ಹೀಗಾಗಿ ನವೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗುವ ಎಲ್ಲಾ ಸಾದ್ಯತೆಗಳು ಇದೆ ಎಂದು ಹೇಳಿದರು.
ರಾಜ್ಯ ರಾಜಕಾರಣದಲ್ಲಿ ದೊಡ್ಡ ಬಡಾವಣೆಯಾಗುತ್ತದೆ ಎಂದು ನನಗೆ ಅನಿಸುತ್ತಿಲ್ಲ, ಆದರೆ ಬದಲಾವಣೆಯಾಗುವ ಎಲ್ಲಾ ಸಾದ್ಯತೆಗಳು ಕಾಣುತ್ತಿದೆ. ಏನೇ ಆದರೂ ರಾಜ್ಯದ ಒಳಿತಿಗಾಗಿ ಆಗುವುದು ಅದಂತೂ ಸತ್ಯ ಎಂದು ಸತೀಶ್ ಜರಕಿಹೊಳಿ ತಿಳಿಸಿದರು.
ಇನ್ನು ಸರ್ಕಾರ ಅನುದಾನ ನೀಡುತ್ತಿಲ್ಲ ಎಂದು ಶಾಸಕ ರಾಜು ಕಾಗೆ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಅವರು, ರಾಜು ಕಾಗೆ ಜೊತೆ ಸಿಎಂ ಸಿದ್ದರಾಮಯ್ಯ ಮಾತಾಡಿದ್ದಾರೆ. ಕೇವಲ ಅನುದಾನ ವರ್ಗಾವಣೆಗೆ ಅಸಮಾಧಾನ ಅಂತ ಏನಿಲ್ಲ. ನೀರಾವರಿ ಯೋಜನೆಗಳ ಬಗ್ಗೆಯೂ ಬಹಳಷ್ಟು ಬಾರಿ ಹೇಳಿದ್ದಾರೆ, ನೋಡೋಣ ಡಿಸಿಎಂ ಡಿಕೆ ಶಿವಕುಮಾರ್ ಬಳಿ ಸಿಎಂ ಸಿದ್ದರಾಮಯ್ಯ ಮಾತನಾಡಬಹುದು ಎಂದರು.
- ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
- ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
- ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
- ಆನ್ಲೈನ್ ಗೇಮಿಂಗ್ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
- ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ

