ನವದೆಹಲಿ: ಕೇಂದ್ರ ಸರ್ಕಾರ ಮಹತ್ವದ್ ನಿರ್ಧಾರ ಕೈಗೊಂಡಿದ್ದು ದೇಶದ ಬಡ ಜನರಿಗೆ ಮುಂದಿನ 4 ವರ್ಷಗಳವರೆಗೆ ಉಚಿತವಾಗಿ ಉಚಿತ ಆಹಾರ ಧಾನ್ಯಗಳು ನೀಡಲು ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಉಚಿತ ಧಾನ್ಯ ವಿತರಣೆಯನ್ನು 4 ವರ್ಷಗಳವರೆಗೆ ವಿಸ್ತರಿಸಲು ಬುಧವಾರ ಅನುಮೋದನೆ ನೀಡಿದೆ.
ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2028ರವರೆಗೆ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ಸರ್ಕಾರ ನೀಡಲಿದೆ. ಇದಲ್ಲದೇ ಇನ್ನೂ ಹಲವು ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಮೋದಿ ಸರ್ಕಾರವು ಹಲವು ಯೋಜನೆಗಳಿಗೆ ಹಸಿರು ನಿಶಾನೆ ತೋರಿತು. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಮತ್ತು ಇತರ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಜುಲೈ 2024 ರಿಂದ ಡಿಸೆಂಬರ್ 2028 ರವರೆಗೆ ಉಚಿತ ಬಲವರ್ಧಿತ ಅಕ್ಕಿಯ ಪೂರೈಕೆಯನ್ನು ಮುಂದುವರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವಿವರಿಸಿದರು.
ಗರೀಬ್ ಕಲ್ಯಾಣ್ ಅನ್ನ ಯೋಜನೆ ಮತ್ತು ಇತರ ಕಲ್ಯಾಣ ಯೋಜನೆಗಳಾದ ಮಧ್ಯಾಹ್ನದ ಊಟ, ಉಚಿತ ಪಡಿತರ ಯೋಜನೆ, ಪಿಎಂ ಪೋಶಣ್ ಯೋಜನೆಗಳಂತಹ ಎಲ್ಲಾ ಯೋಜನೆಗಳ ಅಡಿಯಲ್ಲಿ ಅಕ್ಕಿಯ ಪೂರೈಕೆಯನ್ನು ಜುಲೈ 2024 ರಿಂದ ಡಿಸೆಂಬರ್ 2028 ರವರೆಗೆ ಪ್ರಧಾನಿ ನರೇಂದ್ರ ಮೋದಿಯವರು ಮುಂದುವರಿಸಿದ್ದಾರೆ.
ಇದರ ಸಂಪೂರ್ಣ ವೆಚ್ಚ ಸುಮಾರು 17,082 ಕೋಟಿ ಆಗಲಿದ್ದು, ಇದನ್ನು ಕೇಂದ್ರ ಸರಕಾರವೇ ಭರಿಸಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು. ಅಭಿವೃದ್ಧಿ ಮತ್ತು ಪೌಷ್ಟಿಕಾಂಶವನ್ನು ಉತ್ತೇಜಿಸುವುದು ಈ ಉಪಕ್ರಮದ ಉದ್ದೇಶವಾಗಿದೆ.

