ನವದೆಹಲಿ : ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಳಿಕ ಮಿತ್ರರಾಷ್ಟ್ರವೆಂದು ಹೇಳುತ್ತಿದ್ದ ಟರ್ಕಿಯ ದ್ರೋಹ ಬಯಲಾಗಿದೆ. ಅಗತ್ಯ ಹಾಗೂ ಸಂಕಷ್ಟದ ಸಂದರ್ಭಗಳಲ್ಲಿ ಭಾರತದಿಂದ ಸಹಾಯ ಪಡೆದುಕೊಂಡಿದ್ದ ಟರ್ಕಿ ದೇಶವು ಭಾರತದ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದೆ. ಆಪರೇಷನ್ ಸಿಂಧೂರ್ ವೇಳೆ ಟರ್ಕಿ ಪಾಕಿಸ್ತಾನಕ್ಕೆ ಬೆಂಬಲಿಸಿದೆ.
ಸಾಲದಕ್ಕೆ ಭಾರತದ ಮೇಲೆ ದಾಳಿ ಮಾಡಲು ಪಾಕ್ಗೆ ಡ್ರೋನ್ ಕೊಟ್ಟಿದೆ ಎನ್ನುವ ಅಂಶ ಬಯಲಿಗೆ ಬಂದಿದೆ. ಇದರ ಬೆನ್ನಲ್ಲೇ ಇದೀಗ ಭಾರತ, ಸಹ ಟರ್ಕಿಗೆ ಬಿಸಿ ಮುಟ್ಟಿಸಲು ಮುಂದಾಗಿದ್ದು, ಇದೀಗ ಸೆಲೆಬಿ ಏರ್ಪೋರ್ಟ್ ಸರ್ವೀಸಸ್ಗೆ ಭದ್ರತಾ ಅನುಮತಿಯನ್ನು ರದ್ದುಗೊಳಿಸಲಾಗಿದೆ. ಈ ಸಂಬಂಧ ಭಾರೀಯ ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ ಅಧಿಕೃತ ಆದೇಶ ಹೊರಡಿಸಿದೆ.
ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಸೆಲೆಬಿ ಏರ್ಪೋರ್ಟ್ ಸರ್ವೀಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ಗೆ ನೀಡಲಾಗಿದ್ದ ಭದ್ರತಾ ಅನುಮತಿಯನ್ನು ರದ್ದುಗೊಳಿಸಿ ತಕ್ಷಣದಿಂದ ಜಾರಿಗೆ ಬರುವಂತೆ ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ ಇಂದು (ಮೇ 15) ಆದೇಶ ಹೊರಡಿಸಿದೆ. ಈ ಮೂಲಕ ಟರ್ಕಿಗೆ ನರೇಂದ್ರ ಮೋದಿ ಸರ್ಕಾರ ಮತ್ತೊಂದು ಶಾಕ್ ಕೊಟ್ಟಿದೆ.

