ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದ ವ್ಯಾಪ್ತಿಯ ಮೀಣಂ ಅರಣ್ಯ ಪ್ರದೇಶದಲ್ಲಿ ಹುಲಿಗಳ ಸಾವು ಪ್ರಕರಣ ಹಸಿರಾಗಿರುವಾಗಲೇ ಇದೀಗ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು ಸುಮಾರು 25ಕ್ಕೂ ಹೆಚ್ಚು ಕೋತಿಗಳ ಮಾರಣಹೋಮ ಮಾಡಲಾಗಿದೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಕಂದೇಗಾಲ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಂಡಿಪುರ ಬಫರ್ ಜೋನ್ ವಲಯದಲ್ಲಿ ಸುಮಾರು 25 ಕ್ಕೂ ಹೆಚ್ಚು ಕೋತಿಗಳ ಮಾರಣಹೋಮ ನಡೆದಿದ್ದು, ಕೋತಿಗಳ ಕಾಟಕ್ಕೆ ಬೇಸತ್ತು ವಿಷ ಹಾಕಿ ಕೊಂದಿರುವ ಶಂಕೆ ವ್ಯಕ್ತವಾಗಿದೆ.
ವಿಷಹಾಕಿ ಸತ್ತ ಕೋತಿಗಳನ್ನು ಚೀಲಕ್ಕೆ ತುಂಬಿಕೊಂಡು ಬಂದು ಕಿಡಿಗೇಡಿಗಳು ಬಿಸಾಡಿ ಹೋಗಿದ್ದಾರೆ. ಕಂದೇಗಾಲದ ಪಾರ್ವತಿ ಬೆಟ್ಟದ ಬಳಿ ಸತ್ತ ಕೋತಿಗಳ ಬಿಸಾಕಿದ್ದು ಸತ್ತಿಬಿದ್ದಿರುವ ಕೋತಿಗಳನ್ನ ಕಂಡ ಸ್ಥಳೀಯರು ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ಕೊಟ್ಟಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

