ನವದೆಹಲಿ: ಮಲೆನಾಡು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮನವಿ ಮಾಡಿದ್ದಾರೆ.
ಇಂದು ಸಂಸತ್ತಿನ ಶೂನ್ಯ ವೇಳೆಯಲ್ಲಿ ವಿಷಯವನ್ನು ಉತ್ಥಾಪಿಸಿದ ಅವರು, “ಮಲೆನಾಡಿನ ಅಡಿಕೆ ರೈತರು ಬೆಲೆ, ಮಾರುಕಟ್ಟೆ ಹಾಗೂ ಉತ್ಪಾದನಾ ವೆಚ್ಚದ ಏರಿಳಿತದಿಂದ ತೀವ್ರ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ತಕ್ಷಣದ ಹಸ್ತಕ್ಷೇಪ ಮಾಡಬೇಕು” ಎಂದು ಬೇಡಿಕೆ ಮಂಡಿಸಿದರು.
ಅಡಿಕೆ ಬೆಳೆಗಾರರ ಬದುಕು ಉಳಿಸಲು ಮತ್ತು ಮಾರುಕಟ್ಟೆಯಲ್ಲಿ ಸ್ಥಿರತೆ ತರಲು ಸಮಗ್ರ ಕ್ರಮಗಳ ಅವಶ್ಯಕತೆ ಇದೆ ಎಂದು ಅವರು ಮುಂದೆಯೂ ಒತ್ತಿ ಹೇಳಿದ್ದಾರೆ.

